ವಿಜ್ಞಾನ-ತಂತ್ರಜ್ಞಾನ ಉತ್ತಮ ಕಾರ್ಯಕ್ಕೆ ಬಳಕೆಯಾಗಲಿ; ಡಾ| ಪಿ.ವಿ. ಕೃಷ್ಣ ಭಟ್‌

ಯುಕ್ರೇನ್‌ ಮೇಲಿನ ರಷ್ಯಾ ದಾಳಿ ಮತ್ತು ಅದರಿಂದಾಗಿರುವ ಅಪಾರ ಸಾವು-ನೋವುಗಳು ಸಂಭವನೀಯ ದುರಂತದ ಮುನ್ಸೂಚನೆಯಾಗಿದೆ

Team Udayavani, Mar 25, 2022, 3:10 PM IST

ವಿಜ್ಞಾನ-ತಂತ್ರಜ್ಞಾನ ಉತ್ತಮ ಕಾರ್ಯಕ್ಕೆ ಬಳಕೆಯಾಗಲಿ; ಡಾ| ಪಿ.ವಿ. ಕೃಷ್ಣ ಭಟ್‌

ದಾವಣಗೆರೆ: ವಿಜ್ಞಾನ ಮತ್ತು ತಂತ್ರಜ್ಞಾನ ಎರಡು ಅಲಗಿನ ಕತ್ತಿಯಂತೆ. ಅದು ಜಗತ್ತಿಗೆ ತಾರಕ ಆಗಬಲ್ಲದು. ದುಷ್ಟ ವ್ಯಕ್ತಿಗಳ ಕೈಗೆ ಸಿಕ್ಕಾಗ ಮಾರಕವೂ ಆಗಬಲ್ಲದು. ಇದು ಕಲ್ಯಾಣಕಾರಿಯಾಗಬೇಕಾದರೆ ಆ ರೀತಿಯ ಜೀವನಮೌಲ್ಯ ಅರಳಿಸುವುದು ಅತ್ಯಗತ್ಯ ಎಂದು ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯದ ಮಾಜಿ ಕುಲಾಧಿಪತಿ ಡಾ| ಪಿ.ವಿ. ಕೃಷ್ಣ ಭಟ್‌ ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಗುರುವಾರ ನಡೆದ ಒಂಭತ್ತನೇ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜಗತ್ತಿನ ಹಲವು ರಾಷ್ಟ್ರಗಳು ವಿಜ್ಞಾನ, ತಂತ್ರಜ್ಞಾನದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿದ್ದರೂ, ಆ ಪ್ರಗತಿ ಮನುಕುಲಕ್ಕೆ ಕಲ್ಯಾಣಕಾರಿಯಾಗುವ ಬದಲಿಗೆ ಹಾನಿಕಾರಕವಾಗುವ ಸಂಭವವನ್ನೇ ಸೂಚಿಸುತ್ತಿವೆ. ಕೋವಿಡ್‌ ಸೂಕ್ಷ್ಮಾಣುಗಳನ್ನು ಚೀನಾ ದೇಶದ ಪ್ರಯೋಗ ಶಾಲೆಯಲ್ಲಿ ನಿರ್ಮಾಣ ಮಾಡಲಾಯಿತೆಂಬ ಸಂಗತಿ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಇತ್ತೀಚಿನ ಯುಕ್ರೇನ್‌ ಮೇಲಿನ ರಷ್ಯಾ ದಾಳಿ ಮತ್ತು ಅದರಿಂದಾಗಿರುವ ಅಪಾರ ಸಾವು-ನೋವುಗಳು ಸಂಭವನೀಯ ದುರಂತದ ಮುನ್ಸೂಚನೆಯಾಗಿದೆ ಎಂದರು.

ದೃಷ್ಟಿಕೋನ ಬದಲಾಗಲಿ: ವಿಶ್ವ ಇಂದು ಎದುರಿಸುತ್ತಿರುವ ಮತ್ತೂಂದು ಸಮಸ್ಯೆ ಎಂದರೆ ಪರಿಸರ ಮಾಲಿನ್ಯದ ಸಮಸ್ಯೆ. ಮುಂದುವರೆದ ದೇಶಗಳೆಂದು ಕರೆಸಿಕೊಳ್ಳುವ ದೇಶಗಳೇ ಇಂದು ಈ ಸಮಸ್ಯೆಯ ಉತ್ಕಟಾವಸ್ಥೆ ತಲುಪಿದೆ. ಪರಿಸರ ಮಾಲಿನ್ಯ ಸಮಸ್ಯೆ ಕುರಿತು ಚರ್ಚಿಸಲು ಅಂತಾರಾಷ್ಟ್ರೀಯ ಸಮ್ಮೇಳನಗಳು ನಡೆಯುತ್ತಿವೆ. ಆದರೆ ಪರಿಹಾರ ಮಾತ್ರ ದೂರದ ಮಾತಾಗಿದೆ. ಇದಕ್ಕೆ ಪರಿಹಾರ ಸಿಗಬೇಕಾದರೆ ಜೀವನದ ಅವಶ್ಯಕತೆಗಳ ಕುರಿತ ನಮ್ಮ ದೃಷ್ಟಿಕೋನ ಬದಲಾಗಬೇಕು ಎಂದು ಡಾ| ಕೃಷ್ಣ ಭಟ್‌ ಪ್ರತಿಪಾದಿಸಿದರು.

