ಬಿಸಿ ಏರಿದ ಬೇಸಗೆ; 40 ಡಿಗ್ರಿ ತಲುಪುತ್ತಿರುವ ತಾಪಮಾನ

ಎಳನೀರು, ತಂಪು ಪಾನೀಯಕ್ಕೆ ಬೇಡಿಕೆ

Team Udayavani, Mar 19, 2022, 5:58 PM IST

summer

ಬೆಳ್ತಂಗಡಿ: ಕಳೆದ ವರ್ಷ ಪೂರ್ತಿ ಸುರಿದ ಮಳೆಯಿಂದ ಇಳೆ ತಂಪಾಗಿತ್ತು. ಪ್ರಸಕ್ತ ಬೇಸಗೆ ಧಗೆ ಏರುತ್ತಿದೆ. ವಾತಾವರಣ ಸರಿಸುಮಾರು 40ರಿಂದ 42 ಡಿಗ್ರಿ ವರೆಗೆ ತಲುಪುತ್ತಿರುವುದರಿಂದ ಮನೆಯಿಂದ ಹೊರ ಹೋದ ಮಂದಿ ತಂಪು ಪಾನೀಯಗಳಿಗೆ ಮೊರೆ ಹೋಗಲೇಬೇಕಾದ ಅನಿವಾರ್ಯತೆಯಿದೆ. ಇತ್ತ ಮಾರ್ಚ್‌ ಅವಧಿಯಲ್ಲೇ ತಾಪಮಾನ ವಿಪರೀತ ಏರಿಕೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ನದಿ ನೀರಿನ ಮಟ್ಟ ಇಳಿಕೆಯಾದರೆ ಕುಡಿಯುವ ನೀರಿಗೂ ಕೊರತೆಯಾಗಲಿದೆ.

ಕಳೆದ ವಾರ ಕರಾವಳಿಯ ಕೆಲವೆಡೆ ಮಳೆ ಸುರಿದಿತ್ತು. ಆದರೆ ವಾತಾವರಣ ತಂಪಾಗಿಲ್ಲ. ಅರಣ್ಯ ಪ್ರದೇಶ ವ್ಯಾಪ್ತಿ ಕಡಿಮೆಯಾಗುತ್ತಲೆ ಕಾಂಕ್ರೀಟ್‌ ನಾಡು ಹೆಚ್ಚುತ್ತಿವೆ. ಇವೆಲ್ಲದರ ಪರಿಣಾಮ ಕಲಬುರಗಿ, ರಾಯಚೂರು, ಕೋಲಾರ ಸೇರಿದಂತೆ ಉತ್ತರ ಕನ್ನಡಗಳಲ್ಲಿ ಏರಿಕೆಯಾಗುವ ತಾಪಮಾನದಂತೆ ಕರಾವಳಿಯ ತಾಪಮಾನವೂ ಏರಿಕೆಯಾಗತೊಡಗಿದೆ. ಪರಿಣಾಮ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ನದಿಯಲ್ಲಿನ ನೀರಿನ ಹರಿವು ಕ್ಷೀಣಿಸಿದ್ದು, ತಾಲೂಕಿನಲ್ಲಿರುವ ವಿದ್ಯುತ್‌ ಉತ್ಪಾದನ ಕೇಂದ್ರ ಗಳು ಕಾರ್ಯಚಟುವಟಿಕೆ ಸ್ಥಗಿತಗೊಳಿಸಿವೆ. ಬಾವಿ, ಕೆರೆ, ಕೊಳವೆ ಬಾವಿ ಗಳು ತಳ ಹಿಡಿಯುತ್ತಿವೆ. ಪ್ರಾಣಿ, ಪಕ್ಷಿ ಸಂಕುಲವು ನೀರಿಗಾಗಿ ದಾಹಕ್ಕೆ ಹಾತೊರೆಯುವಂತಾಗಿದೆ. ನದಿ, ಕೆರೆಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿರುವುದರಿಂದ ವಿವಿಧ ಪ್ರಭೇದದ ಮತ್ಸ್ಯ ಸಂಕುಲಕ್ಕೂ ಆಪತ್ತು ಉಂಟಾಗುತ್ತಿದೆ.

ತಂಪು ಪಾನೀಯ ಬೇಡಿಕೆ

ಬಿಸಿಲಿನ ಧಗೆ ಏರುತ್ತಲೆ ಎಳನೀರು ಹಾಗೂ ತಂಪು ಪಾನೀಯದ ಬೇಡಿಕೆ ಹೆಚ್ಚಾಗಿದೆ. ಹಾಸನ, ಚೆನ್ನರಾಯಣಪಟ್ಟಣ, ಕಡೂರುಗಳಿಂದ ಬರುವ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ಏಳನೀರಿಗೆ ಮಾರುಕಟ್ಟೆಯಲ್ಲಿ 30ರಿಂದ 40 ರೂ. ವರೆಗೆ ಬೆಲೆಯಿದೆ. ಕಲ್ಲಂಗಡಿ ಹಣ್ಣು ಕೆ.ಜಿ.ಗೆ 20ರಿಂದ 30 ರೂ. ಗೆ ಮಾರಾಟವಾಗುತ್ತಿದೆ. ಲಿಂಬೆ ಹಣ್ಣಿನ ರಸ, ಎಳ್ಳು, ರಾಗಿ, ಮಜ್ಜಿಗೆ, ದಾಳಿಂಬೆ, ಕರಬೂಜ ಹಣ್ಣು ಹಾಗೂ ಜ್ಯೂಸ್‌ಗೆ ಬೇಡಿಕೆ ಬಂದಿದೆ.

