ಗ್ರಾಮ ಸ್ಥಳಾಂತರ ಬಿಜೆಪಿ ಸರ್ಕಾರದ ಕೊಡುಗೆ

ಬೂದಿಹಾಳ ನವಗ್ರಾಮಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸಚಿವ ಸಿ.ಸಿ. ಪಾಟೀಲ ಚಾಲನೆ

Team Udayavani, Mar 21, 2022, 3:46 PM IST

18

ನರಗುಂದ: 2007, 2009ರಲ್ಲಿ ಉಂಟಾದ ಭೀಕರ ಪ್ರವಾಹ ಸ್ಥಿತಿ ಎದುರಿಸಿದ ಮಲಪ್ರಭೆ ಮತ್ತು ಬೆಣ್ಣಿಹಳ್ಳ ದಂಡೆಯ ಗ್ರಾಮಗಳನ್ನು ಸ್ಥಳಾಂತರಗೊಳಿಸುವಲ್ಲಿ ಬಿಜೆಪಿ ಸರ್ಕಾರದ ಸಾಧನೆ ಬಹುದೊಡ್ಡ ಕೊಡುಗೆಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಬೂದಿಹಾಳ ನವಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 2021-22ನೇ ಸಾಲಿನ ಎಸ್‌ಸಿಪಿ ಯೋಜನೆಯಡಿ 70 ಲಕ್ಷ ರೂ. ವೆಚ್ಚದಲ್ಲಿ ಎಸ್‌ಸಿ ಕಾಲೋನಿಗೆ ತಡೆಗೋಡೆ ಮತ್ತು ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.

ನರಗುಂದ ತಾಲೂಕಿನ 3 ಗ್ರಾಮ ಸೇರಿ ಮತಕ್ಷೇತ್ರದ 14 ಗ್ರಾಮಗಳ ಸ್ಥಳಾಂತರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವಧಿ ಯಲ್ಲಿ ಸರ್ಕಾರದ ಕೊಡುಗೆ ಮಹತ್ವದ್ದಾಗಿದೆ. ನವಗ್ರಾಮಕ್ಕೆ ಬಂದರೂ ಬೂದಿಹಾಳ ಗ್ರಾಮಸ್ಥರಿಗೆ ಪ್ರವಾಹ ಬಾ ಧಿಸುತ್ತಲೇ ಇತ್ತು. ಇದೀಗ ಗ್ರಾಮಸ್ಥರಿಗೆ ಭರವಸೆ ನೀಡಿದಂತೆ ನವಗ್ರಾಮಕ್ಕೆ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ಅಭಿವೃದ್ಧಿಗೆ ಒತ್ತು: ಬೂದಿಹಾಳ ಗ್ರಾಮಕ್ಕೆ 1 ಕೋಟಿ ರೂ. ವೆಚ್ಚದಲ್ಲಿ ಸಿ.ಸಿ ರಸ್ತೆ ನಿರ್ಮಿಸಲಾಗಿದೆ. 24 ಲಕ್ಷ ವೆಚ್ಚದಲ್ಲಿ ಸ್ಮಶಾನ ನಿರ್ಮಾಣಕ್ಕೆ ಟೆಂಡರ್‌ ಕರೆಯಲಾಗಿದೆ. 36 ಲಕ್ಷ ವೆಚ್ಚದ ಜೆಜೆಎಂ ಯೋಜನೆ, 12 ಲಕ್ಷ ವೆಚ್ಚದಲ್ಲಿ ಶಾಲಾ ದುರಸ್ತಿ ಮಾಡಲಾಗಿದ್ದು, ಇದೀಗ 70 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ, ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಿ, 36 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕೊಠಡಿಗಳನ್ನು ಉದ್ಘಾಟಿಸಲಾಗಿದೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ದಂಡಿನ ಮಾತನಾಡಿ, ಪ್ರವಾಹ ಸಂದರ್ಭದಲ್ಲಿ ತೊಂದರೆ ಎದುರಿಸಿದ ಬೂದಿಹಾಳ ಸ್ಥಳಾಂತರಕ್ಕೆ ಸಚಿವರ ಪರಿಶ್ರಮ ಬಹಳವಿದೆ. ಕೊಣ್ಣೂರ, ಶಿರೋಳ ಮಾರ್ಗದ ಮುಖ್ಯರಸ್ಥೆ 45.5 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ್ದು ಪ್ರಗತಿಯಲ್ಲಿದೆ ಎಂದರು.

