ಪ್ರೊ| ಸಿಎನ್ಆರ್ ರಾವ್ ಜ್ಞಾನ ಮತ್ತು ಶಕ್ತಿಯ ಕಣಜ: ಸಿಎಂ ಬೊಮ್ಮಾಯಿ
Team Udayavani, Mar 23, 2022, 3:51 PM IST
ಬೆಂಗಳೂರು: ಭಾರತ ರತ್ನ ಪ್ರೊ| ಸಿಎನ್ಆರ್ ರಾವ್ ಜ್ಞಾನ ಮತ್ತು ಶಕ್ತಿಯ ಕಣಜವಾಗಿದ್ದು, ಅವರ ಮಾರ್ಗದರ್ಶನದಲ್ಲಿ ಯುವ ವಿಜ್ಞಾನಿಗಳು ಮಾನವಕುಲಕ್ಕೆ ಒಳಿತಾಗುವಂತಹ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಬುಧವಾರ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ ಸೈಂಟಿಫಿಕ್ ರಿಸರ್ಚ್ ಸಭಾಭವನದಲ್ಲಿ
ಪ್ರೊ|| ಸಿಎನ್ಆರ್ ರಾವ್ ಅವರಿಗೆ ಪ್ರತಿಷ್ಠಿತ ಎನಿ ಎನರ್ಜಿ ಪ್ರಶಸ್ತಿ 2020 ಪ್ರದಾನ ಮಾಡಿ ಮಾತನಾಡಿದರು.
ಅಪ್ರತಿಮ ಸಾಧಕರಾದ ಸಿಎನ್ ಆರ್ ರಾವ್ ಅವರದು ನಿಸ್ವಾರ್ಥ ಸೇವೆ. ಮನುಷ್ಯನ ಭವಿಷ್ಯದ ಜನಾಂಗಕ್ಕೆ ತಮ್ಮ ಜೀವನವನ್ನೇ ಮುಡುಪಿಟ್ಟಿದ್ದಾರೆ. ತಮ್ಮ ವಯಸ್ಸನ್ನು ಮಿತಿಯಾಗಿಸಿಕೊಳ್ಳದೇ ಕಠಿಣ ಸವಾಲುಗಳನ್ನು ಎದುರಿಸಿದವರು. ಶಕ್ತಿಯ ಕೇಂದ್ರವಾಗಿರುವ ಶ್ರೀಯುತರು ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಪರಿಪೂರ್ಣ ಸಂಯೋಜನೆಯಾಗಿದ್ದಾರೆ. ವಿಜ್ಞಾನದಲ್ಲಿ ಸಂಶೋಧನೆ ನಿರಂತರ. ಮೂಲಭೂತ ವಿಜ್ಞಾನ ಅನ್ವಯಿಕ ವಿಜ್ಞಾನಕ್ಕೆ ಆಧಾರವಾಗಿದೆ. ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ ಸೈಂಟಿಫಿಕ್ ರಿಸರ್ಚ್ ಸಭಾಭವನದಲ್ಲಿ ಮೂಲಭೂತ ವಿಜ್ಞಾನದ ಮೇಲೆ ಸಂಶೋಧನೆಗಳು ಹೆಚ್ಚು ಒತ್ತನ್ನು ನೀಡಲಾಗುತ್ತಿದೆ ಎಂದರು.
ನವೀಕೃತ ಇಂಧನಕ್ಕೆ ಹೆಚ್ಚಿನ ಪ್ರಾಶಸ್ತ್ಯ
ಈಗಿನ ಕಾಲಮಾನದಲ್ಲಿ ನವೀಕೃತ ಇಂಧನಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತಿದೆ. ಪರಿಸರಸ್ನೇಹಿಯಾದ, ಪ್ರಕೃತಿಯಲ್ಲಿ ಹೇರಳವಾಗಿ ಕಡಿಮೆ ವೆಚ್ಚದಲ್ಲಿ ಪಡೆಯಬಹುದಾಗಿದೆ. ನವೀಕೃತ ಇಂಧನವನ್ನು ವಿವಿಧ ಮಾದರಿಯಲ್ಲಿ ಬಳಕೆಗೆ ದೊರೆಯುವಂತೆ ಮಾಡುವುದು ಒಂದು ಸವಾಲಾಗಿದೆ. ಸೌರಶಕ್ತಿ, ಪವನಶಕ್ತಿ ಸೇರಿದಂತೆ ಯಾವುದೇ ರೀತಿಯ ನವೀಕೃತ ಇಂಧನಗಳ ಸಂಗ್ರಹ ಸವಾಲಾಗಿ ಪರಿಣಮಿಸಿದೆ. ಜಲವಿದ್ಯುತ್ ಯೋಜನೆಗಳಲ್ಲಿ ಸೌರಶಕ್ತಿಯನ್ನು ಬಳಸಲು ಸಂಶೋಧನೆಗೆ ಸರ್ಕಾರ ಪ್ರಾಮುಖ್ಯತೆ ನೀಡುತ್ತಿದೆ. ವಿಜ್ಞಾನ ಮತ್ತು ಆಧ್ಯಾತ್ಮಿಕತೆ ಒಂದಕ್ಕೊಂದು ಪೂರಕವಾಗಿರಬೇಕು. ವಿಜ್ಞಾನ ಮಾನವನ ಒಳಿತಿಗೆ ಬಳಕೆಯಾಗಬೇಕೇ ಹೊರತು ವಿನಾಶಕ್ಕೆ ಕಾರಣವಾಗಬಾರದು. ಇಂಧನ ಶಕ್ತಿಗಳ ಸಂಶೋಧನೆ ಹಾಗೂ ಅದರ ಸದ್ಬಳಕೆ ಉತ್ತಮ ರೀತಿಯಲ್ಲಿ ಆಗಬೇಕಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
MUST WATCH
ಹೊಸ ಸೇರ್ಪಡೆ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