32 ತಾಸಲ್ಲಿ ಸಾವಿರ ಕೆಜಿ ಮಂಡಿಗೆ ತಯಾರಿ!

ಒಮ್ಮೆಲೆ ಹದಿನೈದು ಸಾವಿರಕ್ಕೂ ಅಧಿಕ ಜನರಿಗೆ ಮಂಡಿಗೆ ಬಡಿಸಿದ ಕೀರ್ತಿ

Team Udayavani, Mar 21, 2022, 11:35 AM IST

7

ಹುಬ್ಬಳ್ಳಿ: ವಿದ್ಯಾನಗರ ಕುಮಾರವ್ಯಾಸ ನಗರದ “ಸೀತಾರಾಮ ಕ್ಯಾಟರಿಂಗ್‌’ನ ಕೇಶವಾಚಾರ್ಯ ಭಾವಿಕಟ್ಟಿ ನೇತೃತ್ವದ ತಂಡ ಮಂಡಿಗೆ ತಯಾರಿಕೆಯಲ್ಲಿ ಭೇಷ್‌ ಎನಿಸಿಕೊಂಡಿದೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡದ ಉತ್ತರಾದಿ ಮಠದಲ್ಲಿ ಈಚೆಗೆ ನಡೆದ “ಶ್ರೀಮನ್ಯಾಯಸುಧಾಮಂಗಲ’ ಕಾರ್ಯಕ್ರಮದಲ್ಲಿ 32 ತಾಸುಗಳಲ್ಲಿ ಸುಮಾರು ಒಂದು ಸಾವಿರ ಕೆಜಿ ಮಂಡಿಗೆ ತಯಾರಿಸಿ ಮೆಚ್ಚುಗೆಗೆ ಪಾತ್ರವಾಗಿದೆ.

ಸುಮಾರು ಹದಿನೈದು ಜನರ ತಂಡ ಹನ್ನೆರಡು ಒಲೆಗಳಲ್ಲಿ ಒಂದು ಸಾವಿರ ಕೆಜಿ ಮಂಡಿಗೆ ತಯಾರಿಸಿದೆ. ಇದಕ್ಕೆ 400 ಕೆಜಿ ಸಕ್ಕರೆ, 700 ಕೆಜಿ ಮಂಡಿಗೆ ಹಿಟ್ಟು, 150 ಕೆಜಿ ತುಪ್ಪ, 70 ಕೆಜಿ ಅಕ್ಕಿ ಹಿಟ್ಟು ಇನ್ನಿತರೆ ಪದಾರ್ಥ ಬಳಸಿದ್ದು, ಸುಮಾರು 15 ಸಾವಿರಕ್ಕೂ ಅಧಿಕ ಜನರು ಮಂಡಿಗೆ ಸವಿದಿದ್ದಾರಂತೆ.

ಕಳೆದ 18-20 ವರ್ಷಗಳಿಂದ ಮಂಡಿಗೆ ತಯಾರಿಸುವ ಕಾಯಕದಲ್ಲಿ ತೊಡಗಿರುವ ಭಾವಿಕಟ್ಟಿ ಅವರು ತಯಾರಿಸಿದ ಮಂಡಿಗೆ ನಾಡಿನ ವಿವಿಧೆಡೆ ತನ್ನದೇ ಖ್ಯಾತಿ ಪಡೆದಿದೆ. ಉಡುಪಿಯ ಅಷ್ಟಮಠಗಳ ಶ್ರೀಗಳು ಸಹ ಇವರ ಮಂಡಿಗೆಗೆ ಮಾರುಹೋಗಿದ್ದಾರೆ. ಪೇಜಾವರ ಶ್ರೀಗಳ ಶಿಷ್ಯರಾದ ಕೇಶವಾಚಾರ್ಯರು ಅವರಿಗೂ ಸಹ ಮಂಡಿಗೆ ಉಣಬಡಿಸಿದ್ದಾರೆ.

ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಅವರು ದೈವಾಧೀನ ನಂತರದಲ್ಲಿ ನಡೆದ ಸ್ಮರಣೆ ಕಾರ್ಯಕ್ರಮದಲ್ಲಿ ಸುಮಾರು 500 ಕೆಜಿ ಮಂಡಿಗೆ, ಮಳಖೇಡದ ಶ್ರೀಜಯತೀರ್ಥರ ಸನ್ನಿಧಾನದಲ್ಲಿ ಒಂದು ಸಾವಿರ ಕೆಜಿ, ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಸನ್ನಿಧಾನದಲ್ಲಿ 500 ಕೆಜಿ ಹಾಗೂ ಮಾದನೂರ ವಿಷ್ಣುತೀಥ ಮಠದಲ್ಲಿ 300 ಕೆಜಿ ಸಿದ್ಧಪಡಿಸಿದ್ದಾರೆ.

ಪ್ರಮೋದ ಕುಲಕರ್ಣಿ, ಮಯೂರ ಸಿದ್ದಾಪುರ ಹಾಗೂ ಅವರ ಕೈಯಡಿಯಲ್ಲಿ ಅನಿರುದ್ಧ, ಬದರಿ, ರಾಘವೇಂದ್ರ, ಕೃಷ್ಣಾ ಜೋಶಿ ಸೇರಿದಂತೆ ಸುಮಾರು 15 ಜನರ ತಂಡ ಹೊಂದಿದ್ದಾರೆ. ಕೇಶವಾಚಾರ್ಯ ಭಾವಿಕಟ್ಟಿ ಅವರ ಸಹೋದರ ಮಾವನವರಾದ ರಾಘವೇಂದ್ರ ಆಚಾರ್ಯ, ಗೋಪಾಲಾಚಾರ್ಯ ಅವರಲ್ಲಿ ಮಂಡಿಗೆ ಮಾಡುವ ವಿಧಾನ ಕಲಿತಿರುವ ವೆಂಕಟೇಶಾಚಾರ್ಯ ಅವರು ಸಹ ಮಂಡಿಗೆ ತಯಾರಿಸುವಲ್ಲಿ ತಮ್ಮದೇ ಖ್ಯಾತಿ ಪಡೆದಿದ್ದಾರೆ.

 

ಚಿಕ್ಕವನಿದ್ದಾಗಲೇ ಮಾವನವರಿಂದ ಮಂಡಿಗೆ ಮಾಡುವುದನ್ನು ಕಲಿತು ಉಡುಪಿಯ ಅಷ್ಟ ಮಠಗಳು ಸೇರಿದಂತೆ ನಾಡಿನ ವಿವಿಧೆಡೆ ನಡೆದ ಸಮಾರಂಭಗಳಲ್ಲಿ ಮಂಡಿಗೆ ಸಿದ್ಧಪಡಿಸಿದ್ದೇನೆ. ನಾವು ನೀಡುವ ಸೇವೆ, ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ ಇದೆ. ಅದು ನಮಗೆ ಶ್ರೀ ರಕ್ಷೆಯಾಗಿದೆ.

ಕೇಶವಾಚಾರ್ಯ ಭಾವಿಕಟ್ಟಿ, ಮಂಡಿಗೆ ತಯಾರಕರು

– ಬಸವರಾಜ ಹೂಗಾರ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.