ಕಾರ್ಕಳ ಉತ್ಸವ ಪ್ರತಿವರ್ಷ ನಡೆಯಲಿ: ಸಚಿವ ಆನಂದ್‌ ಸಿಂಗ್‌


Team Udayavani, Mar 19, 2022, 6:49 AM IST

ಕಾರ್ಕಳ ಉತ್ಸವ ಪ್ರತಿವರ್ಷ ನಡೆಯಲಿ: ಸಚಿವ ಆನಂದ್‌ ಸಿಂಗ್‌

ಕಾರ್ಕಳ: ಹಿಂದೂ ಸಾಮ್ರಾಜ್ಯದಲ್ಲೆ ಅತೀ ದೊಡ್ಡ ಉತ್ಸವ ವಿಜಯನಗರದ ಹಂಪಿ ಉತ್ಸವವು ಇಡೀ ರಾಜ್ಯಕ್ಕೆ ವಿಸ್ತರಿಸಿದೆ. ಅದೇ  ಕಲ್ಪನೆಯಲ್ಲಿ ಕಾರ್ಕಳ ಉತ್ಸವ ಆರಂಭಿಸಿದ್ದಾರೆ. ಹಂಪಿ ಉತ್ಸವ ಮೂರು ದಿನ ನಡೆದರೆ ಸಚಿವ ಸುನಿಲ್‌ ಆರಂಭದಲ್ಲಿಯೇ  ಹತ್ತು ದಿನ ನಡೆಸುವ ಮೂಲಕ ಎಲ್ಲರನ್ನೂ ಅಚ್ಚರಿ ಮೂಡಿಸಿದ್ದಾರೆ. ಕಾರ್ಕಳ ಉತ್ಸವ ದಸರಾ ಉತ್ಸವದಂತೆ ಪ್ರತಿ ವರ್ಷ ನಡೆಯಲಿ ಎಂದು  ಜೀವಿಶಾಸ್ತ್ರ, ಪರಿಸರ, ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹೇಳಿದರು.

ಸುನಿಲ್‌ ಛಲಗಾರ :

ಸ್ವರಾಜ್‌ ಮೈದಾನದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಂಸ್ಕೃತಿ ರಕ್ಷಣೆ ನಮ್ಮ ಧರ್ಮ. ಸುನಿಲ್‌ ಅವರಲ್ಲಿ ಶ್ರದ್ಧೆ, ನಿಷ್ಠೆ ಇರುವುದನ್ನು  ಕಂಡಿದ್ದೇನೆ. ಅವರೊಬ್ಬ ಛಲಗಾರ ಎಂದರು.

ಥೀಂ ಪಾರ್ಕ್‌ಗೆ 1.5 ಕೋ.ರೂ. :

ಬೈಲೂರಿನ ಪರಶುರಾಮ ಥೀಂ ಪಾರ್ಕ್‌ ಅಭಿವೃದ್ಧಿಗೆ 1.5 ಕೋ.ರೂ.ಗಳನ್ನು ಇದೇ ಸಂದರ್ಭ  ಸಚಿವ ಆನಂದ್‌ ಸಿಂಗ್‌ ಅವರು ಘೋಷಿಸಿದರು. ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ಉಪಸ್ಥಿತರಿದ್ದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ್‌, ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ವಿನಯ ಹೆಗ್ಡೆ ಮಾತನಾಡಿದರು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್‌ ಶೆಟ್ಟಿ, ಪುರಸಭೆ ಅಧ್ಯಕ್ಷೆ ಸುಮಾಕೇಶವ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ| ಎನ್‌. ಮಂಜುಳಾ, ಜಿÇÉಾಧಿಕಾರಿ ಕೂರ್ಮಾರಾವ್‌ ಎಂ., ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಎಸ್‌ಪಿ ಎನ್‌. ವಿಷ್ಣುವರ್ಧನ್‌, ಅರಣ್ಯ ಇಲಾಖೆ ಅಧಿಕಾರಿ ಮನೋಜ್‌ ಕುಮಾರ್‌, ಉದ್ಯಮಿ ರಘುವೀರ್‌ ಶೆಟ್ಟಿ, ಕ್ಯಾ| ಗಣೇಶ್‌ ಕಾರ್ಣಿಕ್‌ ಉಪಸ್ಥಿತರಿದ್ದರು. ಸಹಾಯಕ ಕಮಿಷನರ್‌ ರಾಜು ಸ್ವಾಗತಿಸಿ, ಸಂಗೀತಾ ನಿರೂಪಿಸಿದರು.

