ಮಹಿಳೆಗೆ ವಂಚನೆ: ಸಾಮಗ್ರಿ ವ್ಯವಸ್ಥಾಪಕನ ಅಮಾನತಿಗೆ ಆಗ್ರಹ
Team Udayavani, Mar 25, 2022, 2:39 PM IST
ಮೈಸೂರು: ನಗರದ ಮೈಲ್ಯಾಕ್ ಕಾರ್ಖಾನೆಯಲ್ಲಿ ಸಾಮಗ್ರಿ ವ್ಯವಸ್ಥಾಪಕರಾಗಿದ್ದ ಎಚ್.ಎಸ್. ಶಶಿಕಾಂತ್ ಎಂಬುವವರು ವಿವಾಹವಾಗುವುದಾಗಿ ನಂಬಿಸಿ ಕಾರ್ಖಾನೆಯ ಮಹಿಳೆಯೊಬ್ಬರಿಗೆ ವಂಚಿಸಿದ್ದರು. ಈ ಕುರಿತು ತನಿಖೆ ನಡೆದು ಆರೋಪ ಸಾಬೀತಾಗಿತ್ತು. ಆಗ ವಜಾಗೊಂಡಿದ್ದ ಶಶಿಕಾಂತ್ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳುವ ಮೂಲಕ ಸಂತ್ರಸ್ತ ಮಹಿಳೆಗೆ ಅನ್ಯಾಯ ಎಸಗಲಾಗಿದೆ ಎಂದು ಕಂಪನಿ ಷೇರುದಾರರು ಮತ್ತು ನಿವೃತ್ತ ಉದ್ಯೋಗಿಗಳು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎನ್. ಪುಟ್ಟಯ, ಕಂಪನಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಶಶಿಕಾಂತ್ ಅವರು ವಿವಾಹವಾಗುವುದಾಗಿ ನಂಬಿಸಿ, ವಂಚಿಸಿದ್ದಾರೆ. ಈ ಬಳಿಕ ಮಹಿಳೆ ನೀಡಿದ ದೂರನ್ನು ಆಧರಿಸಿ ತನಿಖೆ ನಡೆದು ಶಶಿಕಾಂತ್ ಅವರನ್ನು ವಜಾಗೊಳಿಸಲಾಗಿತ್ತು. ಆದರೆ ಬಳಿಕ ಮನವಿ ಆಧರಿಸಿ ಶಶಿಕಾಂತ್ ಅವರನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗಿದೆ.
ಪ್ರಕರಣದಲ್ಲಿ ಮಹಿಳೆಗೆ ನ್ಯಾಯ ದೊರಕದಂತೆ ಮಾಡಲಾಗಿದೆ. ಕೂಡಲೇ ಕಾರ್ಖಾನೆ ಆಡಳಿತವು ಶಶಿಕಾಂತ್ ಅವರನ್ನು ವಜಾಗೊಳಿಸುವ ಮೂಲಕ ಮಹಿಳೆಗೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್