ಮೂಲ್ಕಿ: ಕಲ್ಲಿನಿಂದ ಮುಖಕ್ಕೆ ಜಜ್ಜಿ ವ್ಯಕ್ತಿ ಕೊಲೆ; ಆರೋಪಿ ಬಂಧನ
Team Udayavani, Mar 22, 2022, 10:20 AM IST
ಮೂಲ್ಕಿ: ಬಪ್ಪನಾಡು ಗ್ರಾಮದ ಮೂಲ್ಕಿ ಪೇಟೆಯ ಪುನರೂರು ಪೆಟ್ರೋಲ್ ಬಂಕ್ ಬಳಿ ಮಾ. 19 ರಂದು ನಡೆದ ಕೊಲೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ವ್ಯಕ್ತಿಯೊರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಮುರುಗನ್ (46) ಎಂದು ಗುರುತಿಸಲಾಗಿದ್ದು, ಇವರು ಪ್ರಸ್ತುತ ತೋಕೂರು ನಿವಾಸಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶನಿವಾರ ರಾತ್ರಿ ಮುಖವನ್ನು ಕಲ್ಲಿನಿಂದ ಜಜ್ಜಿ ವ್ಯಕ್ತಿಯನ್ನು ಕೊಲೆ ಮಾಡಿದ್ದು, ಭಾನುವಾರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಕಾರ್ಕಳದ ಮುಂಡ್ಕೂರಿನ ಕಟ್ಟಡ ಕಾರ್ಮಿಕ ಹರೀಶ್ ಸಾಲಿಯಾನ್ (37) ಎಂದು ಗುರುತಿಸಲಾಗಿದೆ.
ಹರೀಶ್ ಸಾಲಿಯಾನ್ ಮತ್ತು ಆರೋಪಿ ಮುರುಗನ್ ಶನಿವಾರ ರಾತ್ರಿ ದೇವಸ್ಥಾನಕ್ಕೆ ಬಂದಿದ್ದಾಗ, ಹಣಕಾಸಿನ ವ್ಯವಹಾರದ ವಿಚಾರವಾಗಿ ಮನಸ್ತಾಪವುಂಟಾಗಿದೆ.
ಬಳಿಕ ಇಬ್ಬರೂ ಬಾರ್ಗೆ ಹೋಗಿ ಕುಡಿದಿದ್ದರು. ಸಣ್ಣಪುಟ್ಟ ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ಸಿಟ್ಟಿಗೆದ್ದ ಮುರುಗನ್ ಹರೀಶ್ ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ರಷ್ಯಾ ಆಕ್ರಮಣ ವಿರೋಧಿಸುವಲ್ಲಿ ಭಾರತದಿಂದ ‘ಅಸ್ಥಿರ’ ನಿಲುವು: ಜೋ ಬೈಡನ್
ಕೊಲೆ ಆರೋಪಿ ಮುರುಗನ್ ನನ್ನು ಮುಲ್ಕಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ .
ಮಂಗಳೂರು ನಗರದ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀ ಮಹೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ, ಮುಲ್ಕಿ ಪೊಲೀಸ್ ನಿರೀಕ್ಷಕರಾದ ಶ್ರೀ ಕುಸುಮಾಧರ್ ರವರ ನೇತೃತ್ವದಲ್ಲಿ, ಪಿಎಸ್ಐ ಶ್ರೀ ವಿನಾಯಕ ತೋರಗಲ್, ಪ್ರೋಬೆಷನರಿ ಪಿಎಸ್ ಐ ಕೃಷ್ಣ, ಎಎಸ್ಐ ಉಮೇಶ್, ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.