ವಲಸೆ ತಡೆಗೆ ನರೇಗಾ ಸಹಕಾರಿ
Team Udayavani, Mar 23, 2022, 3:28 PM IST
ಮಾನ್ವಿ: ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆ ಕಡಿಮೆ ಆಗುವುದರಿಂದ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸಲು, ಕೂಲಿ ಕಾರ್ಮಿಕರಿಗೆ ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿಯೇ ಉದ್ಯೋಗ ಕಲ್ಪಿಸಲು, ಗ್ರಾಮಕ್ಕೆ ಶಾಶ್ವತ ಆಸ್ತಿ ರೂಪಿಸಲು ನರೇಗಾ ಯೋಜನೆ ಸಹಕಾರಿ ಎಂದು ತಾಪಂ ಇಒ ಸ್ಟೇಲಾ ವರ್ಗೀಸ್ ಹೇಳಿದರು.
ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಮಂಗಳವಾರ ಉದ್ಯೋಗ ಖಾತ್ರಿ ಯೋಜನೆಯ ದುಡಿಯೋಣ ಬಾ ಅಭಿಯಾನ ನಿಮಿತ್ತ ಹಮ್ಮಿಕೊಂಡಿದ್ದ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರದಿಂದ ನರೇಗಾ ಯೋಜನೆಯಲ್ಲಿ ಮಾ.15ರಿಂದ ಜೂ.30ರವರೆಗೆ 100 ದಿನಗಳ ಕಾಲ ನಿರಂತರ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು, ಮಹಿಳೆಯರು, ವೃದ್ಧರು, ವಿಕಲಚೇತನರು ಕೆಲಸ ಪಡೆಯಬಹುದು. ವಿವಿಧ ವಸತಿ ಯೋಜನೆಗಳ ಫಲಾನುಭವಿಗಳು, ಸಣ್ಣ ರೈತರು ವೈಯಕ್ತಿಕ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ತಾಲೂಕಿನ ಜನರಿಗೆ ನರೇಗಾ ಕುರಿತು ಮಾಹಿತಿ ನೀಡಲು ಉದ್ಯೋಗ ವಾಹಿನಿ ಜಾಗೃತಿ ರಥದ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
ಈ ವೇಳೆ ರೇಷ್ಮೆ ಇಲಾಖೆ ನಿರೀಕ್ಷಕರಾದ ಮಹಾಂತಮ್ಮ, ನರೇಗಾ ಯೋಜನೆ ಅಧಿಕಾರಿಗಳಾದ ವೀರೇಶ, ಲಿಂಗಪ್ಪ, ಅಶೋಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು