ಅಪ್ಪು ಅಭಿಮಾನಿಯಿಂದ ನೇತ್ರ ಶಸ್ತ್ರ ಚಿಕಿತ್ಸೆ

ಅಭಿಮಾನಿಗಳಿಗಾಗಿ ಜೇಮ್ಸ್‌ ಚಿತ್ರ ವೀಕ್ಷಿಸಲು 200 ಟಿಕೆಟ್‌ ಖರೀದಿ

Team Udayavani, Mar 17, 2022, 12:12 PM IST

7

ಹುಬ್ಬಳ್ಳಿ: ಪುನೀತ ರಾಜಕುಮಾರ ಅವರ ಕಟ್ಟಾ ಅಭಿಮಾನಿ ರಾಘವೇಂದ್ರ ವದ್ದಿ ಪುನೀತ ರಾಜಕುಮಾರ ಅವರ ಜನ್ಮದಿನ ಹಾಗೂ ಕೊನೆ ಚಿತ್ರ ಜೇಮ್ಸ್‌ ಚಿತ್ರದ ಪ್ರಯುಕ್ತ ನೂರು ಜನರನ್ನು ಗುರುತಿಸಿ ಅವರ ಕಣ್ಣಿನ ದೃಷ್ಟಿ ಸರಿಪಡಿಸಲು ಶಸ್ತ್ರ ಚಿಕಿತ್ಸೆ ಮಾಡಿಸಿ ಅಪ್ಪು ಅವರ ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದಾನೆ.

ದೃಷ್ಟಿ ಸರಿಯಾದ ನಂತರ ತನ್ನ ಅಪ್ಪುವಿನ ಚಿತ್ರ ನೋಡಬೇಕು ಎನ್ನುವ ಕಾರಣಕ್ಕೆ ಈ ನೂರು ಜನರಿಗಾಗಿ ಟಿಕೆಟ್‌ ಪಡೆದಿದ್ದಾರೆ. ಚಿತ್ರ ವೀಕ್ಷಿಸಿದ ನಂತರ ಅಪ್ಪು ಹೆಸರಲ್ಲಿ ಒಂದು ಸಸಿ ನೀಡಿ ಮನೆಯ ಮುಂದೆ ಬೆಳೆಸಬೇಕೆನ್ನುವ ಪರಿಸರ ಪ್ರಜ್ಞೆ ಮೂಡಿಸುವ ಕಾರ್ಯ ಹಮ್ಮಿಕೊಂಡಿದ್ದಾರೆ.

ಅಪ್ಪು ಅವರ ಭಾವಚಿತ್ರ ಮನೆಯಲ್ಲಿಟ್ಟು ಅವರ ಮಾರ್ಗದಲ್ಲಿ ನಡೆಯುವಂತೆ ತಿಳಿಸುವ ಕೆಲಸ ಮಾಡಲಿದ್ದಾರೆ. 200 ಟಿಕೆಟ್‌ಗಳನ್ನು ಅವರ ಅಭಿಮಾನಿಗಳಿಗೆ ಉಚಿತವಾಗಿ ಹಂಚಲಿದ್ದಾರೆ. ಅಪ್ಸರಾ ಚಿತ್ರ ಮಂದಿರಕ್ಕೆ ಜೇಮ್ಸ್‌ ವೀಕ್ಷಿಸಲು ಬರುವ ಪ್ರತಿಯೊಬ್ಬರಿಗೆ ಉಪ್ಪಿಟ್ಟು-ಸಿರಾ ವಿತರಿಸಲಿದ್ದಾರೆ. ಅಪ್ಪು ಅವರಿಗೆ ಚಿಕನ್‌ ಬಿರಿಯಾನಿ ಇಷ್ಟ ಎನ್ನುವ ಕಾರಣಕ್ಕೆ ಮಧ್ಯಾಹ್ನ ಚಿಕನ್‌ ಬಿರಿಯಾನಿ ಹಂಚಲಿದ್ದಾರೆ. ಈಗಾಗಲೇ ಸ್ವಂತ ಖರ್ಚಿನಿಂದ ಚಿತ್ರ ಮಂದಿರವನ್ನು ಅಪ್ಪು ಅವರ ಚಿತ್ರ ಇರುವ ಪರಪರಿಗಳಿಂದ ಶೃಂಗರಿಸಿದ್ದಾರೆ. ಇಲ್ಲಿನ ಅಂಚಟಗೇರಿ ನಿವಾಸಿಯಾಗಿರುವ ರಾಘು ಜೀವನಕ್ಕೆ ಸಣ್ಣದೊಂದು ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ಬರುವ ಆದಾಯದಲ್ಲಿ ಒಂದಿಷ್ಟು ದೇವರಿಗೆ ತೆಗೆದಿಡುವ ರೀತಿಯಲ್ಲಿ ಅಪ್ಪು ಅವರ ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕ್ಕೆ ಬಳಸುವುದನ್ನು ರೂಢಿಸಿಕೊಂಡಿದ್ದಾರೆ. ಇದೀಗ ಸ್ನೇಹಿತರಿಂದ ಸಾಲ ಮಾಡಿ ಕಡಿಮೆ ಅವಧಿಯಲ್ಲಿ 100 ಜನರಿಗೆ ಕಣ್ಣಿನ ಪೊರೆ ಚಿಕಿತ್ಸೆ ಕಾರ್ಯ ಪೂರ್ಣಗೊಳಿಸಿದ್ದಾರೆ.

