ಸಮೃದ್ಧ ಕೃಷಿ ಭೂಮಿಯಲ್ಲಿ ಸವಳು-ಜವಳಿನ ಚಿಂತೆ

ಕಾಡಾ ವ್ಯಾಪ್ತಿಯಲ್ಲಿ 46251 ಹೆಕ್ಟೇರ್‌ ಭೂಮಿ ಸವಳು-ಜವಳು ಬಾಧಿತ; ನಿವಾರಣೆಗೆ ಬೇಕಿದೆ 231 ಕೊಟಿ ರೂ.

Team Udayavani, Mar 17, 2022, 4:33 PM IST

17

ಬೆಳಗಾವಿ: ಮಲಪ್ರಭಾ ಮತ್ತು ಘಟಪ್ರಭಾ ಅಚ್ಚುಕಟ್ಟು ಯೋಜನೆಗಳ ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ ಪ್ರಾಧಿಕಾರ (ಕಾಡಾ) ದಲ್ಲಿ ಹಲವಾರು ವರ್ಷಗಳಿಂದ ಸವಳು ಜವಳು ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಪ್ರತಿ ವರ್ಷ ನೀರಾವರಿ ಪ್ರದೇಶ ಹೆಚ್ಚಿಗೆಯಾಗುತ್ತಿರುವಂತೆ ಸವಳು-ಜವಳು ಸಮಸ್ಯೆ ಪ್ರಮಾಣವೂ ಅಧಿಕವಾಗುತ್ತಿದೆ. ಪರಿಣಾಮ ಫಲವತ್ತಾದ ಭೂಮಿ ಇದ್ದರೂ ಅದರಲ್ಲಿ ಬೆಳೆ ತೆಗೆಯಲು ಸಾಧ್ಯವಾಗುತ್ತಿಲ್ಲ.

ಕೃಷ್ಣಾ, ಘಟಪ್ರಭಾ, ಹಿರಣ್ಯಕೇಶಿ. ಮಲಪ್ರಭಾ, ವೇದಗಂಗಾ, ದೂಧಗಂಗಾ ನದಿಗಳ ವ್ಯಾಪ್ತಿಯಲ್ಲಿ ಈ ಸವಳು-ಜವಳಿನ ಸಮಸ್ಯೆ ಹಲವಾರು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ಪಕ್ಕದಲ್ಲೇ ನದಿ ಇದೆ ಎಂಬ ಕಾರಣಕ್ಕೆ ಹೆಚ್ಚಿನ ಲಾಭದ ಆಸೆಯಿಂದ ಅತಿಯಾದ ನೀರಿನ ಬಳಕೆ, ಬೆಳೆಗಳಿಗೆ ರಾಸಾಯನಿಕ ಸಿಂಪಡಿಕೆ ಇದಕ್ಕೆ ಮುಖ್ಯ ಕಾರಣ ಎಂಬುದು ಎಲ್ಲರಿಗೂ ಗೊತ್ತಿದ್ದರೂ ಯಾರೊಬ್ಬರೂ ಅದರ ಕಡಿವಾಣಕ್ಕೆ ಮುಂದಾಗುತ್ತಿಲ್ಲ. ಇದರಿಂದ ಫಲವತ್ತಾದ ಭೂಮಿ ಬರಡಾಗುತ್ತ ಹೋಗುತ್ತಿದೆ.

ಕಳೆದ ಕೆಲವು ವರ್ಷಗಳಿಂದ ಈ ಸವಳು-ಜವಳು ಸಮಸ್ಯೆ ನಿವಾರಣೆಗೆ ಸರಕಾರ ಮತ್ತು ರೈತರು ವಾರ್ಷಿಕವಾಗಿ ಲಕ್ಷಾಂತರ ಹಣ ವೆಚ್ಚಮಾಡುತ್ತಿದ್ದರೂ ಅದಕ್ಕೆ ಪರಿಹಾರ ಮಾತ್ರ ಕಾಣುತ್ತಿಲ್ಲ.

