ಪೋಷಕರ ನಿರೀಕ್ಷೆ ಹುಸಿಗೊಳಿಸದಿರಿ
Team Udayavani, Mar 16, 2022, 4:45 PM IST
ದಾವಣಗೆರೆ: ಪೋಷಕರ ನಿರೀಕ್ಷೆ, ಅಪೇಕ್ಷೆಗೆ ಅನುಗುಣವಾಗಿ ಉತ್ತಮ ಅಭ್ಯಾಸದ ಮೂಲಕ ಉತ್ತುಂಗಕ್ಕೇರಬೇಕು ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಹೇಳಿದರು. ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು. ಪೋಷಕರು ತಮ್ಮ ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮ ಅಂಕ ಪಡೆದು ಉನ್ನತ ಮಟ್ಟದ ಸಾಧನೆ ಮಾಡಿ ಉತ್ತುಂಗಕ್ಕೆ ಏರಬೇಕು ಎಂಬ ಆಕಾಂಕ್ಷೆಯೊಂದಿಗೆ ತುಂಬಾ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಅದನ್ನು ಈಡೇರಿಸುವತ್ತ ಎಲ್ಲ ಮಕ್ಕಳು ಗಮನ ನೀಡುವುದು ಮಾತ್ರವಲ್ಲ ಸಾಧಿಸಿ ತೋರಿಸಬೇಕು ಎಂದರು.
ಮಕ್ಕಳು ತಂದೆ-ತಾಯಿಗಳ ಅಪೇಕ್ಷೆಗೆ ಅನುಗುಣವಾಗಿ ಯಾವುದೇ ಅಡ್ಡ ದಾರಿ ಹಿಡಿಯದೆ ಓದಿನ ಕಡೆ ಹೆಚ್ಚಿನ ಆದ್ಯತೆ, ಮಾನ್ಯತೆ ಕೊಟ್ಟು ಸ್ಪಂದಿಸಬೇಕಾಗಿರುವುದು ಆದ್ಯ ಕರ್ತವ್ಯ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳು ಯಾವುದೇ ರೀತಿಯ ಉಡಾಫೆ, ನಿರ್ಲಕ್ಷ ಮಾಡದೆ ಮುಂದಿನ ಭವ್ಯ ಭವಿಷ್ಯದ ನಾಂದಿ ಹಾಡುವ, ಭದ್ರವಾದ ಬುನಾದಿಗೆ ಪೂರಕವಾದ ಸಂದರ್ಭವನ್ನು ಗಂಭೀರವಾಗಿ ಪರಿಗಣಿಸಬೇಕು. ಚೆನ್ನಾಗಿ ವ್ಯಾಸಂಗ ಮಾಡಬೇಕು ಎಂದು ಸಲಹೆ ನೀಡಿದರು.
ಕಲಾಕುಂಚ ಮಹಿಳಾ ಸಂಸ್ಥೆಯ ಸಂಸ್ಥಾಪಕಿ ಜ್ಯೋತಿ ಗಣೇಶ್ ಶೆಣೈ, ಹೇಮಾ ಶಾಂತಪ್ಪ ಪೂಜಾರಿ, ಗಿರಿಜಮ್ಮ ನಾಗರಾಜ್, ಶಾರದಮ್ಮ ಶಿವನಪ್ಪ ಇತರರು ಇದ್ದರು. “ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತಮ ಫಲಿತಾಂಶದೊಂದಿಗೆ ವ್ಯಾಸಂಗ ಮಾಡಿದ ಶಾಲೆಗೆ, ಪೋಷಕರಿಗೆ, ಹುಟ್ಟಿದ ಊರಿಗೆ ಕೀರ್ತಿ ತಂದು ಕೊಡುತ್ತೇವೆ’ ಎಂದು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