ಕ್ಷೀಣಿಸಿದ ಹರಿವು

ತಾಲೂಕಿನ ನೇತ್ರಾವತಿ, ಸೋಮಾವತಿ, ಮೃತ್ಯುಂಜಯ ಮೊದಲಾದ ನದಿಗಳಲ್ಲಿ ನೀರಿನ ಹರಿವು ಕ್ಷೀಣಿಸಿದೆ. ಬೆಳ್ತಂಗಡಿ ನಗರ ವ್ಯಾಪ್ತಿಗೆ ನೀರಿನಾಶ್ರಯವಾಗಿರುವ ಸೋಮಾವತಿ ನದಿ ಸದ್ಯಕ್ಕೆ ತುಂಬಿದೆ. ಮುಂದಿನ ತಿಂಗಳವರೆಗೆ ನೀರಿನ ಕೊರತೆಯಾಗದು. ನಗರಕ್ಕೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಇಲ್ಲಿನ ಸೋಮಾವತಿ ನದಿ ದಡದಲ್ಲಿ ಅಂದಾಜು 13 ಕೋ.ರೂ.ವೆಚ್ಚದಲ್ಲಿ ಜ್ಯಾಕ್‌ವೆಲ್‌ ಹಾಗೂ ಪಂಪ್‌ಹೌಸ್‌ ನಿರ್ಮಿಸಲಾಗಿದೆ. ಇಲ್ಲಿ ಶುದ್ಧೀಕರಿಸಿದ ನೀರನ್ನು ನಗರದ ಬಹುತೇಕ ಕಡೆಗೆ ಉಪಯೋಗಕ್ಕೆ ಬಳಸಲಾಗುತ್ತಿದೆ. ಈ ಟ್ಯಾಂಕ್‌ಗೆ ನೀರು ತುಂಬಲು ಮಳೆಗಾಲ ಮುಗಿದ ಬಳಿಕ ತಾತ್ಕಾಲಿಕವಾಗಿ ಮಣ್ಣಿನಿಂದ ಕಟ್ಟವನ್ನು ನಿರ್ಮಾಣ ಮಾಡಲಾಗುತ್ತದೆ. ಆದರೆ ಈ ಬಾರಿ ಕಟ್ಟ ನಿರ್ಮಿಸಿದ ಕೆಲ ದಿನದಲ್ಲೇ ನೀರಿನ ಪ್ರಮಾಣ ಕಡಿಮೆಯಾಗಿ ನೀರಿನ ಬರ ಎದುರಿಸುವ ಮುನ್ಸೂಚನೆ ರವಾನೆಯಾದಂತಿದೆ. ಇನ್ನು ಅನೇಕರು ನಗರ ಪ್ರದೇಶದಲ್ಲಿರುವ ಕೊಳವೆ ಬಾವಿಗಳನ್ನು ನಂಬಿದ್ದು ಅದರಲ್ಲೂ ಎಪ್ರಿಲ್‌, ಮೇಯಲ್ಲಿ ಜಲಮಟ್ಟ ಇಳಿಕೆಯಾಗುವ ಸಾಧ್ಯತೆಯಿದೆ.

ಧಾರಾಳ ನೀರು ಕುಡಿಯಿರಿ ತಾಪಮಾನ ಏರಿಕೆಯಿಂದ ದೇಹ ನೀರಿನ ಕೊರತೆ ಎದುರಿಸುತ್ತದೆ. ದಿನದಲ್ಲಿ ಮೂರು ಲೀಟರ್‌ ಆರಿಸಿದ ಬಿಸಿನೀರು ಬಳಕೆ ಮಾಡಿದರೆ ಉತ್ತಮ. ಮಧ್ಯಾಹ್ನ ಬಿಸಿಲನ್ನು ತಪ್ಪಿಸಲು ಪ್ರಯತ್ನಿಸಿ. ನೀರಿನಾಂಶವಿರುವ ಆಹಾರ ಹೆಚ್ಚು ಸೇವಿಸಬೇಕು –ಡಾ| ಗೋಪಾಲಕೃಷ್ಣ, ವೈದ್ಯರು

ಬಿಸಿಲಿನ ತಾಪ ಏರಿಕೆಯಿಂದ ತಂಪು ಪಾನೀಯಕ್ಕೆ ಬೇಡಿಕೆ ಹೆಚ್ಚಿದೆ. ಎಳನೀರು, ಲಿಂಬೆ ಶರಬತ್ತು, ಹಣ್ಣಿನ ಜ್ಯೂಸ್‌, ಐಸ್‌ ಕ್ರೀಂಗೆ ಹೆಚ್ಚಿನ ಬೇಡಿಕೆ ಇದೆ  -ದಿವಾಕರ ಪ್ರಭು, ಹೊಟೇಲ್‌ ಉದ್ಯಮಿ

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.