ಕೃಷಿ ಇಲಾಖೆ ಮತ್ತು ಕಾಡಾ ಇಲಾಖೆಯ ಮಾಹಿತಿಯ ಪ್ರಕಾರ ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ನೀರಾವರಿ ಪ್ರದೇಶದಲ್ಲಿ ಪ್ರತಿಶತ 25 ರಷ್ಟು ಹೆಚ್ಚಳವಾಗಿದೆ. ಇದರಲ್ಲಿ ಬಹುತೇಕ ಪಾಲು ಕಬ್ಬಿನ ಬೆಳೆಯ ಪ್ರದೇಶವಾಗಿದೆ ಎಂಬುದು ಗಮನಿಸಬೇಕಾದ ಅಂಶ. ಇದರ ಪರಿಣಾಮ ಬೆಳಗಾವಿ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸವಳು-ಜವಳಿನ ಪ್ರಮಾಣ 85 ಸಾವಿರ ಹೆಕ್ಟೇರ್‌ಗೆ ಏರಿಕೆಯಾಗಿದೆ.

ಸವಳು ಜವಳು ತೆಗೆಯುವಂತೆ ಕಾಡಾ ಇಲಾಖೆಗೆ ನಿರಂತರವಾಗಿ ಅರ್ಜಿಗಳು ಬರುತ್ತಿವೆ. ಈ ಸವಳು-ಜವಳು ತೆಗೆಯಲು ಪ್ರತಿ ಎಕರೆಗೆ 50 ಸಾವಿರ ರೂ. ಬೇಕು. ಆದರೆ ಅನುದಾನದ ಸಮಸ್ಯೆ ಎದುರಿಸುತ್ತಿರುವ ಕಾಡಾಕ್ಕೆ ರೈತರ ಅರ್ಜಿಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಹಣಕಾಸು ಸಮಸ್ಯೆ ರೈತರ ಜೊತೆಗೆ ಕಾಡಾ ಇಲಾಖೆಯನ್ನೂ ಕಟ್ಟಿಹಾಕಿದೆ.

2014 ರಿಂದ ಇಲ್ಲಿಯವರೆಗೆ ಘಟಪ್ರಭಾ, ಮಲಪ್ರಭಾ ಹಾಗೂ ಹಿಪ್ಪರಗಿ ಯೋಜನೆಗಳ ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 85 ಸಾವಿರ ಹೆಕ್ಟೇರ್‌ ಪ್ರದೇಶವನ್ನು ಸವಳು-ಜವಳು ಭಾದಿತ ಎಂದು ಗುರುತಿಸಲಾಗಿದ್ದು ಅದರಲ್ಲಿ ಇದುವರೆಗೆ 39,273 ಹೆಕ್ಟೇರ್‌ ಪ್ರದೇಶದಲ್ಲಿನ ಸವಳು-ಜವಳು ಸಮಸ್ಯೆ ನಿವಾರಣೆ ಮಾಡಲಾಗಿದೆ. ಇನ್ನೂ 46,251 ಹೆಕ್ಟೇರ್‌ ಬಾಕಿ ಉಳಿದಿದೆ. ಇದರ ಹೊರತಾಗಿ ಕೃಷ್ಣಾ ನದಿ ವ್ಯಾಪ್ತಿಯ ಹಿಪ್ಪರಗಿ ಜಲಾಶಯ ಯೋಜನೆಯಲ್ಲಿ ಹೊಸದಾಗಿ ಸವಳು-ಜವಳು ಬಾಧಿತ ಪ್ರದೇಶದ ಸಮೀಕ್ಷೆ ಮಾಡಬೇಕಿದೆ ಎಂಬುದು ಕಾಡಾ ಆಡಳಿತಾಧಿಕಾರಿ ಶಶಿಧರ ಕುರೇರ ಹೇಳಿಕೆ.

