ರೈತರು ಆತ್ಮಹತ್ಯೆಗೆ ಶರಣಾಗದೆ ಇತರರಿಗೆ ಮಾದರಿಯಾಗಲಿ

ರಾಜ್ಯ ಮಟ್ಟದ ಜಾನಪದ ಮಹಾಸಮ್ಮೇಳನ ಸಮಾರೋಪ

Team Udayavani, Mar 25, 2022, 3:31 PM IST

15

ರಾಮದುರ್ಗ: ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಂಡಲ್ಲಿ ಸಮಾಜದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಯನ್ನು ತಡೆಯಬಹುದಾಗಿದೆ ಎಂದು ಮಾಜಿ ಸಚಿವ ಶಶಿಕಾಂತ ನಾಯಕ ಹೇಳಿದರು.

ಪಟ್ಟಣದ ವಿದ್ಯಾಚೇತನ ಶಾಲಾ ಆವರಣದ ಈಶ್ವರ ಮಂಟೂರ ಮತ್ತು ಶಂಕರ ನಾಯಕ ವೇದಿಕೆಯಲ್ಲಿ ಅವರಾದಿ ಶಿವಪೇಟೆಯ ಓಂ ಶಿವ ಮೇಳದ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಜಾನಪದ ಮಹಾಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶಕ್ಕೆ ಅನ್ನ ನೀಡುವ ರೈತ ಸಾಲದ ಶೂಲಕ್ಕೆ ಹೆದರಿ ಸಾಯುವ ಬದಲು ಜಾನಪದ ಸೊಗಡಿನ ಒಳಾರ್ಥವನ್ನು ಅರಿತು ಉತ್ತಮ ಬದುಕನ್ನು ಸಾಗಿಸಿ ಇತರರಿಗೆ ಮಾದರಿಯಾಗಬೇಕು ಎಂದು ಅವರು ರೈತರಿಗೆ ಕಿವಿಮಾತು ಹೇಳಿದರು.

ಜಾನಪದ ವಿಶ್ವವಿದ್ಯಾಲಯದ ಸೆನೆಟ್‌ ಸದಸ್ಯೆ ಲಕ್ಷ್ಮೀ ಆರಿಬೆಂಚಿ ಮಾತನಾಡಿ, ಮನುಷ್ಯನ ಹುಟ್ಟಿನಿಂದ ಸಾಯುವವರೆಗೂ ಜಾನಪದ ಜೊತೆಗೆ ನಂಟಿದೆ. ಆಧುನಿಕ ಯುಗದಲ್ಲಿ ಯುವಕರು ಜಾಪದದ ಹೆಸರಿನಲ್ಲಿ ಜನಪ್ರಿಯ ಗೀತೆಗಳಿಗೆ ಜೋತುಬಿದ್ದಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಪುರಸಭೆ ಅಧ್ಯಕ್ಷ ಶಂಕರ ಬೆನ್ನೂರ, ಬೆಂಬಳಗಿ ಕಾಲೇಜು ಪ್ರಾಂಶುಪಾಲೆ ಡಾ| ರಾಜಶ್ರೀ ಗುದಗನವರ, ಪ್ರಾಧ್ಯಾಪಕ ಪ್ರೊ| ಎಸ್‌.ಎಂ. ಸಕ್ರಿ, ಮೀರಾ ಮೋಟೆ ಮಾತನಾಡಿದರು. ಜಾನಪದ ವಿದ್ವಾಂಸ ಪ್ರೊ| ಪಿ.ಎಲ್‌. ಮಿಸಾಳೆ ವಿಶೇಷ ಉಪನ್ಯಾಸ ನೀಡಿದರು. ನರೇಗಲ್ಲ ಸರಕಾರಿ ಕಾಲೇಜಿನ ಪ್ರಾದ್ಯಾಪಕ ಶಿವಮೂರ್ತಿ ಕುರೇರ ಪ್ರಾಸ್ತಾವಿಕ ಮಾತನಾಡಿದರು. ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಸವರಾಜ ಶಿಗ್ಗಾಂವಿ, ಮುನವಳ್ಳಿಯ ತಾನಾಜಿ ಮುರಂಕರ ಮತ್ತು ಜಾನಪದ ವಿಶ್ವವಿದ್ಯಾಲಯದ ಸೆನೆಟ್‌ ಸದಸ್ಯೆ ಲಕ್ಷ್ಮೀ ಆರಿಬೆಂಚಿ ಅವರಿಗೆ ಜಾನಪದ ಶಿವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಿದ ದಾನಿಗಳನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಸಂಗಪ್ಪ ಹೂಗಾರ, ಪುಂಡಲೀಕ ನಡಗಡ್ಡಿ, ಚನ್ನಪ್ಪ ಮಾದರ, ಈರನಗೌಡ ಪಾಟೀಲ ಇತರರು ಇದ್ದರು. ಮಂಜುನಾಥ ಕೊಳದೂರ ಸ್ವಾಗತಿಸಿದರು. ರವಿ ಕಮ್ಮಾರ ನಿರೂಪಿಸಿದರು. ಕಲಾವಿದ ಸಿದ್ದು ಮೋಟೆ ವಂದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.