ಉಜಿರಂಡಿಪಲ್ಕೆ : ಪಾಳು ಬಿದ್ದಿದೆ ಹಾಸ್ಟೆಲ್‌

ಇತರ ಇಲಾಖೆಗೆ ನೀಡಲು ಹಿಂದುಳಿದ ವರ್ಗಗಳ ಇಲಾಖೆ ಸಿದ್ಧ

Team Udayavani, Mar 19, 2022, 5:31 PM IST

school

ಬಂಟ್ವಾಳ: ಮಣಿ ನಾಲ್ಕೂರು ಗ್ರಾಮದ ಉಜಿರಂಡಿಪಲ್ಕೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಅಧೀನದ ಬಾಲಕರ ವಸತಿ ನಿಲಯ ಕಾರ್ಯಾಚರಣೆಯನ್ನು ಸ್ಥಗಿತ ಗೊಳಿಸಿರುವ ಪರಿಣಾಮ ಕಟ್ಟಡ ಪಾಳು ಬಿದ್ದಿದ್ದು, ಅದನ್ನು ಉಳಿಸುವ ದೃಷ್ಟಿಯಿಂದ ಯಾವುದೇ ಸರಕಾರಿ ಇಲಾಖೆಯು ಬಳಸುವುದಾದರೆ ಇಲಾಖೆ ನೀಡುವುದಕ್ಕೆ ಸಿದ್ಧವಿದೆ.

28 ವರ್ಷಗಳ ಇತಿಹಾಸ ಹೊಂದಿರುವ ಈ ಹಾಸ್ಟೆಲ್‌ ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಲ್ಲದೆ ಮುಚ್ಚಲ್ಪಟ್ಟು ಪಾಳು ಬಿದ್ದ ಸ್ಥಿತಿಯಲ್ಲಿದೆ. ಹೀಗೆ ಖಾಲಿ ಇರುವ ಹಾಸ್ಟೆಲ್‌ ಕಟ್ಟಡವನ್ನು ಬಳಸುವ ದೃಷ್ಟಿಯಿಂದ ಕಿಯೋನಿಕ್ಸ್‌ ಸಂಸ್ಥೆ ಹಿಂದುಳಿದ ವರ್ಗಗಳ ಇಲಾಖೆಯ ಬಳಿ ಕೇಳಿದರೂ, ಅದು ಪ್ರಗತಿ ಕಾಣದೆ ಹಾಗೇ ಉಳಿದುಕೊಂಡಿದೆ. ಹೀಗೆ ಪಾಳುಬಿದ್ದ ಕಟ್ಟಡವು ಶಿಥಿಲಾವಸ್ಥೆಗೆ ತಲುಪುತ್ತಿದ್ದು, ಹಿಂದೆ ಅಲ್ಲಿನ ಸೊತ್ತುಗಳನ್ನು ಕಳವು ಮಾಡಿದ ಘಟನೆಯೂ ನಡೆದಿತ್ತು. ಮುಂದೆಯೂ ಇದೇ ಸ್ಥಿತಿಯಲ್ಲಿದ್ದರೆ ಕಟ್ಟಡ ಪರರ ಪಾಲಾಗುವ ಆತಂಕವಿದೆ. ಈ ನಿಟ್ಟಿನಲ್ಲಿ ಇಲಾಖೆ ನಿರ್ಧರಿಸಿದಂತೆ ಇತರ ಇಲಾಖೆಗಾದರೂ ಅಗತ್ಯ ಕಾರ್ಯಾಚರಣೆ ನೀಡಬೇಕಿದೆ.

ಬಂಟ್ವಾಳದ ಹಾಸ್ಟೆಲ್‌ ಕಾರ್ಯಾಚರಣೆ ಹಲವು ವರ್ಷಗಳಿಂದ ಅದು ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್‌ ಆಗಿತ್ತು. ಅಲ್ಲಿನ ವಿದ್ಯಾರ್ಥಿಗಳು ಪಕ್ಕದಲ್ಲೇ ಇರುವ ಮಣಿ ನಾಲ್ಕೂರು ಸ.ಪ್ರೌಢಶಾಲೆಗೆ ತೆರಳುತ್ತಿದ್ದರು. ಮುಂದೆ ಹಲವೆಡೆ ಹೊಸ ಪ್ರೌಢಶಾಲೆಗಳು ಮಂಜೂರಾದ ಪರಿಣಾಮ ಈ ಹಾಸ್ಟೆಲ್‌ಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಕುಸಿದು ಹಾಸ್ಟೆಲನ್ನು ಅನಿವಾರ್ಯವಾಗಿ ಮುಚ್ಚಬೇಕಾದ ಸ್ಥಿತಿ ಉಂಟಾಗಿತ್ತು. 5 ವರ್ಷಗಳ ಹಿಂದೆ ಬಂಟ್ವಾಳಕ್ಕೆ ಮಂಜೂರಾದ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯವನ್ನು ನಡೆಸುವುದಕ್ಕೆ ಕಟ್ಟಡ ಸಿಗದ ಹಿನ್ನೆಲೆಯಲ್ಲಿ ಅದನ್ನು ಉಜಿರಂಡಿಪಲ್ಕೆಯ ಈ ಹಾಸ್ಟೆಲ್‌ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ಆದರೆ ಇಲ್ಲಿಂದ ವಿದ್ಯಾರ್ಥಿಗಳು ಸುಮಾರು 20 ಕಿ.ಮೀ. ದೂರದಲ್ಲಿರುವ ಬಂಟ್ವಾಳ ಸ. ಪಾಲಿಟೆಕ್ನಿಕ್‌ಗೆ ಆಗಮಿಸಬೇಕಾಗಿತ್ತು. ಹೀಗಾಗಿ ವಿದ್ಯಾರ್ಥಿಗಳು ಹಾಸ್ಟೆಲ್‌ ಗೆ ಬರಲು ಹಿಂದೇಟು ಹಾಕುತ್ತಿದ್ದರು. ಈ ಕಾರಣದಿಂದ ಕೆಲವು ವರ್ಷಗಳ ಹಿಂದೆ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯ ತಲಪಾಡಿಯ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು.

ತಹಶೀಲ್ದಾರ್‌ ಗೆ ಮಾಹಿತಿ

ಕಿಯೋನಿಕ್ಸ್‌ ಸಂಸ್ಥೆ ಕಾಲೇಜಿಗೆ ಕಂಪ್ಯೂಟರ್‌ ಕೇಂದ್ರ ನಡೆಸಲು ಕಟ್ಟಡ ಕೇಳಿದ್ದು, ಅನುಮತಿ ಕೊಡಿಸುವ ಭರವಸೆ ನೀಡಿದರೂ ಬಳಿಕ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆ ಕಟ್ಟಡವು ಹಾಳಾಗುತ್ತಿರುವುದು ಬೇಸರದ ಸಂಗತಿ. ಇತರ ಸರಕಾರಿ ಇಲಾಖೆಗೆ ಅಗತ್ಯ ಇರುವುದಾದರೆ ನಮ್ಮ ಇಲಾಖೆ ನೀಡುವುದಕ್ಕೆ ಸಿದ್ಧವಿದೆ. ಈ ಕುರಿತು ತಹಶೀಲ್ದಾರ್‌ ಅವರಲ್ಲಿ ಕೂಡ ತಿಳಿಸಲಾಗಿದೆ. –ಬಿಂದಿಯಾ ನಾಯಕ್‌, ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಂಟ್ವಾಳ

ಒ ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.