ಬಿಜೆಪಿ ಮುಖಂಡ ಬಾಬು ಹಿರೇಹೊಳಿ ಮಾತನಾಡಿ, 2020ರ ಅಕ್ಟೋಬರ್‌ನಲ್ಲಿ ಪ್ರವಾಹದಿಂದ ನವಗ್ರಾಮಕ್ಕೆ ಸಾಕಷ್ಟು ತೊಂದರೆಯಾಗಿದ್ದು, ಆಗ ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡಿದಂತೆ ಸಚಿವರು ಇಂದು ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಿ ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಿದ್ದಾರೆ ಎಂದರು.

ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷ ಗೋವಿಂದಗೌಡ ಪಾಟೀಲ, ಕೊಣ್ಣೂರ ಗ್ರಾಪಂ ಅಧ್ಯಕ್ಷ ಗೂಳಪ್ಪ ಹುಜರತ್ತಿ, ಸದಸ್ಯರಾದ ಕೊಟ್ರೇಶ ಕೊಟ್ರಶೆಟ್ಟಿ, ಹನಮಂತಗೌಡ ಪಾಟೀಲ, ಕೃಷ್ಣಪ್ಪ ಚವ್ಹಾಣ, ಲಕ್ಷ್ಮವ್ವ ಪೂಜಾರ, ಬಸವರಾಜ ಮಾನೆ, ಸಿದ್ದಪ್ಪ ನರಗುಂದ, ಸಂಗಪ್ಪ ಹಳೇಹೊಳಿ, ಎಂ.ಎಚ್‌. ತಿಮ್ಮನಗೌಡ್ರ, ಬಾಬು ಹಿರೇಹೊಳಿ, ಉಮೇಶಗೌಡ ಪಾಟೀಲ, ಶಂಕರಗೌಡ ಯಲ್ಲಪ್ಪಗೌಡ್ರ, ನಿಂಗಪ್ಪ ಸೋಮಾಪುರ, ಅಜ್ಜಪ್ಪ ಹುಡೇದ ಇದ್ದರು.

ಕೊರೊನಾ ಪ್ರತಿಯೊಬ್ಬ ಮನುಷ್ಯನಿಗೆ ಪಾಠ ಕಲಿಸಿದೆ. ಸಂಪನ್ಮೂಲ ಕ್ರೋಡೀಕರಣಕ್ಕೆ ಬಹಳ ಪೆಟ್ಟು ನೀಡಿತು. ಪಕ್ಕದ ರಾಜ್ಯಗಳಲ್ಲಿ ಸರ್ಕಾರಿ ನೌಕರರಿಗೆ ಅರ್ಧ ವೇತನ ಮಾತ್ರ ನೀಡಿದರೆ ನಮ್ಮ ಸರ್ಕಾರದಲ್ಲಿ ಯಾವುದೇ ನೌಕರರ ವೇತನ ಕಡಿಮೆ ಮಾಡಲಿಲ್ಲ. ನಮ್ಮ ಸರ್ಕಾರ ಕೊರೊನಾ ಸಮರ್ಥವಾಗಿ ಎದುರಿಸಿದೆ.

∙ಸಿ.ಸಿ. ಪಾಟೀಲ, ಲೋಕೋಪಯೋಗಿ ಸಚಿವ

ಟಾಪ್ ನ್ಯೂಸ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.