ಸದನದಲ್ಲಿ ಮತ್ತೆ ಗದ್ದಲಕ್ಕೆ ಕಾರಣವಾದ ಪರೇಶ್ ಮೇಸ್ತಾ ಕೊಲೆ ಪ್ರಕರಣ
Team Udayavani, Mar 24, 2022, 5:28 PM IST
ವಿಧಾನಸಭೆ : ಉತ್ತರ ಕನ್ನಡ ಜಿಲ್ಲೆಯಲ್ಲಿ 2017ರಲ್ಲಿ ನಡೆದ ಪರೇಶ್ ಮೇಸ್ತಾ ಪ್ರಕರಣ ಗುರುವಾರ ವಿಧಾನಸಭೆಯಲ್ಲಿ ಮತ್ತೆ ಬಿಜೆಪಿ- ಕಾಂಗ್ರೆಸ್ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.
ಕಾನೂನು- ಸುವ್ಯವಸ್ಥೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಮಧ್ಯ ಪ್ರವೇಶ ಮಾಡಿದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ಪರೇಶ್ ಮೇಸ್ತಾ ಕೊಲೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದರು. ಘಟನೆ ನಡೆದಾಗ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲೆಯಲ್ಲೇ ಇದ್ದರೂ ಸಂತ್ರಸ್ತರ ಮನೆಗೆ ಭೇಟಿ ನೀಡಿಲ್ಲ. ಈ ಬಗ್ಗೆ ಮಾತನಾಡುವುದಕ್ಕೆ ನನಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಕಾಂಗ್ರೆಸ್ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ನಾನು ಯಾವುದೇ ಕಾರಣಕ್ಕೂ ಮಾತು ನಿಲ್ಲಿಸುವುದಿಲ್ಲ ಎಂದು ಸಿದ್ದರಾಮಯ್ಯ ಹಠ ಹಿಡಿದರೆ, ಮಹಿಳೆಯರಿಗೆ ಅವಕಾಶ ನೀಡಿ ಎಂದು ಬಿಜೆಪಿ ಶಾಸಕರು ಪಟ್ಟು ಹಿಡಿದರು.
ಅನಗತ್ಯ ವಿಚಾರ ಪ್ರಸ್ತಾಪ ಬೇಡಿ. ಈ ಬಗ್ಗೆ ನಮ್ಮ ಸರಕಾರವೇ ಸಿಬಿಐ ತನಿಖೆಗೆ ನೀಡಿದೆ ಎಂದರೂ ಬಿಜೆಪಿ ಶಾಸಕರು ರೂಪಾಲಿ ನಾಯ್ಕರಿಗೆ ಮಾತನಾಡಲು ಅವಕಾಶ ನೀಡಿ ಎಂದು ಪಟ್ಟು ಹಿಡಿದರು. ಒಂದು ಹಂತದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರು ಗುಂಪಾಗಿ ಧರಣಿಗೆ ಮುಂದಾದರು.ಕೊನೆಗೆ ಎರಡು ಪಕ್ಷದ ಮುಖ್ಯ ಸಚೇತಕರು ಶಾಸಕರ ನ್ನು ಸಮಾಧಾನಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