ದಶಕ ಕಳೆದರೂ ನನಸಾಗದ ನಿವೇಶನ ಕನಸು
ಕುಬಿಹಾಳ ಗ್ರಾಮವಾಸ್ತವ್ಯದಲ್ಲಿ ಫಲಾನುಭವಿಗಳ ಅಳಲು
Team Udayavani, Mar 23, 2022, 11:11 AM IST
ಕುಂದಗೋಳ: ಕುಬಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಗ್ರಾಮವ್ಯಾಸ್ತವ್ಯ ಕಾರ್ಯಕ್ರಮ ಜರುಗಿತು.
ಗ್ರಾಮದಲ್ಲಿ 2010ರಲ್ಲಿ ನವಗ್ರಾಮ ಯೋಜನೆಯಡಿ ಹಣ ಪಡೆದು ಇದುವರೆಗೂ ನಿವೇಶನ ನೀಡದೆ ಇರುವುದರಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇವೆ ಎಂದು ಫಲಾನುಭವಿಗಳು ತಮ್ಮ ಅಳಲು ತೋಡಿಕೊಂಡರು. ದೀರ್ಘ ವಿಳಂಬಕ್ಕೆ ಕಾರಣ ನೀಡಿ ಪರಿಹರಿಸಬೇಕೆಂದು ಆಗ್ರಹಿಸಿದರು.
ಆರ್ಡಿಪಿಆರ್ ಯೋಜನಾಧಿಕಾರಿ ಎನ್.ಅಜೇಯ ಮಾತನಾಡಿ, ಈ ಬಗ್ಗೆ ಕಚೇರಿಯಲ್ಲಿ ದಾಖಲಾತಿ ಪರಿಶೀಲಿಸಿ ಹೇಳುತ್ತೇನೆ ಎಂದಾಗ ಗ್ರಾಪಂನಲ್ಲಿ ಇಲ್ಲವೇ ಎಂದು ಜನರು ಮರು ಪ್ರಶ್ನಿಸಿದರು.
ಪಿಡಿಒ ಗಿರೀಶ ಅಮರಗೊಂಡ ಮಾತನಾಡಿ ಇದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಾಗ ಕೆಲಕಾಲ ಗೊಂದಲ ಉಂಟಾಯಿತು. ನಂತರ ತಹಶೀಲ್ದಾರ್ ಅಶೋಕ ಶಿಗ್ಗಾಂವ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಬಗೆಹರಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮನವಿ ಸಲ್ಲಿಸಿದರೂ ಕ್ರಮವಿಲ್ಲ: ಹೆಸ್ಕಾಂ ಅಧಿಕಾರಿ ಮಠದ ಇಲಾಖೆ ವರದಿ ಹೇಳುತ್ತಿರುವಾಗ ಹಂಚಿನಾಳ ಗ್ರಾಮದಲ್ಲಿನ ಜನತೆಗೆ ಅಪಾಯ ಉಂಟಾಗುವಂತಿರುವ ವಿದ್ಯುತ್ ಟಿಸಿ ಸಮಸ್ಯೆ ಸರಿಪಡಿಸುವಂತೆ ಎಷ್ಟು ಬಾರಿ ನಿಮಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಗ್ರಾಪಂ ಉಪಾಧ್ಯಕ್ಷ ನಾಗನಗೌಡ ಸಾತ್ಮಾರ ಅವರು ಅಧಿಕಾರಿ ವಿರುದ್ಧ ಹರಿಹಾಯ್ದರು. ನಮ್ಮ ತಾಳ್ಮೆ ಕಟ್ಟೆ ಒಡೆಯುವಂತೆ ನಿಮ್ಮ ಇಲಾಖೆ ಮಾಡಿದೆ, ಜನತೆಗೆ ಅಪಾಯವಾದರೆ ನಿಮ್ಮ ಇಲಾಖೆಯೇ ಹೊಣೆಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಠದ ಅವರು ಮಾತನಾಡಿ, ಕೂಡಲೇ ಈ ಬಗ್ಗೆ ಎಸ್ಟಿಮೇಟ್ ಮಾಡಿ 15 ದಿನಗಳೊಳಗಾಗಿ ಸರಿಪಡಿಸುತ್ತೇವೆ ಎಂದು ಹೇಳಿದಾಗ ಸಭೆ ಶಾಂತವಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ತಹಶೀಲ್ದಾರ್ ಅಶೋಕ ಶಿಗ್ಗಾಂವ ಉದ್ಘಾಟಿಸಿದರು. ನಂತರ ಬಾಣಂತಿಯರಿಗೆ ಉಡಿತುಂಬುವ ಕಾರ್ಯಕ್ರಮ ಜರುಗಿತು. ಸುಕನ್ಯಾ ಸಮೃದ್ಧಿ ಯೋಜನೆಯ ಪಾಸ್ಬುಕ್ ಹಾಗೂ ವೃದ್ಧಾಪ್ಯ ವೇತನ ಮಂಜೂರಿ ಪತ್ರಗಳನ್ನು ಫಲಾನುಭವಿಗಳಿಗೆ ನೀಡಲಾಯಿತು. ಮಧ್ಯಾಹ್ನದ ನಂತರ ತಹಶೀಲ್ದಾರ್ ಹಾಗೂ ಎಲ್ಲ ಅಧಿ ಕಾರಿಗಳು ಗ್ರಾಮದಲ್ಲಿ ಸಂಚರಿಸಿ ಕೆರೆ ಸಮಸ್ಯೆ, ರಸ್ತೆ ಸಮಸ್ಯೆ, ಚರಂಡಿ ಸಮಸ್ಯೆಗಳನ್ನು ಪರಿಶೀಲಿಸಿ ಅವುಗಳ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು. ಗ್ರಾಮದಲ್ಲಿ ನಿರ್ಮಾಣವಾದ ತ್ಯಾಜ್ಯ ವಿಲೇವಾರಿ ಘಟಕ ವೀಕ್ಷಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