ನೇತ್ರಾ ಜಂಬೋ-1 ತಳಿ

ಗೇರು ಕೃಷಿಯಲ್ಲಿ ಕೂಲಿ ಖರ್ಚು ತಗ್ಗಿಸಲು

Team Udayavani, Mar 22, 2022, 11:14 AM IST

cashew

ಪುತ್ತೂರು: ಕೂಲಿ ಖರ್ಚು ತಗ್ಗಿಸುವ ಸಲುವಾಗಿ ರಾಷ್ಟ್ರೀಯ ಗೇರು ಸಂಶೋಧನ ಕೇಂದ್ರವು ಅಭಿವೃದ್ಧಿಪಡಿಸಿರುವ ದೊಡ್ಡ ಗಾತ್ರದ ಗೇರು ಬೀಜದ ನೇತ್ರಾ ಜಂಬೋ -1 ತಳಿ ಲೋಕಾರ್ಪಣೆಗೆ ಸಿದ್ಧಗೊಂಡಿದೆ.

ಗೇರು ಕೃಷಿಯಲ್ಲಿ ಒಟ್ಟು ಖರ್ಚಿನ ಸುಮಾರು ಶೇ. 40ರಷ್ಟು ಬಿದ್ದ ಹಣ್ಣು/ಬೀಜ ಹೆಕ್ಕಲು ಬೇಕು. ಆರರಿಂದ ಎಂಟು ಗ್ರಾಂ. ತೂಕದ ಬೀಜಗಳು ಗೇರಿನಲ್ಲಿ ಸರ್ವೆ ಸಾಮಾನ್ಯವಾಗಿದೆ. ಆದರೆ ಬೀಜದ ಗಾತ್ರ ಹೆಚ್ಚಿಸಿದರೆ ಮೂರು ರೀತಿಯ ಲಾಭ ದೊರೆಯುತ್ತದೆ ಎಂಬ ಕಾರಣದಿಂದ ಹೊಸ ತಳಿ ಅಭಿವೃದ್ಧಿಪಡಿಸಲಾಗಿದೆ.ಕಡಿಮೆ ಬೀಜ ಹೆಕ್ಕಿ ಜಾಸ್ತಿ ತೂಕ, ಮಾರುಕಟ್ಟೆಯಲ್ಲಿ ದೊಡ್ಡ ಬೀಜಗಳಿಗೆ ಹೆಚ್ಚಿನ ದರ, ಸಂಸ್ಕರಣೆ ಸುಲಭ ಇದರ ಲಾಭ. ಇದನ್ನರಿತು ದೊಡ್ಡ ಬೀಜ ಬಿಡುವ ನೇತ್ರಾ ಜಂಬೋ-1 ತಳಿ ಅಭಿವೃದ್ಧಿ ಪಡಿಸಿದ್ದು ಬೆಳೆಗಾರರಿಗೆ ಅನುಕೂಲವಾಗುವ ನಿರೀಕ್ಷೆ ಹೊಂದಲಾಗಿದೆ.

12 ಗ್ರಾಂ ತೂಕದ ಗೇರು ಬೀಜ

ಈ ತಳಿಯಲ್ಲಿ 12 ರಿಂದ 13 ಗ್ರಾಂ ತೂಕದ ಬೀಜ ಗಳಿರುತ್ತವೆ. ಶೇ.90ಕ್ಕೂ ಹೆಚ್ಚಿನ ಗೇರು ಬೀಜಗಳದ್ದು ಒಂದೇ ಗಾತ್ರ. ನೂರು ಕೆ.ಜಿ. ಬೀಜ ಸಂಸ್ಕರಣೆಯಿಂದ ಸುಮಾರು 29 ರಿಂದ 30 ಕೆಜಿ ತಿರುಳು ಸಿಗುತ್ತದೆ. ಈಗಿರುವ ರಫ್ತು ಗುಣಮಟ್ಟದ ಗ್ರೇಡ್‌ ಡಬ್ಲ್ಯೂ 180ಕ್ಕಿಂತ ಜಾಸ್ತಿ ಗ್ರೇಡ್‌ (ಡಬ್ಲ್ಯೂ) ಈ ತಳಿಯ ತಿರುಳಿನದ್ದು. ಸಾಮಾನ್ಯವಾಗಿ ದೊಡ್ಡ ಬೀಜ ಬಿಡುವ ತಳಿಗಳ ಇಳುವರಿ ಕಡಿಮೆ. ಆದರೆ ಈ ತಳಿಯ ಇಳುವರಿ ಹೆಕ್ಟೇರಿಗೆ ಎರಡು ಟನ್‌. ಹಣ್ಣಿನ ತೂಕ 100 ಗ್ರಾಂ. ಕ್ಕಿಂತ ಜಾಸ್ತಿ ಹಾಗೂ ಕೆಂಪು ಬಣ್ಣ ಗಿಡಗಳನ್ನು ನೆಡಬೇಕಾದ ಅಂತರ 23 ಅಡಿ ಇರುತ್ತದೆ.

