ರಾಜಕೀಯ ಬದಿಗಿಟ್ಟು ಮೇಕೆದಾಟು ಸಾಕಾರಕ್ಕೆ ಯತ್ನಿಸಲಿ


Team Udayavani, Mar 19, 2022, 6:00 AM IST

ರಾಜಕೀಯ ಬದಿಗಿಟ್ಟು ಮೇಕೆದಾಟು ಸಾಕಾರಕ್ಕೆ ಯತ್ನಿಸಲಿ

ಮೇಕೆದಾಟು ಆಣೆಕಟ್ಟು ವಿವಾದ ಸಂಬಂಧ ರಾಜ್ಯದ ಎಲ್ಲ ಪಕ್ಷಗಳು ಒಟ್ಟಾಗಿ ಸಭೆ ನಡೆಸಿರುವುದು ಉತ್ತಮವಾದ ಬೆಳವಣಿಗೆ. ಕರ್ನಾಟಕದ ಪಾಲಿನ ನೀರಿಗಾಗಿ ಕಳೆದ ಒಂಬತ್ತು ವರ್ಷಗಳಿಂದಲೂ ರಾಜ್ಯ ಸರಕಾರ ಹೆಣಗಾಡುತ್ತಲೇ ಇದೆ. ನಮ್ಮಲ್ಲಿ ಅಣೆಕಟ್ಟು ನಿರ್ಮಿಸುವಾಗ ಕೆಳ ರಾಜ್ಯಗಳ ಅಂಗೀಕಾರ ಬೇಕಾಗಿಲ್ಲ ಎಂದು ಸ್ವತಃ ಸುಪ್ರೀಂ ಕೋರ್ಟ್‌ ಹೇಳಿದೆ. ಆದರೂ, ತಮಿಳುನಾಡು ಮಾತ್ರ ಮೇಕೆದಾಟು ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ.

ಕರ್ನಾಟಕದಲ್ಲಿ ಆಗಲಿ ಅಥವಾ ತಮಿಳುನಾಡು ಆಗಲಿ, ಯಾವುದೇ ಸರಕಾರಗಳು ಬಂದರೂ ಮೇಕೆದಾಟು ಸೇರಿದಂತೆ ಜಲ ವಿವಾದಗಳ ವಿಚಾರದಲ್ಲಿ ಅಡಕತ್ತರಿಗೆ ಸಿಲುಕಿಕೊಂಡಂತೆ ವರ್ತಿಸುತ್ತವೆ. ಇದಕ್ಕೆ ಕಾರಣವೂ ಇದೆ. ಪ್ರತೀ ಬಾರಿಯೂ ಕರ್ನಾಟಕ ಅಥವಾ ತಮಿಳುನಾಡು ಸರಕಾರಗಳು ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದರಿಂದ ಈ ರೀತಿ ಆಗುತ್ತಿದೆ. ತಮಿಳುನಾಡಿನಲ್ಲಿ ಕಾವೇರಿ ವಿಚಾರವನ್ನೇ ಮುನ್ನೆಲೆಗೆ ತಂದುಕೊಂಡು ರಾಜಕೀಯ ಮಾಡುತ್ತವೆ. ಆದರೆ ಈ ರಾಜಕೀಯ ಗುದ್ದಾಟದಲ್ಲಿ ಇದುವರೆಗೆ ಹೆಚ್ಚು ನೊಂದಿರುವುದು ಕರ್ನಾಟಕವೇ.

