ಪೋಲ್ಯಾಂಡ್ ನ ಕರೋಲಿನಾಗೆ ವಿಶ್ವಸುಂದರಿ ಕಿರೀಟ, ಭಾರತೀಯ ಮೂಲದ ಸೈನಿ ರನ್ನರ್ ಅಪ್

ಭಾರತದ ಮಾನುಶಿ ಚಿಲ್ಲರ್ 2017ರಲ್ಲಿ ವಿಶ್ವಸುಂದರಿ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದರು.

Team Udayavani, Mar 17, 2022, 1:37 PM IST

ಪೋಲ್ಯಾಂಡ್ ನ ಕರೋಲಿನಾಗೆ ವಿಶ್ವಸುಂದರಿ ಕಿರೀಟ, ಭಾರತೀಯ ಮೂಲದ ಸೈನಿ ರನ್ನರ್ ಅಪ್

ಪೋರ್ಟ್ ರಿಕೋ: ಪೋಲ್ಯಾಂಡ್ ನ ಕರೋಲಿನಾ ಬಿಲಾವಸ್ಕ್ 2021ನೇ ಸಾಲಿನ ವಿಶ್ವಸುಂದರಿ ಕಿರೀಟವನ್ನು ಶುಕ್ರವಾರ (ಮಾರ್ಚ್ 17) ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಪೋರ್ಟೊ ರಿಕೋದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2019ನೇ ಸಾಲಿನ ವಿಶ್ವಸುಂದರಿ ಜಮೈಕಾದ ಟೋನಿ ಆ್ಯನ್ ಸಿಂಗ್ ಅವರು ಪೋಲ್ಯಾಂಡ್ ನ ಕರೋಲಿನಾ ಬಿಲಾವಸ್ಕ್ ಗೆ ಕಿರೀಟ ತೊಡಿಸಿದರು.

ಇದನ್ನೂ ಓದಿ:ನರಮೇಧ:ರಂಗಮಂದಿರದ ಮೇಲೆ ರಷ್ಯಾ ಬಾಂಬ್ ದಾಳಿ, ಮಕ್ಕಳು ಸೇರಿ ಸಾವಿರಕ್ಕೂ ಅಧಿಕ ಮಂದಿ ಸಾವು?

ವಿಶ್ವಸುಂದರಿ ಸ್ಪರ್ಧೆಯಲ್ಲಿ ಭಾರತೀಯ ಮೂಲದ ಅಮೆರಿಕ ಪ್ರಜೆ ಶ್ರೀ ಸೈನಿ ಮೊದಲ ರನ್ನರ್ ಅಪ್ ಎನಿಸಿಕೊಂಡಿದ್ದು, ಕೋಟ್ ಡಿ ಐವರಿಯ ಒಲಿವಿಯಾ ಯೇಸ್ ಎರಡನೇ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾಗಿರುವುದಾಗಿ ವರದಿ ತಿಳಿಸಿದೆ.

ಮಿಸ್ ವರ್ಲ್ಡ್ ಟ್ವೀಟರ್ ಖಾತೆಯಲ್ಲಿ ಈ ಸುದ್ದಿಯನ್ನು ಅಧಿಕೃತವಾಗಿ ಘೋಷಿಸಲಾಗಿದ್ದು, ನಮ್ಮ ನೂತನ ವಿಶ್ವಸುಂದರಿಯಾಗಿ ಪೋಲ್ಯಾಂಡ್ ನ ಕರೋಲಿನಾ ಬಿಲಾವಸ್ಕ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಅಮೆರಿಕದ(ಭಾರತೀಯ ಮೂಲ) ಶ್ರೀ ಸೈನಿ ಮೊದಲ ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದು, ಕೋಟ್ ಡಿ ಐವರಿಯ ಒಲಿವಿಯಾ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ ಎಂದು ತಿಳಿಸಿದೆ.

