ವನಿತಾ ವಿಶ್ವಕಪ್‌ ಕ್ರಿಕೆಟ್‌: ಭಾರತದ ಭವಿಷ್ಯ ಇಂದೇ ನಿರ್ಧಾರ?

ದಕ್ಷಿಣ ಆಫ್ರಿಕಾ-ವೆಸ್ಟ್‌ ಇಂಡೀಸ್‌ ಪಂದ್ಯದ ಫ‌ಲಿತಾಂಶ ನಿರ್ಣಾಯಕ

Team Udayavani, Mar 24, 2022, 6:05 AM IST

ವನಿತಾ ವಿಶ್ವಕಪ್‌ ಕ್ರಿಕೆಟ್‌: ಭಾರತದ ಭವಿಷ್ಯ ಇಂದೇ ನಿರ್ಧಾರ?

ವೆಲ್ಲಿಂಗ್ಟನ್‌: ವನಿತಾ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾರತದ ನಾಕೌಟ್‌ ಪ್ರವೇಶದ ಭವಿಷ್ಯ ಗುರುವಾರವೇ ನಿರ್ಧಾರಗೊಳ್ಳುವ ಸಾಧ್ಯತೆ ಇದೆ.

ಅಂದಮಾತ್ರಕ್ಕೆ ಗುರುವಾರ ಭಾರತಕ್ಕೆ ಯಾವುದೇ ಪಂದ್ಯವಿಲ್ಲ. ಮಿಥಾಲಿ ಪಡೆ ತನ್ನ ಉಳಿದೊಂದು ಲೀಗ್‌ ಪಂದ್ಯವಾಡುವುದು ರವಿವಾರ. ಎದುರಾಳಿ ದಕ್ಷಿಣ ಆಫ್ರಿಕಾ. ಅದು ಲೀಗ್‌ ಹಂತದ ಕಟ್ಟಕಡೆಯ ಪಂದ್ಯವೂ ಹೌದು.

ಆದರೆ ಗುರುವಾರ ನಡೆಯುವ ದ. ಆಫ್ರಿಕಾ-ವೆಸ್ಟ್‌ ಇಂಡೀಸ್‌ ನಡುವಿನ ಲೀಗ್‌ ಪಂದ್ಯದ ಫ‌ಲಿತಾಂಶ ಭಾರತದ ಪಾಲಿಗೆ ನಿರ್ಣಾಯಕವಾಗಲಿದೆ. ಇಲ್ಲಿ ದಕ್ಷಿಣ ಆಫ್ರಿಕಾ ಗೆದ್ದರೆ ಹರಿಣಗಳ ಪಡೆಯ ಸೆಮಿಫೈನಲ್‌ ಪ್ರವೇಶ ಖಾತ್ರಿಯಾಗಲಿದೆ. ಜತೆಗೆ ಅದು ಭಾರತವನ್ನೂ ನಾಕೌಟ್‌ಗೆ ಕರೆದೊಯ್ಯುವ ಸಾಧ್ಯತೆ ಇದೆ!

ಇದನ್ನು ಗೆದ್ದರೆ ದಕ್ಷಿಣ ಆಫ್ರಿಕಾ 6 ಪಂದ್ಯಗಳಿಂದ 10 ಅಂಕ ಗಳಿಸಿದಂತಾ ಗುತ್ತದೆ. ತನ್ನ ಕೊನೆಯ ಲೀಗ್‌ ಪಂದ್ಯ ಆಡಲಿರುವ ವಿಂಡೀಸ್‌ ಅಂಕ ಆರರಲ್ಲೇ ಉಳಿಯಲಿದೆ. ಜತೆಗೆ ರನ್‌ರೇಟ್‌ ಕೂಡ ಮೈನಸ್‌ನಲ್ಲಿದೆ. 6 ಅಂಕಗಳೊಂದಿಗೆ +0.768 ರನ್‌ರೇಟ್‌ ಹೊಂದಿರುವುದು ಭಾರತಕ್ಕೊಂದು ಪ್ಲಸ್‌ ಪಾಯಿಂಟ್‌.

