ಹಿಜಾಬ್ ವಿವಾದ ; ಸಾಗರದಲ್ಲಿ ಮಾಂಸ ಮಾರಾಟ ವಹಿವಾಟು ಬಂದ್
Team Udayavani, Mar 17, 2022, 5:13 PM IST
ಸಾಗರ: ಹಿಜಾಬ್ ವಿಷಯ ಕುರಿತು ರಾಜ್ಯ ಉಚ್ಛ ನ್ಯಾಯಾಲಯ ನೀಡಿದ ತೀರ್ಪನ್ನು ವಿರೋಧಿಸಿ ಮುಸ್ಲಿಂ ಉಲೆಮಾ ಒಕ್ಕೂಟ ರಾಜ್ಯಾದ್ಯಂತ ನೀಡಿರುವ ಬಂದ್ ಕರೆಗೆ ಸಾಗರದ ಚಿಕನ್, ಮಟನ್, ಮೀನು ಮಾರಾಟಗಾರರು ಸ್ಪಂದಿಸಿ ಗುರುವಾರ ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ತಾಲೂಕು ಕೋಳಿ ಮಾಂಸ ಮಾರಾಟಗಾರರ ಸಂಘದ ಅಧ್ಯಕ್ಷ ಸೈಯದ್ ತಾಹೀರ್, ಹಿಜಾಬ್ ವಿರುದ್ಧ ಬಂದಿರುವ ತೀರ್ಪಿನ ವಿರುದ್ದ ಮುಸ್ಲಿಂ ಉಲೆಮಾ ಒಕ್ಕೂಟ ನೀಡಿರುವ ಕರ್ನಾಟಕ ಬಂದ್ ಕರೆಗೆ ಸಾಗರದಲ್ಲಿ ಪೂರಕವಾಗಿ ಸ್ಪಂದನೆ ದೊರೆತಿದೆ. ತಾಲೂಕಿನಾದ್ಯಂತ ಮುಸ್ಲೀಂ ಜನಾಂಗದವರು ನಡೆಸುತ್ತಿದ್ದ ವಹಿವಾಟುಗಳನ್ನು ಬಂದ್ ಮಾಡುವ ಮೂಲಕ ನ್ಯಾಯಾಲಯದ ತೀರ್ಪು ಅವೈಜ್ಞಾನಿಕವಾಗಿದ್ದು, ನ್ಯಾಯಾಲಯ ಪುನರ್ ಪರಿಶೀಲಿಸಲಿ ಎಂದು ಒತ್ತಾಯಿಸಿದ್ದೇವೆ ಎಂದರು.
ಈಗಾಗಲೇ ವಿದ್ಯಾರ್ಥಿನಿಯರು ನ್ಯಾಯಕ್ಕಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ವಿದ್ಯಾರ್ಥಿನಿಯರಿಗೆ ನ್ಯಾಯ ಸಿಗುವ ವಿಶ್ವಾಸ ಇದೆ. ಹಿಜಾಬು ಮತ್ತು ಕೇಸರಿ ಶಾಲು ವಿವಾದ ಶಾಲಾ ಹಂತದಲ್ಲಿಯೆ ಬಗೆಹರಿಸಿಕೊಳ್ಳುವ ಸಾಧ್ಯತೆ ಇತ್ತು. ಇದೀಗ ವಿವಾದ ದೊಡ್ಡದಾಗುವಂತೆ ಮಾಡುವಲ್ಲಿ ಸರ್ಕಾರದ ಪಾತ್ರ ಅತಿಮುಖ್ಯವಾಗಿದೆ. ಶಿಕ್ಷಣ ಇಲಾಖೆ ಹೆಣ್ಣುಮಕ್ಕಳ ಶೈಕ್ಷಣಿಕ ಚಟುವಟಿಕೆ ಜೊತೆ ಆಟವಾಡದೆ ಅವರಿಗೆ ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ಪುನರ್ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಗೆಳೆಯರ ಜತೆ Netflix password ಹಂಚಿಕೊಂಡಿದ್ದೀರಾ?ಇನ್ಮುಂದೆ ಹೆಚ್ಚುವರಿ ಶುಲ್ಕ ಪಾವತಿಸಬೇಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