ಏತನ್ಮಧ್ಯೆ ಭಾರತವನ್ನು ಪ್ರತಿನಿಧಿಸಿದ್ದ ಮಾನಸ ವಾರಣಾಸಿ ಟಾಪ್ 13ರಲ್ಲಿ ಸ್ಥಾನ ಪಡೆದಿದ್ದು, ಭಾರತದ ಮಾನುಶಿ ಚಿಲ್ಲರ್ 2017ರಲ್ಲಿ ವಿಶ್ವಸುಂದರಿ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದರು. ವಿಶ್ವಸುಂದರಿ ಸ್ಪರ್ಧೆಯನ್ನು 2021ರ ಡಿಸೆಂಬರ್ ನಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಭಾರತದ ಮಾನಸ ವಾರಣಾಸಿ ಸೇರಿದಂತೆ ಕೆಲವು ಸ್ಪರ್ಧಿಗಳಿಗೆ ಕೋವಿಡ್ ದೃಢಪಟ್ಟಿದ್ದರಿಂದ ಸ್ಪರ್ಧೆಯನ್ನು ಮುಂದೂಡಲಾಗಿತ್ತು.

ಯಾರೀಕೆ ಶ್ರೀ ಸೈನಿ:

ಶ್ರೀ ಸೈನಿ 1996ರ ಜನವರಿ 6ರಂದು ಪಂಜಾಬ್ ನ ಲುಧಿಯಾನಾದಲ್ಲಿ ಜನಿಸಿದ್ದರು. ನಂತರ ಈಕೆ ತನ್ನ 5ನೇ ವಯಸ್ಸಿನಿಂದಲೇ ಅಮೆರಿಕದಲ್ಲಿ ವಾಸ್ತವ್ಯ. ಎಳೆಯ ವಯಸ್ಸಿನಲ್ಲಿಯೇ ಬಡತನ ಅನುಭವಿಸಿದ್ದ ಸೈನಿ, ಅಂದಿನಿಂದ ಪ್ರತಿಯೊಬ್ಬರು ತಮ್ಮಿಂದಾದ ಸಹಾಯವನ್ನು ಸಮಾಜಕ್ಕೆ ನೀಡುವ ಹೊಣೆಗಾರಿಕೆ ಹೊರಬೇಕು ಎಂದು ಪ್ರತಿಪಾದಿಸುತ್ತಿರುವುದಾಗಿ ವರದಿ ತಿಳಿಸಿದೆ.

ಅಮೆರಿಕದ ಮೊಸೆಸ್ ಲೇಕ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಸೈನಿಯ ಮುಖ ಸುಟ್ಟು ಹೋಗಿತ್ತು. ಅಷ್ಟೇ ಅಲ್ಲ ಸೈನಿಯ ಹೃದಯ ಬಡಿತ ಕೇವಲ ನಿಮಿಷಕ್ಕೆ 20ರಷ್ಟಿತ್ತು. ಈ ಸಂದರ್ಭದಲ್ಲಿ ವೈದ್ಯರು ನೀನು ಇನ್ನು ಮುಂದೆ ನೃತ್ಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿಬಿಟ್ಟಿದ್ದರು. ಹಾಗೂ ಸುಟ್ಟು ಹೋದ ಮುಖ ಗುಣಮುಖವಾಗಿ, ಮೊದಲಿನಂತಾಗಲು ಒಂದು ವರ್ಷ ಬೇಕು ಎಂದಿದ್ದರು. ಆದರೆ ಇದ್ಯಾವುದಕ್ಕೂ ಹೆದರದ ಸೈನಿ ಎರಡು ವಾರಗಳ ನಂತರ ಡ್ಯಾನ್ಸ್ ತರಗತಿಗೆ ಹಾಜರಾಗಿದ್ದರು. ಸೈನಿ ಮಿಸ್ ವರ್ಲ್ಡ್ ಅಮೆರಿಕ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.