ಘಟಪ್ರಭಾ ಯೋಜನೆಯ ವ್ಯಾಪ್ತಿಯಲ್ಲಿ 45,551.44 ಹೆಕ್ಟೇರ್‌ ಹಾಗೂ ಮಲಪ್ರಭಾ ಯೋಜನೆಯ ವ್ಯಾಪ್ತಿಯಲ್ಲಿ 17,129 ಹೆಕ್ಟೇರ್‌ ಪ್ರದೇಶವನ್ನು ಸವಳು ಜವಳು ಭಾದಿತ ಪ್ರದೇಶ ಎಂದು ಗುರುತಿಸಲಾಗಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 28,372 ಹೆ. ಪ್ರದೇಶ ಸವಳು ಜವಳಿನಿಂದ ತೊಂದರೆಗೆ ಒಳಗಾಗಿದ್ದರೆ ಬಾಗಲಕೋಟೆ ಜಿಲ್ಲೆಯಲ್ಲಿ 17,179 ಹೆ ಪ್ರದೇಶ ಸವಳು ಜವಳಿಗೆ ತುತ್ತಾಗಿದೆ. ಅದೇ ರೀತಿ ಮಲಪ್ರಭಾ ಯೋಜನೆಯ ವ್ಯಾಪ್ತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 6,645 ಹೆ ಪ್ರದೇಶ, ಧಾರವಾಡ ಜಿಲ್ಲೆಯಲ್ಲಿ 4,408, ಗದಗ ಜಿಲ್ಲೆಯಲ್ಲಿ 2,846 ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ 3,230 ಹೆಕ್ಟೇರ್‌ ಪ್ರದೇಶ ಸವಳು ಜವಳಿನಿಂದ ಭಾದಿತವಾಗಿದೆ. ಕೃಷ್ಣಾ ನದಿ ವ್ಯಾಪ್ತಿಯಲ್ಲಿ ಇನ್ನೂ ಸಮಗ್ರ ಸಮೀಕ್ಷೆ ನಡೆಯಬೇಕಿದೆ.

ಬಾಕಿ ಉಳಿದಿರುವ 46,251 ಹೆಕ್ಟೇರ್‌ ಪ್ರದೇಶವನ್ನು ಸವಳು ಜವಳಿನಿಂದ ಮುಕ್ತಗೊಳಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಇದಕ್ಕೆ ಒಟ್ಟು 231 ಕೋಟಿ ರೂ ಗಳ ಅಗತ್ಯವಿದೆ. ಈ ವರ್ಷ ಲಭ್ಯವಿದ್ದ ಹಣದಲ್ಲಿ 1,300 ಹೆಕ್ಟೇರ್‌ ಪ್ರದೇಶವನ್ನು ಸವಳು ಜವಳಿನಿಂದ ಮುಕ್ತಗೊಳಿಸಲಾಗಿತ್ತು. ಅದರಂತೆ ಕಳೆದ ವರ್ಷ 1,700 ಹೆ. ಪ್ರದೇಶವನ್ನು ಸವಳು-ಜವಳು ಸಮಸ್ಯೆಯಿಂದ ನಿವಾರಣೆ ಮಾಡಲಾಗಿತ್ತು.

ಪ್ರಾಯೋಗಿಕ ಯೋಜನೆಗೆ ಚಿಂತನೆ: ಸವಳು-ಜವಳು ಸಮಸ್ಯೆ ನಿವಾರಣೆಯ ನಿಟ್ಟಿನಲ್ಲಿ ಸಮಗ್ರ ಹಾಗೂ ವೈಜ್ಞಾನಿಕ ವಿಶ್ಲೇಷಣೆಗೆ ಪ್ರಾಯೋಗಿಕ ಯೋಜನೆಯೊಂದನ್ನು ರೂಪಿಸಲಾಗಿದ್ದು ಇದಕ್ಕಾಗಿ ಜಲಸಂಪನ್ಮೂಲ ಸಚಿವರ ತವರು ಜಿಲ್ಲೆ ಬಾಗಲಕೋಟೆಯ ಇಂಗಳಗಿ ಹಾಗೂ ಯಡಹಳ್ಳಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಎರಡೂ ಗ್ರಾಮಗಳ ಸುಮಾರು ಎರಡು ಸಾವಿರ ಹೆಕ್ಟೇರ್‌ನಲ್ಲಿ ಕಾಡಾ ಹಾಗೂ ಧಾರವಾಡದಲ್ಲಿರುವ ನೆಲ ಮತ್ತು ಜಲ ನಿರ್ವಹಣಾ ಸಂಸ್ಥೆ (ವಾಲ್ಮಿ) ಸಹಯೋಗದಲ್ಲಿ ಸವಳು ಜವಳು ನಿವಾರಣೆಯ ಅಧ್ಯಯನ ಕೈಗೊಳ್ಳಲಾಗುವುದು. ಸವಳು-ಜವಳು ಉಂಟಾಗಲು ಕಾರಣಗಳೇನು ಎಂಬುದನ್ನು ವೈಜ್ಞಾನಿಕ ನೆಲೆಯಲ್ಲಿ ನೋಡಲಾಗುವುದು. ಒಟ್ಟಾರೆ ಇದರ ನಿರ್ವಹಣೆಯನ್ನು ಪರಿಣತ ಏಜೆನ್ಸಿಗೆ ಕೊಡಲಾಗುವುದು. ರೈತರಿಗೆ ನೆರವಾಗುವ ಈ ಉಪಕ್ರಮಕ್ಕೆ 25 ಲಕ್ಷ ಅನುದಾನ ಒದಗಿಸಲು ಸಚಿವರು ಅನುಮೋದನೆ ನೀಡಿದ್ದಾರೆ.

