ನಗರಸಭೆ ಕುರ್ಚಿಗಾಗಿ ಕೈ-ಕಮಲ ಕುಸ್ತಿ


Team Udayavani, Mar 26, 2022, 12:50 PM IST

7chair

ರಾಯಚೂರು: ನಗರಸಭೆಯ ಉಳಿದ ಅವಧಿಗೆ ಅಧಿಕಾರ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್‌ ಮತ್ತೂಮ್ಮೆ ರಾಜಕೀಯ ಪ್ರಹಸನಕ್ಕಿಳಿದಿವೆ. ಬಿಜೆಪಿ ತನ್ನ ಸದಸ್ಯರನ್ನು ಹಿಡಿದಿಡುವ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿದ್ದರೆ, ಕಾಂಗ್ರೆಸ್‌ ಕೂಡ ತನಗಿರುವ ಸದಸ್ಯ ಬಲದಿಂದ ಅಧಿಕಾರ ಪಡೆಯುವ ತಂತ್ರಗಾರಿಕೆಯಲ್ಲಿದೆ.

ಕೇವಲ ಮೂರು ಸದಸ್ಯರನ್ನು ಹೊಂದಿರುವ ಜೆಡಿಎಸ್‌ ಕೂಡ ಈ ಚುನಾವಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಆದರೆ, ಜೆಡಿಎಸ್‌ ಸದಸ್ಯರು ಪಕ್ಷವನ್ನು ಲೆಕ್ಕಿಸದೆ ಬಿಜೆಪಿ ಸದಸ್ಯರೊಟ್ಟಿಗೆ ಗುರುತಿಸಿಕೊಂಡು ಪ್ರವಾಸ ಹೋಗಿದ್ದಾರೆ. ಈ ಕಾರಣಕ್ಕೆ ಪಕ್ಷದಿಂದ ವಿಪ್‌ ಜಾರಿ ಮಾಡಲಾಗಿದೆ.

ಆ ಮೂಲಕ ಜೆಡಿಎಸ್‌ ಸದಸ್ಯರ ಬೆಂಬಲ ಯಾರಿಗೆ ಎಂಬ ಲೆಕ್ಕಾಚಾರ ಶುರುವಾಗಿದೆ. ಒಟ್ಟು 35 ಸದಸ್ಯ ಬಲದ ನಗರಸಭೆಯಲ್ಲಿ 12 ಬಿಜೆಪಿ ಸದಸ್ಯರಿದ್ದರೆ, 11 ಕಾಂಗ್ರೆಸ್‌ ಸದಸ್ಯರಿದ್ದಾರೆ. 9 ಪಕ್ಷೇತರ ಸದಸ್ಯರಿದ್ದಾರೆ. ಉಳಿದ ಮೂವರು ಜೆಡಿಎಸ್‌ ನಿಂದ ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ನ ಸದಸ್ಯ ಈ.ವಿನಯಕುಮಾರ್‌ ಕಾಂಗ್ರೆಸ್‌ ಮಾತ್ರವಲ್ಲದೇ ಬಿಜೆಪಿ ಸದಸ್ಯರ ಬೆಂಬಲ ಪಡೆದು ಅಧಿಕಾರ ಚುಕ್ಕಾಣಿ ಹಿಡಿದಿದ್ದರು. ಆದರೆ, ಅವರ ವಿರುದ್ಧ ಅವಿಶ್ವಾಸ ಮಂಡನೆಯಾಗಿದ್ದು, ಮಾ.30ರಂದು ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ.

ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಕಾಂಗ್ರೆಸ್‌ ಬಿಜೆಪಿ ಇಬ್ಬರಲ್ಲೂ ಆಕಾಂಕ್ಷಿಗಳಿದ್ದಾರೆ. ಬಿಜೆಪಿಯಲ್ಲಿ ಲಲಿತಾ ಕಡಗೋಲು ಆಂಜನೇಯ ಅವರ ಹೆಸರು ಕೇಳಿ ಬರುತ್ತಿದ್ದರೆ, ಕಾಂಗ್ರೆಸ್‌ನಲ್ಲಿ ಸಾಜಿದ್‌ ಸಮೀರ್‌ ಹೆಸರು ಮುಂಚೂಣಿಯಲ್ಲಿದೆ. ಅಧಿಕಾರ ಹಿಡಿಯಲು 18 ಸದಸ್ಯ ಬಲದ ಅಗತ್ಯವಿದ್ದು, ಬಿಜೆಪಿಗೆ ಜೆಡಿಎಸ್‌ ಸದಸ್ಯರ ಜತೆಗೆ ಇನ್ನೂ ಮೂವರ ಬೆಂಬಲವೂ ಬೇಕಿದೆ.

