ರಾಷ್ಟ್ರೀಯ ತಂಡದ ಬದಲು ಐಪಿಎಲ್ ಆಯ್ಕೆ ಮಾಡಿದ ದ.ಆಫ್ರಿಕಾದ 5 ಆಟಗಾರರು; ಟೆಸ್ಟ್ ತಂಡದಿಂದ ಔಟ್


Team Udayavani, Mar 18, 2022, 4:28 PM IST

Five South Africa players choose IPL over national side

ಜೋಹಾನ್ಸ್ ಬರ್ಗ್: ಬಂಗ್ಲಾದೇಶ ವಿರುದ್ಧ ಮಾರ್ಚ್ 31ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟವಾಗಿದೆ. 15 ಮಂದಿಯ ತಂಡವನ್ನು ಪ್ರಕಟ ಮಾಡಲಾಗಿದ್ದು, ಅದೇ ಸಮಯದಲ್ಲಿ ಐಪಿಎಲ್ ನಲ್ಲಿ ಆಡಲಿರುವ ಆಟಗಾರರನ್ನು ಕೈಬಿಡಲಾಗಿದೆ.

ಹರಿಣಗಳ ತಂಡದ ಪ್ರಮುಖ ವೇಗದ ಬೌಲರ್ ಗಳಾದ ಕಗಿಸೋ ರಬಾಡ, ಲುಂಗಿ ಎನ್ ಗಿಡಿ ಮತ್ತು ಮಾಕ್ರೋ ಜೆನ್ಸನ್ ಗೆ ಟೆಸ್ಟ್ ತಂಡದಲ್ಲಿ ಜಾಗ ನೀಡಲಾಗಿಲ್ಲ. ಐಪಿಎಲ್ ನಲ್ಲಿ ಆಡುವ ಏಡನ್ ಮಾಕ್ರಮ್ ಮತ್ತು ರಸ್ಸಿ ವ್ಯಾನ್ ಡರ್ ಡ್ಯುಸನ್ ಕೂಡಾ ಬಾಂಗ್ಲಾ ಸರಣಿಗೆ ಆಯ್ಕೆಯಾಗಿಲ್ಲ.

ಐಪಿಎಲ್‌ ನಲ್ಲಿ ಆಡಬೇಕೆ ಅಥವಾ ದೇಶದ ಸರಣಿಯಲ್ಲಿ ಆಡಬೇಕೆ ಎಂಬ ನಿರ್ಧಾರವನ್ನು ಆಟಗಾರರಿಗೆ ಬಿಡಲಾಗಿತ್ತು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಹೇಳಿದೆ. ಈ ನಿರ್ಧಾರವನ್ನು ಟೆಸ್ಟ್ ನಾಯಕ ಡೀನ್ ಎಲ್ಗರ್ “ನಿಷ್ಠೆಯ ಪರೀಕ್ಷೆ” ಎಂದು ಕರೆದಿದ್ದಾರೆ.

ಮಧ್ಯಮ ಕ್ರಮಾಂಕದ ಬ್ಯಾಟರ್ ಖಾಯಾ ಝೊಂಡೋ ಅವರ ಚೊಚ್ಚಲ ಟೆಸ್ಟ್ ಕರೆಯನ್ನು ಪಡೆದಿದ್ದಾರೆ. ಅನ್‌ಕ್ಯಾಪ್ಡ್ ಬೌಲರ್ ಡೇರಿನ್ ಡುಪಾವಿಲ್ಲನ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ:ಜೆರ್ಸಿ ಸಂಖ್ಯೆ 7ರ ಹಿಂದಿನ ರಹಸ್ಯ ಬಿಚ್ಚಿಟ್ಟ ಮಹೇಂದ್ರ ಸಿಂಗ್ ಧೋನಿ

ಇದೇ ವೇಳೆ ವೇಗದ ಬೌಲರ್ ಆನ್ರಿಚ್ ನೋರ್ಜೆ ಅವರನ್ನು ಆಯ್ಕೆ ಮಾಡಲಾಗಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನೋರ್ಜೆ ಐಪಿಎಲ್ ನಲ್ಲಿ ಆಡುವುದು ಅನುಮಾನವಾಗಿದೆ.

ದಕ್ಷಿಣ ಆಫ್ರಿಕಾದ ಕ್ರಿಕೆಟಿಗರ ಅಸೋಸಿಯೇಷನ್ ನೊಂದಿಗೆ ಕ್ರಿಕೆಟ್ ದಕ್ಷಿಣ ಆಫ್ರಿಕಾದ ಪ್ರಸ್ತುತ ಒಪ್ಪಂದದ ಪ್ರಕಾರ, ಐಪಿಎಲ್ ನಲ್ಲಿ ಭಾಗವಹಿಸುವ ಅವಕಾಶವನ್ನು ಮಂಡಳಿಯು ನಿರಾಕರಿಸುವಂತಿಲ್ಲ. ಯಾಕೆಂದರೆ ಎರಡೂ ಸಂಸ್ಥೆಗಳು ಆಟಗಾರರ ಜೀವನೋಪಾಯ ಮತ್ತು ಅವಕಾಶಗಳನ್ನು ಮತ್ತು ರಾಷ್ಟ್ರೀಯ ತಂಡಕ್ಕೆ ಅವರ ಕರ್ತವ್ಯಗಳನ್ನು ಸಮತೋಲನಗೊಳಿಸುವ ಕೆಲಸ ಮಾಡುತ್ತವೆ.

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಮಾರ್ಚ್ 31ರಿಂದ ಡರ್ಬನ್ ನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯವು ಎಪ್ರಿಲ್ 7ರಂದು ಪೋರ್ಟ್ ಎಲಿಜಬೆತ್ ನಲ್ಲಿ ಆರಂಭವಾಗಲಿದೆ. ಐಪಿಎಲ್ ಕೂಟವು ಮಾರ್ಚ್ 26ರಿಂದ ಆರಂಭವಾಗಲಿದೆ.

ದ.ಆಫ್ರಿಕಾ ತಂಡ: ಡೀನ್ ಎಲ್ಗರ್ (ನಾಯಕ), ಟೆಂಬಾ ಬವುಮಾ (ಉಪನಾಯಕ), ಡೇರಿನ್ ಡುಪಾವಿಲ್ಲನ್, ಸರೆಲ್ ಎರ್ವೀ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್, ವಿಯಾನ್ ಮುಲ್ಡರ್, ಡುವಾನ್ ಒಲಿವಿಯರ್, ಕೀಗನ್ ಪೀಟರ್ಸನ್, ರಿಯಾನ್ ರಿಕೆಲ್ಟನ್, ಲುಥೋ ಸಿಪಾಮ್ಲಾ, ಗ್ಲೆಂಟನ್ ಸ್ಟೌರ್ಮನ್, ಕೈಲ್ ವೆರೆನ್ (ವಿ.ಕೀಪರ್), ಲಿಜಾದ್ ವಿಲಿಯಮ್ಸ್, ಖಯಾ ಝೊಂಡೋ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.