ಸವಳು-ಜವಳು ನಿವಾರಣೆ ಕಾಡಾ ಇಲಾಖೆಗೆ ಬಹು ದೊಡ್ಡ ಸವಾಲು. ಕಳೆದ ನಾಲ್ಕೈದು ವರ್ಷಗಳಲ್ಲಿ ಇದರ ಪ್ರಮಾಣದಲ್ಲಿ ಬಹಳ ಏರಿಕೆಯಾಗಿದೆ. ಸವಳು-ಜವಳು ನಿವಾರಣೆಗೆ ಕಾಡಾ ಇಲಾಖೆಯಿಂದ ವಾರ್ಷಿಕವಾಗಿ ಕೋಟ್ಯಾಂತರ ಹಣ ವೆಚ್ಚ ಮಾಡಲಾಗುತ್ತಿದೆ. ಮುಖ್ಯವಾಗಿ ರೈತರಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಅತಿಯಾದ ನೀರು ಹಾಗೂ ರಸಗೊಬ್ಬರ ಬಳಸದಂತೆ ತಿಳಿವಳಿಕೆ ಕೊಡಲಾಗುತ್ತಿದೆ.

ಶಶಿಧರ ಕುರೇರ (ಕಾಡಾ ಆಡಳಿತಾಧಿಕಾರಿ)

ಕಾಡಾ ಇಲಾಖೆಯಿಂದ ಸವಳು-ಜವಳು ಸಮಸ್ಯೆಗೆ ಪರಿಹಾರ ಸೇರಿದಂತೆ ಮಾಡಲು ಸಾಕಷ್ಟು ಕೆಲಸಗಳಿವೆ. ಅದರೆ ಎಲ್ಲದಕ್ಕೂ ಹಣಕಾಸಿನ ಸಮಸ್ಯೆ ಕಾಡುತ್ತಿದೆ. ಅದರಲ್ಲೂ ಸವಳು-ಜವಳು ಬಹಳ ಗಂಭೀರವಾದ ಸಮಸ್ಯೆ. ಹೊಲಗಳಿಗೆ ಅತಿಯಾದ ಪ್ರಮಾಣದಲ್ಲಿ ನೀರು ಬಳಕೆ ಮಾಡುತ್ತಿರುವುದರಿಂದ ಮತ್ತು ರಸಗೊಬ್ಬರದ ಬಳಕೆ ಸಹ ಹೆಚ್ಚಾಗಿರುವುದರಿಂದ ಸವಳು ಜವಳು ಸಮಸ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇದೆ. ಕಾಡಾದಿಂದಲೂ ಸಹ ಜಾಗƒತಿ ಮೂಡಿಸಲಾಗುತ್ತಿದೆ. ಅತಿಯಾದ ನೀರು ಬಳಕೆ ಮಾಡದೆ ರೈತರು ತಮ್ಮ ಹೊಲಗಳನ್ನು ಉಳಿಸಿಕೊಳ್ಳಬೇಕು.

ವಿಶ್ವನಾಥ ಪಾಟೀಲ,ಕಾಡಾ ಅಧ್ಯಕ್ಷರು

-ಕೇಶವ ಆದಿ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.