ಒಣಗುತ್ತಿರುವ ಭತ್ತದ ಗದ್ದೆಗಳು; ಜಲಸಂಪನ್ಮೂಲ ಅಧಿಕಾರಿಗಳ ನಿರ್ಲಕ್ಷ


Team Udayavani, Mar 15, 2022, 7:33 PM IST

Untitled-1

ಗಂಗಾವತಿ : ಮುನಿರಾಬಾದ್ ಅವರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಗಿಡದ ಬೇರಿನ ಪರಿಣಾಮ ಬೊಂಗಾ ಬಿದ್ದು ಅಪಾರ ಪ್ರಮಾಣದಲ್ಲಿ ನೀರು ನದಿಯ ಪಾಲಾಗಿದೆ .ಸಮರೋಪಾದಿಯಲ್ಲಿ ಕಾಲುವೆಯ ಪುನರ್ ನಿರ್ಮಾಣ ಕಾರ್ಯ ನಡೆದಿದ್ದು ಕಳೆದ 2ದಿನಗಳ ಹಿಂದೆ ಕಾಲುವೆಗೆ ನೀರನ್ನು ಹರಿಸಲಾಗುತ್ತಿದೆ .

ರಾಯಚೂರುವರೆಗೆ ನೀರು ಮುಟ್ಟುವ ತನಕ ಉಪ ಕಾಲುವೆಯ ಗೇಟ್ ಗಳನ್ನು ಎತ್ತಲಾಗುವುದಿಲ್ಲ ಎಂದು ಜಲಸಂಪನ್ಮೂಲ ಇಲಾಖೆ ಸ್ಪಷ್ಟಪಡಿಸಿದೆ .ಇದರಿಂದಾಗಿ ಕೊಪ್ಪಳ ಗಂಗಾವತಿ ಕಾರಟಗಿ ಸಿಂಧನೂರು ಭಾಗದಲ್ಲಿ ನಾಟಿ ಮಾಡಿದ ಭತ್ತದ ಗದ್ದೆ ಒಣಗುವ ಸ್ಥಿತಿ ಉಂಟಾಗಿದೆ .ಈ ಮಧ್ಯೆ ಐವತ್ತೊಂದನೇ ವಿತರಣಾ ಕಾಲುವೆ ಗೇಟನ್ನು ಕೆಲವು ರೈತರು ಸ್ವತಃ ತಾವೇ ಹೋಗಿ ಓಪನ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ .

ಐವತ್ತು ನೇ ವಿತರಣಾ ಕಾಲುವೆ ಗೇಟ್ ಓಪನ್ ಆಗಿರುವುದರಿಂದ ರಾಯಚೂರಿಗೆ ನೀರು ತಲುಪುವುದು ಇನ್ನೂ ವಿಳಂಬವಾಗುವ ಸಾಧ್ಯತೆಯಿದೆ .ಆದ್ದರಿಂದ ಮೇಲ್ಭಾಗದ ಗದ್ದೆಗಳು ಬಿಸಿಲಿನ ತಾಪಕ್ಕೆ ಒಣ ಭೂಮಿಯಲ್ಲಿ ಬಿರುಕು ಕಂಡು ಬರುತ್ತಿದೆ .ಭತ್ತದ ತೆನೆಕಟ್ಟುವ ಹಂತದಲ್ಲಿರುವುದರಿಂದ ನೀರು ಅವಶ್ಯಕತೆಯಿದೆ .ಮಧ್ಯ ಭಾಗದಲ್ಲಿ ರೈತರು ಉಪ ಕಾಲುವೆಯ ಗೇಟ್ ಗಳನ್ನು ಓಪನ್ ಮಾಡುವುದರಿಂದ ರಾಯಚೂರಿಗೆ ನೀರು ತಲುಪುವುದಿಲ್ಲ ಆದ್ದರಿಂದ ಜಲಸಂಪನ್ಮೂಲ ಇಲಾಖೆ ಕೂಡಲೇ ಕ್ರಮ ಕೈಗೊಂಡು ಮೇಲ್ಭಾಗದಿಂದ ಎಲ್ಲ ಉಪಕಾಲುವೆಗಳಿಗೆ ಹಂತಹಂತವಾಗಿ ಓಪನ್ ಮಾಡುವ ಮೂಲಕ ಒಣಗುತ್ತಿರುವ ಭತ್ತದ ಗದ್ದೆಯನ್ನು ಉಳಿಸ ಬೇಕೆಂದು ಗಂಗಾವತಿ ಕಾರಟಗಿ ಸಿಂಧನೂರು ಭಾಗದ ರೈತರು ಜಲಸಂಪನ್ಮೂಲ ಇಲಾಖೆಯವರಿಗೆ ಮನವಿ ಮಾಡಿದ್ದಾರೆ .

ಅಧಿಕ ಹಣ ಖರ್ಚು ಮಾಡಿ ಭತ್ತವನ್ನು ನಾಟಿ ಮಾಡಿದ ರೈತರು ಹಂಗಾಮಿನಲ್ಲಿ   ಮುನಿರಾಬಾದ್ ಪವರ್  ಹೌಸ್  ಹತ್ತಿರ ಹಾಗೂ ಗಂಗಾವತಿ ತಾಲೂಕಿನ ಕೇಸರಹಟ್ಟಿ ಹತ್ತಿರ 2 ಬಾರಿ ಕಾಲುವೆಯಲ್ಲಿ ಬಿರುಕು ಕಾಣಿಸಿಕೊಂಡು 5-6 ದಿನಗಳ ಕಾಲ ನೀರು ಇಲ್ಲದೆ ಭತ್ತದ ಗದ್ದೆಗಳು ಒಣಗಿವೆ ಪುನಃ ಈಗ ಉಪ  ಕಾಲುವೆಗಳಲ್ಲಿ ನೀರು ಇಲ್ಲದ ಕಾರಣ  ಭತ್ತದ ಗದ್ದೆಗಳು ಒಣಗುತ್ತಿವೆ ಅಧಿಕಾರಿಗಳು ಸಮರೋಪಾದಿಯಲ್ಲಿ ತಾನೂ ಮೇಲೆ ಕರ್ತವ್ಯ ನಿರ್ವಹಿಸಿ ಪೊಲೀಸ್ ಇಲಾಖೆ ಸಹಾಯದಿಂದ ಉಪ ಕಾಲುವೆಗಳಿಗೆ ನೀರು ಹರಿಸುವಂತೆ ರೈತರು ಒತ್ತಾಯಿಸಿದ್ದಾರೆ .

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.