6 ನೇ ತಳಿ

ಗೇರಿನಲ್ಲಿ ಸದ್ಯ ಕೃಷಿ ಮಾಡುತ್ತಿರುವ ತಳಿಗಳು (ಭಾಸ್ಕರ, ವಿಆರ್‌ ಐ-3, ಉಳ್ಳಾಲ -3 ಇತ್ಯಾದಿ) ಬಹುತೇಕ ಸಣ್ಣ ಹಾಗೂ ಮಧ್ಯಮ ಗಾತ್ರದವು. ಹಾಗಾಗಿ ಈ ದೊಡ್ಡ ಗಾತ್ರದ ಬೀಜದ ತಳಿ ಒಣ ಭೂಮಿ ಕೃಷಿಯಲ್ಲಿ ಹೊಸ ಭರವಸೆ ಹುಟ್ಟಿಸಬಲ್ಲುದು. ಪ್ರಸ್ತುತ ಇದಕ್ಕೆ ತಳಿ ಹಕ್ಕಿನ ರಕ್ಷಣೆ ಪಡೆಯಲಾಗಿದೆ. ಕೂಲಿ ಖರ್ಚು ಉಳಿತಾಯ ಸರಾಸರಿ ಈ ತಳಿ ಒಂದು ಟನ್‌ ಇಳುವರಿಗೆ ಬೀಜ ಹೆಕ್ಕುವಾಗ 16,000 ರೂ.ಕೂಲಿ ಖರ್ಚನ್ನು ಉಳಿಸುತ್ತದೆ. ಜತೆಗೆ ಈಗಿನ ಮಾರುಕಟ್ಟೆ ದರದಲ್ಲಿ ದೊಡ್ಡ ಗಾತ್ರದ ಬೀಜಕ್ಕೆ ಒಂದು ಟನ್ನಿಗೆ ಸುಮಾರು 10,000 ರೂ. ಜಾಸ್ತಿ ಸಿಗುತ್ತದೆ. ಒಟ್ಟು 26,000 ರೂ.ಗಳಷ್ಟು ಲಾಭ ಒಂದು ಟನ್ನಿಗೆ ಸಿಗುತ್ತದೆ. ಇದರ ತಿರುಳಿನ ಸಿಪ್ಪೆ ಸುಲಭದಲ್ಲಿ ಬಿಡಿಸಬಹುದು. ಹಾಗಾಗಿ ಕಾರ್ಖಾನೆಯಲ್ಲೂ ಕೂಲಿ ಖರ್ಚು ಉಳಿಸುತ್ತದೆ. ಜತೆಗೆ ತಿರುಳು ತುಂಬಾ ರುಚಿಕರ. 1.5 ಲಕ್ಷ ಗಿಡ ಮಾ.22 ರಂದು ಹೊಸ ತಳಿ ಬಿಡುಗಡೆಗೊಳ್ಳಲಿದೆ. ಮಳೆಗಾಲದ ಅನಂತರ ಇದರ ವಿತರಣೆ ಮಾಡಲಾಗುತ್ತದೆ. ಸುಮಾರು 1 ರಿಂದ 1.5 ಲಕ್ಷ ಗಿಡ ಉತ್ಪಾದಿಸಿ ನೀಡುವ ಗುರಿ ಹೊಂದಲಾಗಿದೆ.  -ಡಾ| ಜೆ. ದಿನಕರ ಅಡಿಗ, ಪ್ರಧಾನ ವಿಜ್ಞಾನಿ (ತೋಟಗಾರಿಕೆ), ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರು

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.