ಮಣ್ಣೂರು -ಸೂಗೂರು ಗ್ರಾಮವನ್ನು ಕಂಪ್ಲಿ ತಾಲೂಕಿಗೆ ಸೇರ್ಪಡೆ ಮಾಡಲು ಒತ್ತಾಯ
Team Udayavani, Mar 20, 2022, 3:19 PM IST
ಕುರುಗೋಡು: ಸಿರುಗುಪ್ಪ ತಾಲೂಕಿನ ಗಡಿ ಭಾಗದ ಗ್ರಾಮಗಳಾದ ಮಣ್ಣೂರು -ಸೂಗೂರು ಗ್ರಾಮಗಳನ್ನು ಹತ್ತಿರವಿರುವ ನೂತನ ತಾಲೂಕು ಕಂಪ್ಲಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಮಣ್ಣೂರು ಸೂಗೂರು ನಿಯೋಗ, ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮದ ಮುಖಂಡರು ಮಾತನಾಡಿ, ನಮ್ಮೂರಿನಿಂದ ಸಿರುಗುಪ್ಪ 35 ಕಿ. ಮೀ ಮತ್ತು ಹೋಬಳಿ ಕೇಂದ್ರ ತೆಕ್ಕಲಕೋಟೆ 40 ಕಿ. ಮೀ ಅಂತರದಲ್ಲಿ ಇದೆ ಕಂಪ್ಲಿ ತಾಲೂಕು ಕೇಂದ್ರ ಕೇವಲ 15 ಕಿ. ಮೀ ಅಂತರದಲ್ಲಿ ಇರುವುದನ್ನು ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಕಂಪ್ಲಿ ತಾಲೂಕು ಕೇಂದ್ರ ಘೋಷಿಸಿದ ಬಳಿಕ ಪ್ರಥಮ ಅಧಿಸೂಚನೆಯಲ್ಲಿ ಮಣ್ಣೂರು -ಸೂಗೂರನ್ನು ಕಂಪ್ಲಿ ತಾಲೂಕಿನಲ್ಲಿ ಸೇರ್ಪಡೆ ಮಾಡಲಾಗಿತ್ತು 2ನೇ ಅಧಿಸೂಚನೆಯಲ್ಲಿ ಕೈ ಬಿಡಲಾಗಿದೆ ಎಂದು ಸಚಿವರಿಗೆ ವಿವರವಾಗಿ ತಿಳಿಸಿದ್ದಾರೆ.
ಈ ಕುರಿತು ಈಗಾಗಲೇ ಎರಡು ಮೂರು ದಿನಗಳ ಹಿಂದೆ ಕಂದಾಯ ಸಚಿವ ಆರ್. ಅಶೋಕ್ ಅವರಿಗೂ ಕೂಡ ಮಣ್ಣೂರು ಸೂಗೂರು ಗ್ರಾಮವನ್ನು ಕಂಪ್ಲಿ ತಾಲೂಕಿಗೆ ಸೇರ್ಪಡೆ ಮಾಡುವಂತೆ ಸಿರುಗುಪ್ಪ ಶಾಸಕ ಸೋಮಲಿಂಗಪ್ಪ ಅವರ ನೇತೃತ್ವದಲ್ಲಿ ನಿಯೋಗ ಮನವಿ ಮಾಡಿ ಅನುಕೂಲ ಮತ್ತು ಅನಾನುಕೂಲ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
MUST WATCH
ಹೊಸ ಸೇರ್ಪಡೆ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