ಇದಕ್ಕೆ ಕಾರಣ, ಕೇಂದ್ರ ಸರಕಾರಗಳ ನಡೆ. ಹಿಂದಿನಿಂದಲೂ ತಮಿಳುನಾಡು ವಿಚಾರದಲ್ಲಿ ಕೇಂದ್ರ ಸರಕಾರಗಳು ಎಚ್ಚರಿಕೆಯ ನಡೆ ಇಡುತ್ತವೆ. ಯುಪಿಎ ಸರಕಾರದ ಅವಧಿಯಲ್ಲಿ, ಸರಕಾರದ ರಚನೆಗೆ ಕೊಟ್ಟ ಬೆಂಬಲವನ್ನೇ ಬಳಸಿಕೊಂಡು ಕರ್ನಾಟಕದ ಯಾವುದೇ ಜಲ ಯೋಜನೆಗಳಿಗೆ ಒಪ್ಪಿಗೆ ಸಿಗದಂತೆ ಮಾಡುವಲ್ಲಿ ಅಲ್ಲಿನ ಡಿಎಂಕೆ ಪಕ್ಷ ಮಾಡುತ್ತಿತ್ತು. ಇನ್ನು ಎನ್‌ಡಿಎ ಅವಧಿಯಲ್ಲಿ ಎಐಎಡಿಎಂಕೆ ಇದೇ ಸೂತ್ರ ಅಳವಡಿಸಿ ರಾಜ್ಯದ ಯೋಜನೆಗಳಿಗೆ ಕೊಕ್ಕೆ ಇಡುತ್ತಲೇ ಬಂದಿದೆ. ಹೀಗಾಗಿ ತಮಿಳುನಾಡಿನಲ್ಲಿ ಯಾವುದೇ ಸರಕಾರಗಳು ಬಂದರೂ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾಗುತ್ತವೆ.

ಹೀಗಾಗಿಯೇ ಪ್ರತೀ ಬಾರಿಯೂ ಕರ್ನಾಟಕಕ್ಕೆ ಅನ್ಯಾಯವಾಗುವುದು ಮಾತ್ರ ತಪ್ಪಿಲ್ಲ. ಈಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ ಮೇಕೆದಾಟುವಿಗೆ ಪರಿಸರ ಇಲಾಖೆಯ ಅನುಮತಿ ಪಡೆಯಲು ಸಾಧ್ಯವಾಗಿಲ್ಲ ಎಂಬುದು ವಿಷಾದದ ಸಂಗತಿ.

ಈ ಬೆಳವಣಿಗೆಯ ನಡುವೆ ಶುಕ್ರವಾರ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದೆ. ಇದರಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಪಾಲ್ಗೊಂಡು ತಮ್ಮದೇ ಆದ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಲ್ಲಿಯೂ ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುವ ಸ್ಥಿತಿ ಎದುರಾದರೆ ನಾವೂ ಬರುತ್ತೇವೆ ಎಂದು ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಸರಕಾರಕ್ಕೆ ಅಭಯ ನೀಡಿದ್ದು, ಇದು ಉತ್ತಮ ಬೆಳವಣಿಗೆ.

ಅಲ್ಲದೆ ಸಿಎಂ ಬೊಮ್ಮಾಯಿ ಅವರ ಪ್ರಕಾರ, ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಸೋಮವಾರ ಅಥವಾ ಮಂಗಳವಾರ ದಿಲ್ಲಿಗೆ ಹೋಗಲಿದ್ದಾರೆ. ಸಾಧ್ಯವಾದಷ್ಟು ಮಟ್ಟಿಗೆ ಸಚಿವರು ಕೇಂದ್ರದ ಮುಂದೆ ಯೋಜನೆಯ ಅಷ್ಟೂ ಪ್ರಯೋಜನಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿ ಹೇಳಬೇಕು. ಸದ್ಯ ಕೇಂದ್ರದ ಕಡೆಯಿಂದ ಬೇಕಾಗಿರುವುದು ಪರಿಸರಾತ್ಮಕ ಒಪ್ಪಿಗೆ. ಇದನ್ನು ಆದಷ್ಟು ಬೇಗ ಪಡೆಯಬೇಕು. ಆಗಲೂ ಸಾಧ್ಯವಾಗದೇ ಹೋದರೆ ಸರ್ವಪಕ್ಷಗಳ ನಿಯೋಗ ತೆರಳಿ ಮನವೊಲಿಕೆ ಮಾಡಬೇಕು.

ಟಾಪ್ ನ್ಯೂಸ್

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.