ನಗರ ಶಾಸಕರು, ಸಂಸದರು ಕೂಡ ಹಕ್ಕು ಚಲಾಯಿಸಬಹುದಾಗಿದೆ. ಅದೇ ಕಾರಣಕ್ಕೆ ಈಚೆಗೆ ವಿಧಾನ ಪರಿಷತ್‌ಗೆ ಆಯ್ಕೆಯಾದ ಶರಣಗೌಡ ಬಯ್ನಾಪುರ ಚುನಾವಣೆಯಲ್ಲಿ ಹಕ್ಕು ಚಲಾಯಿಸುವ ಉದ್ದೇಶದಿಂದ ಲಿಂಗಸೂಗೂರಿನಿಂದ ರಾಯಚೂರಿಗೆ ವಿಳಾಸ ಬದಲಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಅವರ ಹಕ್ಕು ಚಲಾವಣೆಗೆ ಅವಕಾಶ ನೀಡದಂತೆ ಒತ್ತಾಯಿಸಿದೆ.

ಅವರು ಮತದಾನದ ಹಕ್ಕು ಕೇಳಿರುವುದು ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಇನ್ನೂ ಒಂಭತ್ತು ಜನ ಪಕ್ಷೇತರರು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಗಳಾಗಿದ್ದು, ಅವರು ಮತ್ತೆ ಕಾಂಗ್ರೆಸ್‌ನಲ್ಲಿಯೇ ಗುರುತಿಸಿಕೊಂಡಿದ್ದಾರೆ. ಆದರೆ, ಯಾವುದೇ ಚಿಹ್ನೆಯಡಿ ಗೆಲುವು ಸಾಧಿಸದ ಕಾರಣ ಅವರು ಯಾರಿಗಾದರೂ ಬೆಂಬಲ ನೀಡಬಹುದು. ಒಂದು ವೇಳೆ ಪಕ್ಷೇತರರಲ್ಲಿ ಕೆಲವರು ಬಿಜೆಪಿಯತ್ತ ವಾಲಿದರೂ ಅಧಿಕಾರ ಕಾಂಗ್ರೆಸ್‌ ಕೈ ತಪ್ಪಲಿದೆ.

ಶಾಸಕ ಡಾ| ಪಾಟೀಲ್‌ ಮುಂದಾಳತ್ವ

ಆಡಳಿತದಲ್ಲಿ ನಗರ ಶಾಸಕ ಡಾ| ಶಿವರಾಜ್‌ ಪಾಟೀಲ್‌ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಈಚೆಗೆ ಅಧಿಕಾರದಿಂದ ಕೆಳಗಿಳಿದ ನಗರಸಭೆ ಅಧ್ಯಕ್ಷ ಈ.ವಿನಯಕುಮಾರ್‌ ದೂರಿದ್ದರು. ಆದರೆ, ಈಗ ಪ್ರವಾಸ ಹೋಗಿರುವ ಬಿಜೆಪಿ-ಜೆಡಿಎಸ್‌ ಸದಸ್ಯರ ತಂಡದ ಮುಂದಾಳತ್ವವನ್ನು ಶಾಸಕರೇ ವಹಿಸಿಕೊಳ್ಳುವ ಮೂಲಕ ತಮ್ಮ ಪ್ರಾಬಲ್ಯ ಇರುವುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆಂಧ್ರದ ವಿಜಯವಾಡದಲ್ಲಿ ನಗರಸಭೆ ಸದಸ್ಯರ ಜತೆ ಶಾಸಕರು ಕೂಡ ಇರುವ ಫೋಟೋಗಳು ಹರಿದಾಡುತ್ತಿವೆ. ನಗರಸಭೆಯಲ್ಲಿ ತಮ್ಮ ಪ್ರಾಬಲ್ಯ ಮುಂದುವರಿಸುವ ನಿಟ್ಟಿನಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಶಾಸಕರೇ ಜವಾಬ್ದಾರಿ ಹೊತ್ತಿರುವಂತೆ ಕಾಣಿಸುತ್ತದೆ.

ಮನೆಗಳಿಗೆ ನೋಟಿಸ್‌ !

ಕೇವಲ ಮೂರು ಸ್ಥಾನ ಪಡೆದ ಜೆಡಿಎಸ್‌ ನಿರ್ಣಾಯಕ ಸ್ಥಾನದಲ್ಲಿದೆ. ಜೆಡಿಎಸ್‌ ಸದಸ್ಯರು ಪಕ್ಷದ ಗಮನಕ್ಕೆ ತಾರದೆ ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಪಕ್ಷದಿಂದ ಅವರಿಗೆ ವಿಪ್‌ ಜಾರಿ ಮಾಡಲಾಗಿದೆ. ನಾವು ಯಾರಿಗೆ ಬೆಂಬಲ ನೀಡಿ ಎಂದು ಹೇಳುತ್ತೇವೆಯೋ ಅವರಿಗೆ ಮತ ನೀಡಬೇಕು. ಇಲ್ಲವಾದರೆ ಸದಸ್ಯತ್ವ ರದ್ದುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿ ಸದಸ್ಯರ ಮನೆಗಳಿಗೆ ನೋಟಿಸ್‌ ಅಂಟಿಸಲಾಗಿದೆ.

ಟಾಪ್ ನ್ಯೂಸ್

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.