ವೈಭವದ ಮೆರವಣಿಗೆ :

ಉತ್ಸವ ಮೆರವಣಿಗೆ ಅತ್ಯಂತ ವೈಭವದಿಂದ ನಡೆಯಿತು. ನಾಡಿನ ಹಾಗೂ ಹೊರರಾಜ್ಯಗಳ ಕಲಾವಿದರ ತಂಡ ಹಾಗೂ ತಾಲೂಕಿನ 34  ಗ್ರಾ.ಪಂ.ಗಳ, ಶಿಕ್ಷಣ ಸಂಸ್ಥೆಗಳ ವಿಶೇಷ

ವೇಷಭೂಷಣಗಳು ಸೇರಿ 250ಕ್ಕೂ ಹೆಚ್ಚಿನ 10 ಸಾವಿರಕ್ಕೂ ಮಿಕ್ಕಿದ ಕಲಾವಿದರ ವೇಷಭೂಷಣ ಒಳಗೊಂಡ ಮೆರವಣಿಗೆ ಬಂಡಿಮಠದಿಂದ  ಸ್ವರಾಜ್‌ ಮೈದಾನದ ವರೆಗೆ ಸಾಗಿತು.

ಬಂಡಿಮಠದಲ್ಲಿ  ಸಂಸದೆ ಶೋಭಾ ಕರಂದ್ಲಾಜೆ ಡೋಲು ಬಡಿದು ಚಾಲನೆನೀಡಿದರು. ಕ್ಯಾ| ಗಣೇಶ್‌ ಕಾರ್ಣಿಕ್‌, ಡಾ| ಎಂ.ಎನ್‌. ರಾಜೇಂದ್ರಕುಮಾರ್‌, ಡಾ| ಮೋಹನ ಆಳ್ವ ಅವರು ಉಪಸ್ಥಿತರಿದ್ದರು. ಕಬಡ್ಡಿ ಆಟಗಾರ ಸುಕೇಶ್‌  ಅವರನ್ನು ಸಮ್ಮಾನಿಸಲಾಯಿತು.

ಮಳೆಯ ಸಿಂಚನ :

ಉತ್ಸವ ಮೆರವಣಿಗೆ ಸ್ವರಾಜ್‌ ಮೈದಾನ ತಲುಪಿದ ತತ್‌ಕ್ಷಣವೇ ಮಳೆಯ ಸಿಂಚನವಾಯಿತು. ಬಿಸಿಲಿನ ತಾಪವೂ ಇದ್ದಿದ್ದರಿಂದ ಮೆರವಣಿಗೆಯಲ್ಲಿ ಸಾಗಿ ಬಂದ ಕಲಾವಿದರಿಗೆ ಮಳೆಯು ಖುಷಿ ಕೊಟ್ಟಿತ್ತಾದರೂ, ಬೃಹತ್‌ ವೇದಿಕೆ, ಲೈಟಿಂಗ್ಸ್‌ಗೆ ತೊಂದರೆಯಾಯಿತು. ಬೆಳಗ್ಗೆ  ಕೃಷಿ, ಫ‌ಲಪುಷ್ಪ ಪ್ರದರ್ಶನ ಉದ್ಘಾಟನೆಗೊಂಡಿತು.

ಟಾಪ್ ನ್ಯೂಸ್

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.