ಪಾಶ್ಚಿಮಾತ್ಯರ ಚಿಂತನೆ ಪ್ರಕಾರ ಪ್ರಕೃತಿ ಶೋಷಣೆ ಮೂಲಕವೇ ನಾವು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯ. ಆದರೆ ಭಾರತದ ದೃಷ್ಟಿ ಪ್ರಕೃತಿಯ ಶೋಷಣೆಯದಲ್ಲ. ಹಸುವಿನಿಂದ ಹಾಲು ಕರೆದು ನಾವು ನಮ್ಮನ್ನು ಪೋಷಣೆ ಮಾಡಿಕೊಳ್ಳುವಂತೆ ಪ್ರಕೃತಿಗೆ ಹಾನಿಯಾಗದಂತೆ ಪ್ರಕೃತಿಯಿಂದ ನಾವು ನಮಗೆ ಅಗತ್ಯವಾದ ಪೋಷಕ ದ್ರವ್ಯ ಪಡೆಯುವುದಾಗಿದೆ. ಪ್ರಕೃತಿ ವಿನಾಶದ ದುರಂತದಿಂದ ಜಗತ್ತು ತನ್ನನ್ನು ರಕ್ಷಿಸಿಕೊಳ್ಳಬೇಕಾದರೆ ಪ್ರಕೃತಿ ಕುರಿತ ಭಾರತೀಯ ದೃಷ್ಟಿಕೋನ ಅಳವಡಿಸಿಕೊಳ್ಳುವುದು ಅಗತ್ಯ ಎಂದರು.

ದೇಶದಲ್ಲಿ ಸುಮಾರು 800ಕ್ಕೂ ಹೆಚ್ಚು ವಿವಿಗಳಿವೆ ಎಂದು ಹೇಳಿಕೊಂಡರೂ ವಿಶ್ವ ಸ್ತರದಲ್ಲಿ ಎಣಿಕೆಯಾಗಬಲ್ಲ ವಿವಿಗಳು ಬೆರಳೆಣಿಕೆಯಷ್ಟೂ ಇಲ್ಲ . ಜತೆಗೆ ವಿವಿಗಳಿಂದ ಹೊರ ಬರುತ್ತಿರುವ ವಿದ್ಯಾರ್ಥಿಗಳು ರಾಷ್ಟ್ರ ಕಟ್ಟುವ, ಭಾರತವನ್ನು ವಿಶ್ವದ ಅಗ್ರಮಾನ್ಯ ರಾಷ್ಟ್ರವಾಗಿಸುವಲ್ಲಿ ಮಾಡುವ ಕನಸು ಹೊತ್ತು ಸಹ ಬರುತ್ತಿಲ್ಲ ಎಂಬುದು ವಿಷಾದದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಧರ್ಮದ ಅರ್ಥ ತಿಳಿಯದ್ದರಿಂದ ಅನರ್ಥ
ಭಾರತೀಯ ಪರಂಪರೆಯಲ್ಲಿ ಜೀವನಮೌಲ್ಯಗಳ ಸಮುತ್ಛಯವನ್ನೇ “ಧರ್ಮ’ ಎಂದು ಕರೆಯಲಾಗಿದೆ. ಧರ್ಮ ಶಬ್ದದ ಅರ್ಥ ವ್ಯಾಪ್ತಿಯನ್ನು ಸರಿಯಾಗಿ ತಿಳಿಯದೆ ಅದನ್ನು “ರಿಲೀಜನ್‌’ ಶಬ್ದಕ್ಕೆ ಪರ್ಯಾಯವಾಗಿ ಪರಿಗಣಿಸಿರುವುದು ಬಹಳಷ್ಟು ಅನರ್ಥಗಳಿಗೆ ಕಾರಣವಾಗಿದೆ ಎಂದು ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯದ ಮಾಜಿ ಕುಲಾಧಿಪತಿ ಡಾ| ಪಿ.ವಿ. ಕೃಷ್ಣ ಭಟ್‌ಅಭಿಪ್ರಾಯಿಸಿದರು.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.