ಸಾವಯವ ಗೊಬ್ಬರ ಬಳಸಿ ಕೃಷಿಯಲ್ಲಿ ಖುಷಿ ಕಂಡ ಗ್ರಾಪಂ ಸದಸ್ಯ


Team Udayavani, Mar 25, 2022, 12:55 PM IST

11agriculture

ದೇವನಹಳ್ಳಿ: ಸಮಗ್ರ ಕೃಷಿ ಚಟುವಟಿಕೆ ಮಾಡುವು ದರ ಮೂಲಕ ಜಿಲ್ಲೆ ಮತ್ತು ತಾಲೂಕಿಗೆ ಕನ್ನಮಂಗಲ ಗ್ರಾಪಂ ಸದಸ್ಯ ಲಕ್ಷ್ಮೀಕಾಂತ್‌ ಕೃಷಿಯಲ್ಲಿ ತೊಡಗಿಸಿಕೊಂಡು ರೈತರಿಗೆ ಮಾದರಿಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಯಲುಸೀಮೆಯ ಪ್ರದೇಶವಾಗಿದ್ದು, ಯಾವುದೇ ನದಿಮೂಲ, ನಾಲೆಗಳು ಇಲ್ಲದೆ ಮಳೆಯಾಶ್ರಿತ ಮತ್ತು ಕೊಳವೆಬಾವಿಗಳ ಮೇಲೆ ರೈತರು ಅವಲಂಬಿತರಾಗಿದ್ದಾರೆ. ಇರುವ ಅಲ್ಪಸ್ವಲ್ಪದ ನೀರಿನಲ್ಲಿಯೇ ಬೆಳೆ ಬೆಳೆದು ರೈತರು ತಮ್ಮ ಆರ್ಥಿಕಮಟ್ಟ ಸುಧಾರಿಸುತ್ತಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆ ಕುಂಠಿತ

ಕೊಳವೆಬಾವಿಗಳಲ್ಲಿ ನೀರು ಕಡಿಮೆಯಾಗುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭಗೊಂಡ ನಂತರ ಭೂಮಿಗೆ ಚಿನ್ನದ ಬೆಲೆ ಬಂದಿದೆ. ತಾಲೂಕಿನ ಭಟ್ಟರಮಾರೇನಹಳ್ಳಿ ಇತರೆ ಕಡೆಗಳಲ್ಲಿ ಕೆಐಡಿಬಿ ಭೂಸ್ವಾಧೀನ, ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಡಿಬ ಭೂಸ್ವಾಧೀನ ಪ್ರಕ್ರಿಯೆ, ಕುಂದಾಣ ಹೋಬಳಿ ರಾಮನಾಥಪುರ, ರಬ್ಬನಹಳ್ಳಿ, ದೊಡ್ಡಗೊಲ್ಲಹಳ್ಳಿ ಇತರೆ ಕಡೆಗಳಲ್ಲಿ ಎಸ್‌ಟಿಐಆರ್‌ ಗೆ ಭೂಸ್ವಾಧೀನ ಪ್ರಕ್ರಿಯೆ ಕುಂಠಿತಗೊಂಡಿದೆ. ಅದರಲ್ಲೂ ರೈತರು ಇರುವ ಅಲ್ಪಸ್ವಲ್ಪದ ಜಮೀನಿನಲ್ಲೇ ತರಕಾರಿ ಹಾಗೂ ಇತರೆ ಬೆಳೆ ಬೆಳೆಯುತ್ತಿದ್ದಾರೆ. ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಕೆಂಪತಿಮ್ಮನಹಳ್ಳಿ ಗ್ರಾಮದಲ್ಲಿರುವ ಕನ್ನಮಂಗಲ ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಕೃಷಿಯಲ್ಲಿ ತೊಡಗಿಕೊಂಡು ರೈತರಿಗೆ ಮಾದರಿಯಾಗಿದ್ದಾರೆ.