ಅಪ್ಪು ಅವರ ಅಭಿಮಾನಕ್ಕಾಗಿ ಜೈ ರಾಜವಂಶ ಎನ್ನುವ ಸಂಸ್ಥೆ ಆರಂಭಿಸಿ ವಿವಿಧ ಸಾಮಾಜಿಕ ಕಾರ್ಯ ಮಾಡುತ್ತಿದ್ದಾರೆ. ಎದೆ ಮೇಲೆ ಅಪ್ಪು ಅವರ ಭಾವಚಿತ್ರ ಟ್ಯಾಟೋ ಹಾಕಿಸಿಕೊಂಡಿದ್ದಾರೆ. ಯುವರತ್ನ ಚಿತ್ರ ಬಿಡುಗಡೆ ಸಂದರ್ಭದಲ್ಲಿ 50 ವಿಕಲಚೇತನರಿಗೆ ಕೃತಕ ಕಾಲು ನೀಡಿದ್ದರು. ರಾಜಕುಮಾರ ಚಿತ್ರ ಬಿಡುಗಡೆ ಸಂದರ್ಭದಲ್ಲಿ ಪುನೀತ ರಾಜಕುಮಾರ ಅವರ ಕಟೌಟ್‌ಗೆ 100 ಲೀಟರ್‌ ಹಾಲು ಸುರಿದು ಅಭಿಮಾನ ವ್ಯಕ್ತಪಡಿಸಿದ್ದರು. ಇಂತಹ ಕಾರ್ಯಕ್ಕೆ ಪುನೀತ ಅಸಮಾಧಾನ ವ್ಯಕ್ತಪಡಿಸಿ ಹಾಲು ಸುರಿಯುವ ಬದಲು ಯಾರಿಗಾದರೂ ದಾನ ಮಾಡಿ ಎಂದು ಮನವಿ ಮಾಡಿದ್ದರು. ಹುಬ್ಬಳ್ಳಿಗೆ ಬಂದ ಸಂದರ್ಭದಲ್ಲಿ ಅವರ ನಿವಾಸಕ್ಕೆ ಹೋಗಿ ಮನೆಯವರೆಲ್ಲರನ್ನು ಭೇಟಿಯಾಗಿದ್ದರು. ಇಂತಹ ಸರಳತೆಯಿಂದ ಪುನೀತ ಪ್ರತಿಯೊಬ್ಬರ ಮನೆ ಮಗನಾಗಿದ್ದಾರೆ ಎನ್ನುತ್ತಾರೆ ರಾಘು ವದ್ದಿ.

ಅಪ್ಪು ಹಾಗೂ ಅವರ ಕುಟುಂಬದವರು ನೇತ್ರದಾನಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಹಲೋಕ ತ್ಯಜಿಸಿದ ನಂತರ ನಾಲ್ವರ ಬದುಕಿಗೆ ಬೆಳಕಾಗಿದ್ದಾರೆ. ಅವರು ತೋರಿಸಿರುವ ಸಾಮಾಜಿಕ ಕಾಳಜಿಯ ಮಾರ್ಗದಲ್ಲಿ ನಡೆಯಬೇಕು ಎನ್ನುವ ಕಾರಣಕ್ಕೆ ದುಡಿಯುವ ಹಣದಲ್ಲಿ ಒಂದಿಷ್ಟನ್ನು ಅವರ ಹೆಸರಲ್ಲಿ ತೆಗೆದಿಟ್ಟು ಈ ಕೆಲಸ ಮಾಡುತ್ತಿದ್ದೇನೆ.

ರಾಘು ವದ್ದಿ, ಅಪ್ಪು ಅಭಿಮಾನಿ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.