ಇದನ್ನೂ ಓದಿ:ಇನ್‌ಸ್ಟಾಗ್ರಾಂನಲ್ಲಿ ನಾಗಚೈತನ್ಯರನ್ನು ಅನ್ ಫಾಲೋ ಮಾಡಿದ ನಟಿ ಸಮಂತಾ

ರೇಸ್‌ನಲ್ಲಿರುವ ತಂಡಗಳು
ರೇಸ್‌ನಲ್ಲಿ ಉಳಿಯಲಿರುವ ಉಳಿದೆರಡು ತಂಡಗಳೆಂದರೆ ಇಂಗ್ಲೆಂಡ್‌ ಮತ್ತು ನ್ಯೂಜಿಲ್ಯಾಂಡ್‌. ಇವುಗಳಲ್ಲಿ ಇಂಗ್ಲೆಂಡ್‌ ಅಷ್ಟೇನೂ ಬಲಿಷ್ಠವಲ್ಲದ ಪಾಕಿಸ್ಥಾನ ಮತ್ತು ಬಾಂಗ್ಲಾದೇಶವನ್ನು ಎದುರಿಸಲಿಕ್ಕಿದೆ. ಎರಡನ್ನೂ ಗೆಲ್ಲುವ ಸದವಕಾಶ ಆಂಗ್ಲರ ಮುಂದಿದೆ. ಆಗ ಅಂಕ 8ಕ್ಕೆ ಏರಲಿದ್ದು, ಇಂಗ್ಲೆಂಡ್‌ ನಾಕೌಟ್‌ ಪ್ರವೇಶಿಸಲಿದೆ. ಆಂಗ್ಲರ ರನ್‌ರೇಟ್‌ ಕೂಡ ಪ್ಲಸ್‌ನಲ್ಲಿದೆ.

4 ಅಂಕ ಹೊಂದಿರುವ ಆತಿಥೇಯ ನ್ಯೂಜಿಲ್ಯಾಂಡ್‌ಗೆ ಉಳಿದಿರುವುದು ಒಂದೇ ಪಂದ್ಯ. ಎದುರಾಳಿ ಪಾಕಿಸ್ಥಾನ. ಇಲ್ಲಿ ಕಿವೀಸ್‌ ಗೆದ್ದೀತಾದರೂ ರನ್‌ರೇಟ್‌ -0.229ರಲ್ಲಿರುವುದು ಭಾರೀ ಹಿನ್ನಡೆಗೆ ಕಾರಣವಾಗಬಹುದು.
ದಕ್ಷಿಣ ಆಫ್ರಿಕಾ ಎದುರಿನ ಪಂದ್ಯದಲ್ಲಿ ಭಾರತ ಸೋತರೂ ರನ್‌ರೇಟ್‌ ಉತ್ತಮ ಮಟ್ಟದಲ್ಲಿರುವುದರಿಂದ 4ನೇ ಸ್ಥಾನಿಯಾಗಿ ಸೆಮಿಫೈನಲ್‌ ತಲುಪಲು ಸಾಧ್ಯ ಎಂಬುದು ಸದ್ಯದ ಲೆಕ್ಕಾಚಾರ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ವಿಂಡೀಸ್‌ ಸೋಲುವುದು ಮುಖ್ಯ!

ಟಾಪ್ ನ್ಯೂಸ್

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqeqwewq

IPL 2024 ; ಕೊಹ್ಲಿ ಮುಡಿಗೆ ಆರೆಂಜ್ ಕ್ಯಾಪ್ :ಹರ್ಷಲ್ ಪರ್ಪಲ್ ಕ್ಯಾಪ್ ಹೊಸ ದಾಖಲೆ

1-wi

T20;ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ವಿಂಡೀಸ್‌

1-eng

T20;ಪಾಕಿಸ್ಥಾನವನ್ನು ಮಣಿಸಿದ ಇಂಗ್ಲೆಂಡ್‌

P-V-sindhu

Final ಸೋತ ಸಿಂಧು: ಮುಂದುವರಿದ ಪ್ರಶಸ್ತಿ ಬರಗಾಲ

1-wwwewqe

T20; ಬಾಂಗ್ಲಾದೇಶಕ್ಕೆ 10 ವಿಕೆಟ್‌ ಜಯ : ಸರಣಿ ಗೆದ್ದ ಅಮೆರಿಕ 

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.