ಸೇನೆ ನಿಯೋಜನೆ ಸ್ನೇಹಕ್ಕೆ ಅಡ್ಡಿ; ಚೀನ ವಿದೇಶಾಂಗ ಸಚಿವರಿಗೆ ಭಾರತದ ಖಡಕ್‌ ಮಾತು

ಉಭಯ ದೇಶಗಳ ಸಂಬಂಧ ಸಹಜವಾಗಿಲ್ಲ ಎಂದ ಜೈಶಂಕರ್‌

Team Udayavani, Mar 26, 2022, 7:05 AM IST

ಸೇನೆ ನಿಯೋಜನೆ ಸ್ನೇಹಕ್ಕೆ ಅಡ್ಡಿ; ಚೀನ ವಿದೇಶಾಂಗ ಸಚಿವರಿಗೆ ಭಾರತದ ಖಡಕ್‌ ಮಾತು

ಹೊಸದಿಲ್ಲಿ: ಗಡಿಯಲ್ಲಿ ಹೆಚ್ಚು ವರಿ ಸೇನೆಯನ್ನು ಜಮಾಯಿಸಿ ಸ್ನೇಹವನ್ನು ಉತ್ತಮ ಗೊಳಿಸಬೇಕು ಎಂದು ಬಯಸುವುದು ಸರಿಯಲ್ಲ. ಇಂಥ ಕ್ರಮದಿಂದ ಉಭಯ ದೇಶಗಳ ಸ್ನೇಹ ಗಟ್ಟಿಯಾಗಲು ಖಂಡಿತಾ ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್‌ ಶುಕ್ರವಾರ ಚೀನದ ವಿದೇಶಾಂಗ ಸಚಿವರಿಗೆ ಹೇಳಿದರು.

ಪೂರ್ವ ಲಡಾಖ್‌ನಲ್ಲಿ ನಿಯೋಜನೆಗೊಂಡಿರುವ ಸೇನೆಯನ್ನು ಚೀನ ಸಂಪೂರ್ಣವಾಗಿ ಹಿಂಪಡೆಯುವ ವರೆಗೂ ಉಭಯ ದೇಶಗಳ ನಡುವೆ “ಸಹಜ’ ಬಾಂಧವ್ಯ ಏರ್ಪಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಚೀನದ ವಿದೇಶಾಂಗ ಸಚಿವ ವಾಂಗ್‌ ಯಿ ಅವರು ಗುರುವಾರ ರಾತ್ರಿ ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದು, ಶುಕ್ರವಾರ ಸಚಿವ ಜೈಶಂಕರ್‌ ಹಾಗೂ ಎನ್‌ಎಸ್‌ಎ ದೋವಲ್‌ ಜತೆ ಮಾತುಕತೆ ನಡೆಸಿದ್ದಾರೆ.

ಈ ಮೂಲಕ 2020ರಲ್ಲಿ ಪೂರ್ವ ಲಡಾಖ್‌ನಲ್ಲಿ ಆರಂಭವಾದ ಗಡಿ ಸಂಘರ್ಷದ ಬಳಿಕ ಇದೇ ಮೊದಲ ಬಾರಿಗೆ ಎರಡೂ ದೇಶಗಳ ನಡುವೆ ಉನ್ನತ ಮಟ್ಟದ ಮಾತುಕತೆ ನಡೆದಂತಾಗಿದೆ.