ಇಳುವರಿ ಪಡೆಯುವಲ್ಲಿ ಯಶಸ್ವಿ

ತಾತ, ಮುತ್ತಾತ ಅವರ ಕಾಲದಿಂದಲೂ ಕೃಷಿಯನ್ನು ಮಾಡಿಕೊಂಡು ಬರುತ್ತಿರುವ ಕೃಷಿಕ ಲಕ್ಷ್ಮೀಕಾಂತ ಮೊದಲಿಗೆ ತಮ್ಮ ಜಮೀನಿನಲ್ಲಿ ಸಮಗ್ರ ಕೃಷಿಯನ್ನು ಮಾಡುವುದರ ಮೂಲಕ ಕೃಷಿ ಭೂಮಿಗೆ ಅತ್ಯಮುಲ್ಯವಾದ ಕೊಟ್ಟಿಗೆ ಗೊಬ್ಬರವನ್ನು ಬಳಸಿ, ಯಾವುದೇ ರಾಸಾಯನಿಕ ಗೊಬ್ಬರ ಸೇರಿಸದೆ, ಉತ್ತಮ ಇಳುವರಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಬ್ಲೂ ದ್ರಾಕ್ಷಿ, ಶುಂಠಿ, ಗುಲಾಬಿ, ತೊಗರಿ ಸೇರಿದಂತೆ ಇತರೆ ತೋಟಗಾರಿಕಾ ಬೆಳೆ ಬೆಳೆದು ಹೆಚ್ಚು ಲಾಭ ಗಳಿಸಿದ್ದಾರೆ.

ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಮಾತನಾಡಿ, ಕೃಷಿಯನ್ನು ತಂದೆ ತಾಯಿಗಳಿಂದ ಮಾಡಿಕೊಂಡು ಬರಲಾಗಿದೆ. ರೋಜಾ ಹೂವು, ಸೌತೇಕಾಯಿ, ತೊಗರಿ, ದ್ರಾಕ್ಷಿ ಸೇರಿ ಹಲವು ತೋಟಗಾರಿಕಾ ಬೆಳೆ ಬೆಳೆದುಕೊಂಡು ಬರಲಾಗುತ್ತಿದೆ. ಸಾವಯವ ಪದ್ಧತಿಯಲ್ಲಿ ಕೊಟ್ಟಿಗೆ ಗೊಬ್ಬರವನ್ನು ಬಳಸಿಕೊಂಡು ಗಿಡಗಳಿಗೆ ಫ‌ಲವತ್ತತೆ ಹೆಚ್ಚಿಸಿಕೊಂಡು, ಉತ್ತಮ ಇಳುವರಿ ಪಡೆದು ಲಾಭಗಳಿಸಿಕೊಂಡು ಬರಲಾಗುತ್ತಿದೆ ಎಂದರು.

ಲಾಭ ಕಾಣಲು ಸಾಧ್ಯ

ಕಳೆದ ಬಾರಿ ದ್ರಾಕ್ಷಿಯನ್ನು ಎರಡೂವರೆ ಎಕರೆ ಪ್ರದೇಶದಲ್ಲಿ 30 ಟನ್‌ ಬೆಳೆದಿದ್ದೇವೆ. ಹನಿ ನೀರಾವರಿ ಪದ್ಧತಿಯಲ್ಲಿ ಬೆಳೆಯಲಾಗುತ್ತಿದೆ. ಬಹಳಷ್ಟು ರೈತರು ಈಗಲೂ ಸಹ ಹನಿ ನೀರಾವರಿ ಪದ್ಧತಿಯನ್ನು ಬಳಸಿಕೊಂಡು ಬೆಳೆಯನ್ನು ಬೆಳೆದಿದ್ದಾರೆ. ಭೂಮಿಗೆ ಬೇಕಾದಂತಹ ಪೋಷಕಾಂಶವನ್ನು ಸರಿಯಾದ ಸಮಯಕ್ಕೆ ನೀಡಿದರೆ ಬೆಳೆ ಉತ್ತಮವಾಗಿ ಬರಲಿದ್ದು, ಹಾಕಿರುವ ಬಂಡವಾಳ ಸಮೇತ ಲಾಭ ಕಾಣಲು ಸಾಧ್ಯವಾಗುತ್ತದೆ ಎಂದರು.

ಸಮಸ್ಯೆ ಪರಿಹಾರಕ್ಕೆ ಶ್ರಮ

ಗ್ರಾಪಂ ಸದಸ್ಯನಾಗಿ ರೈತರ ಮಗನಾಗಿರುವುದರಿಂದ ಕಷ್ಟಗಳ ಬಗ್ಗೆ ಅರಿವಿದೆ. ಜನರ ಕೆಲಸ ಕಾರ್ಯಗಳಿಗೆ ಸದಾ ಸ್ಪಂದಿಸುವ ಕೆಲಸ ಮಾಡಿಕೊಂಡು ಬರಲಾಗಿದೆ. ಗ್ರಾಮಗಳಲ್ಲಿ ಮೂಲಭೂತ ಸಮಸ್ಯೆ ಇದ್ದರೆ ಕೂಡಲೇ ಪರಿಹರಿಸಲು ಗ್ರಾಪಂ ಮಟ್ಟದಲ್ಲಿ ಶ್ರಮಿಸಲಾಗುತ್ತಿದೆ. ಕೃಷಿಯ ಜೊತೆ ಜೊತೆಯಲ್ಲಿ ಜನಸ್ಪಂದನೆ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ ಎಂದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.