ಕೋವಿಡ್‌ ಲಾಕ್‌ಡೌನ್‌ಗೆ 2 ವರ್ಷ ಪೂರ್ತಿ


Team Udayavani, Mar 23, 2022, 8:20 AM IST

Covidಕೋವಿಡ್‌ ಲಾಕ್‌ಡೌನ್‌ಗೆ 2 ವರ್ಷ ಪೂರ್ತಿ

ಮಾ. 24ಕ್ಕೆ ಸರಿಯಾಗಿ ಎರಡು ವರ್ಷಗಳ ಹಿಂದೆ, ಪ್ರಧಾನಿ ನರೇಂದ್ರ ಮೋದಿಯವರು ಟೆಲಿವಿಷನ್‌ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ಕೊರೊನಾ ಲಾಕ್‌ಡೌನ್‌ ಘೋಷಿಸಿದರು. ಈ ನಿರ್ಧಾರಕ್ಕೆ ಈಗ 2 ವರ್ಷ ಸಂದಿದೆ. ಆ ಹಿನ್ನೆಲೆಯಲ್ಲಿ ಅದರ ಒಂದು ಹಿನ್ನೋಟ ಇಲ್ಲಿದೆ.

ಭಾರತದಲ್ಲಿ 1,581 ಹೊಸ ಪ್ರಕರಣ
ದೇಶದಲ್ಲಿ ಸೋಮವಾರ ಬೆಳಗ್ಗೆಯಿಂದ ಮಂಗಳವಾರ ಬೆಳಗಿನವರೆಗಿನ 24 ಗಂಟೆಗಳಲ್ಲಿ 1,581 ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4,30,10,971 ಆಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ 33 ಜನರು ಕೊರೊನಾದಿಂದಾಗಿ ಸಾವಿಗೀಡಾಗಿದ್ದು, ಈವರೆಗೆ ಸಾವಿಗೀಡಾದವರ ಸಂಖ್ಯೆ 5,16,543 ಕ್ಕೇರಿದೆ. ಇನ್ನು, ಸಕ್ರಿಯ ಪ್ರಕರಣಗಳ ಸಂಖ್ಯೆ 23,913ರಷ್ಟಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ಸ್ಥಿತ್ಯಂತರಗಳೇನು?
1. ಬೇರೆ ರಾಜ್ಯಗಳಿಗೆ ಕೂಲಿಗಾಗಿ ವಲಸೆ ಹೋದ ಹಲ ವಾರು ಮಂದಿಯ ಮೇಲೆ ದುಷ್ಪರಿಣಾಮ ಬೀರಿತು.
2. ದೇಶದ ನಾನಾ ರಾಜ್ಯಗಳಲ್ಲಿನ ವಿದ್ಯುತ್‌ ಬೇಡಿಕೆಯ ಪ್ರಮಾಣ ಗಣನೀಯವಾಗಿ ಕುಸಿಯಿತು.
3. ಲಕ್ಷಾಂತರ ಜನರು ನಿರುದ್ಯೋಗಿಗಳಾದರು.
4. ಜನತಾ ಕರ್ಫ್ಯೂ ಆರಂಭದಲ್ಲಿ ನಿಷೇಧಕ್ಕೀಡಾಗಿದ್ದ ಮದ್ಯ ಮಾರಾಟಕ್ಕೆ ಮೇ 4ರಿಂದ ಅವಕಾಶ ನೀಡಲಾಯಿತು.
5. ಹಸಿವು, ಆತ್ಮಹತ್ಯೆ, ಬಳಲಿಕೆ, ರಸ್ತೆ ಹಾಗೂ ರೈಲು ಅಪಘಾತಗಳು ಇತ್ಯಾದಿಗಳಿಂದಾಗಿ ಮೇ 10ರ ಹೊತ್ತಿಗೆ ದೇಶಾದ್ಯಂತ 350 ಸಾವು ಸಂಭವಿಸಿದವು.
6. ದೇಶದ ಆರ್ಥಿಕತೆ ಕುಸಿತ. 2018ರ ಜನವರಿಯಲ್ಲಿ ಶೇ. 8.2ರಷ್ಟಿದ್ದ ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) ಪ್ರಮಾಣ ಶೇ. 3.1ಕ್ಕೆ ಇಳಿಯಿತು.

ಆದ ಪ್ರಮುಖ ಬದಲಾವಣೆಗಳು
1. ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಬಗ್ಗೆ ಜಾಗೃತಿ.
2. ಓವರ್‌ ದಿ ಟಾಪ್‌ (ಒಟಿಟಿ) ಹೆಚ್ಚು ಜನಪ್ರಿಯ.
3. “ವರ್ಕ್‌ ಫ್ರಂ ಹೋಂ’ಗೆ ಹೆಚ್ಚಿನ ಕಂಪೆನಿಗಳ ಆಸಕ್ತಿ.
4. ಗೂಗಲ್‌ ಮೀಟ್‌ ರೀತಿಯ ಹಲವು ಆ್ಯಪ್‌ ಲಗ್ಗೆ.
5. ಮೋದಿ ಸರಕಾರ‌ದ ಕ್ಯಾಶ್‌ಲೆಸ್‌ ಇಂಡಿಯಾಕ್ಕೆ ಹೊಸ ಅರ್ಥ. ಡಿಜಿಟಲ್‌ ಪಾವತಿ ಉತ್ತುಂಗಕ್ಕೆ.

ಮತ್ತೊಂದು ನಗರ ಲಾಕ್‌ಡೌನ್‌
ಚೀನದ ಈಶಾನ್ಯ ವಲಯದ ಜಿಲಿನ್‌ ಪ್ರಾಂತ್ಯದಲ್ಲಿರುವ ಶೆನ್ಯಂಗ್‌ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 4 ಸಾವಿರ ದಾಟಿದ (4,770) ಹಿನ್ನೆಲೆಯಲ್ಲಿ ಆ ನಗರದಲ್ಲಿ ಚೀನ ಸರಕಾರ‌ ಲಾಕ್‌ಡೌನ್‌ ಜಾರಿಗೊಳಿಸಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.