ಸಂಬಂಧ ಸಹಜವಾಗಿಲ್ಲ
ಸುಮಾರು 3 ತಾಸುಗಳ ಮಾತುಕತೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೈಶಂಕರ್‌, ಸದ್ಯಕ್ಕೆ ಎರಡೂ ದೇಶಗಳ ನಡುವಿನ ಸಂಬಂಧವು “ಸಹಜ’ವಾಗಿದೆಯೇ ಎಂದು ನೀವು ಪ್ರಶ್ನಿಸಿದರೆ, ನಾನು “ಇಲ್ಲ’ ಎಂದು ಉತ್ತರಿಸುತ್ತೇನೆ. ಗಡಿಯಲ್ಲಿ ಚೀನ ಸೇನೆ ಜಮಾವಣೆ ಯಾಗಿರುವುದೇ ಉಭಯ ದೇಶಗಳ ನಡುವಿನ ಸಹಜ ಸಂಬಂಧಕ್ಕೆ ಪ್ರಮುಖ ತಡೆಯಾಗಿದೆ. 2020ರ ಎಪ್ರಿಲ್‌ನಿಂದಲೂ ಗಡಿಯಲ್ಲಿ ಚೀನದ ಸೇನೆ ನಿಯೋಜನೆ ಗೊಂಡಿರುವುದು ಹಲವು ರೀತಿಯ ಉದ್ವಿಗ್ನತೆ, ಸಂಘರ್ಷಕ್ಕೆ ಕಾರಣವಾಗಿದೆ. ಅದನ್ನು ನಾವು ಸಹಜ ಸಂಬಂಧ ಎನ್ನಲಾಗುವುದಿಲ್ಲ. ಈ ಸಮಸ್ಯೆಯನ್ನು ಪೂರ್ಣಪ್ರಮಾಣದಲ್ಲಿ ಪರಿಹರಿಸಿಕೊಳ್ಳುವ ಪ್ರಯತ್ನವನ್ನು ಮಾತುಕತೆ ವೇಳೆ ಮಾಡಲಾಗಿದೆ. ಈ ವಿಚಾರದ ಬಗ್ಗೆ ವಾಂಗ್‌ ಯಿ ಅವರಿಗೆ ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಭಾರತದ 16 ಮಂದಿ ಮೀನುಗಾರರನ್ನು ವಾಪಸ್‌ ಕರೆಯಿಸಿಕೊಳ್ಳಲು ಭಾರತ ಬದ್ಧ: ಕೇಂದ್ರ

ಕಾಮಗಾರಿ ಪ್ರಗತಿಯಲ್ಲಿದೆ
ಪೂರ್ವ ಲಡಾಖ್‌ನ ಪ್ರಸ್ತುತ ಪರಿಸ್ಥಿತಿಯು “ಪ್ರಗತಿಯಲ್ಲಿರುವ ಕಾಮಗಾರಿ’ಯಂತಿದೆ. ಆದರೆ, ಈ ಪ್ರಗತಿಯು ಅಗತ್ಯಕ್ಕಿಂತ ನಿಧಾನಗತಿಯಲ್ಲಿದೆ. ಅದಕ್ಕೆ ವೇಗ ನೀಡಬೇಕು ಎನ್ನುವುದೇ ಇಂದಿನ ಮಾತುಕತೆಯ ಉದ್ದೇಶವಾಗಿತ್ತು ಎಂದೂ ಜೈಶಂಕರ್‌ ಹೇಳಿದ್ದಾರೆ.

ಉಭಯ ದೇಶಗಳ ಹಿರಿಯ ಸೇನಾ ಕಮಾಂಡರ್‌ಗಳ ನಡುವೆ ಈಗಾಗಲೇ 15 ಸುತ್ತುಗಳ ಮಾತುಕತೆ ನಡೆದಿವೆ. ಕೆಲವು ಸಂಘರ್ಷ ವಲಯಗಳಿಂದ ಎರಡೂ ದೇಶಗಳ ಸೇನೆಗಳು ವಾಪಸಾಗಿವೆ. ಆದರೆ ಇನ್ನೂ ಕೆಲವು ಪ್ರದೇಶಗಳಲ್ಲಿ ಪರಿಸ್ಥಿತಿ ಹಾಗೆಯೇ ಇದೆ. ಮಾತುಕತೆ ನಡೆಯಬೇಕೆಂದರೆ, ಸೇನೆ ಜಮಾವಣೆಯನ್ನು ಹಿಂಪಡೆಯ ಬೇಕು. ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯೇ ಸ್ಥಿರ ಹಾಗೂ ಸಹಕಾರಯುತ ಬಾಂಧವ್ಯದ ಅಡಿಪಾಯವಾಗಿದೆ ಎಂದಿದ್ದಾರೆ.

ಶೀಘ್ರ ಪರಿಹಾರಕ್ಕೆ ಆಗ್ರಹ
ಪೂರ್ವ ಲಡಾಖ್‌ನ ಉಳಿದ ಕಡೆಗಳಿಂದಲೂ ಸೇನೆಗಳನ್ನು ಹಿಂಪಡೆ ಯುವ ನಿಟ್ಟಿನಲ್ಲಿ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಚೀನ ವಿದೇಶಾಂಗ ಸಚಿವ ವಾಂಗ್‌ ಯಿ ಅವರಿಗೆ ದೋವಲ್‌ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.