”ಬಾಂಬೆ ಡೇಸ್” ಪುಸ್ತಕ ಬಿಡುಗಡೆ ಮಾಡದಂತೆ ಒತ್ತಡ ಬರುತ್ತಿದೆ : ಹೆಚ್.ವಿಶ್ವನಾಥ್

ಕುಮಾರಸ್ವಾಮಿ, ಸಿದ್ದರಾಮಯ್ಯ, ಯಡಿಯೂರಪ್ಪ ಮೂವರ ಬಣ್ಣ ಬಯಲಾಗಲಿದೆ..

Team Udayavani, Mar 26, 2022, 2:50 PM IST

1-fdsfsfsd

ಮೈಸೂರು: ನಾನು ಬರೆದ ”ಬಾಂಬೆ ಡೇಸ್” ಪುಸ್ತಕ ಬಿಡುಗಡೆ ಮಾಡದಂತೆ ಒತ್ತಡ ಬರುತ್ತಿದೆ. ಆದರೂ 2023ರ ಚುನಾವಣೆಯೊಳಗೆ ಯಾವಾಗ ಬೇಕಾದರೂ ಬಿಡುಗಡೆಯಾಗಬಹುದು ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಶನಿವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಸ್ತಕದಲ್ಲಿ ಮೈತ್ರಿ ಸರ್ಕಾರ ಪತನ, ಬಿಜೆಪಿ ಸರ್ಕಾರ ರಚನೆ, ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುವ ದಿನಗಳವರೆಗೂ ದಾಖಲಿಸಿದ್ದೇನೆ. ಬಾಂಬೆಗೆ ಬಂದಿದ್ದವರು ಬಿಡುಗಡೆ ಮಾಡಬೇಡಿ ಅಂತಿದ್ದಾರೆ, ಅಷ್ಟೇ ಏಕೆ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ ಕೆಲವರಿಂದಲೂ ಒತ್ತಡ ಇದೆ ಎಂದರು.

ಪುಸ್ತಕ ಬಿಡುಗಡೆಯಾದರೆ ಮೂರೂ ಪಕ್ಷಗಳ ನಾಯಕರು ಬೆತ್ತಲಾಗುತ್ತಾರೆ. ಕುಮಾರಸ್ವಾಮಿ, ಸಿದ್ದರಾಮಯ್ಯ, ಯಡಿಯೂರಪ್ಪ ಮೂವರ ಬಣ್ಣ ಬಯಲಾಗಲಿದೆ ಎಂದರು.

ನಾನು ಯಾರಿಗೂ ಬ್ಲಾಕ್ ಮೇಲ್ ಮಾಡಲು ಪುಸ್ತಕ ಬರೆದಿಲ್ಲ. ನಾವು ದುಡ್ಡು ತೆಗೆದುಕೊಂಡು ಬಿಜೆಪಿಗೆ ಹೋಗಿದ್ದೇವೆ ಎಂಬ ಅಪಪ್ರಚಾರ ನಡೆದಿದೆ. ವಸ್ತುಸ್ಥಿತಿಯನ್ನ ಜನರಿಗೆ ತಿಳಿಸಲು ಪುಸ್ತಕ ಬಿಡುಗಡೆ ಮಾಡುತ್ತಿದ್ದೇನೆ ಎಂದರು.

ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ?

ಸ್ವಾಮೀಜಿಗಳ ತಲೆ ಮೇಲಿನ ಬಟ್ಟೆಯನ್ನ ಬಿಜೆಪಿಯವರು ಯಾಕೆ ಪ್ರಶ್ನಿಸುತ್ತಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ,
ಅವರು ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ ಏನೋ ? ಆದರೆ, ಅವರ ಹೇಳಿಕೆಯ ಅರ್ಥೈಸುವಿಕೆ ಬಹಳ ಭಿನ್ನವಾಗಿದೆ. ಈಗ ಪರಿಸ್ಥಿತಿ ಬೇರೆ ರೀತಿಯೇ ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು, ಈಗ ವಿಪಕ್ಷ ನಾಯಕರಾಗಿದ್ದಾರೆ. ಇಂತಹ ವಿಚಾರಗಳನ್ನು ಯೋಚನೆ ಮಾಡಿ ಆಡಬೇಕು. ಕಳೆದ ಚುನಾವಣೆ ವೇಳೆ ವೀರಶೈವ, ಲಿಂಗಾಯತ ಅಂತ ಹೋಗಿ ಕೆಳಗೆ ಬಿದ್ದಿದ್ದರು. ಎಂ.ಬಿ ಪಾಟೀಲ್ ಮಾತು ಕೇಳಿಕೊಂಡು ಯಡವಟ್ಟು ಮಾಡಿಕೊಂಡಿದ್ದರು. ಈಗ ಮತ್ತೆ ಅದನ್ನೇ ಮಾಡಲು ಹೋಗುತ್ತಿದ್ದಾರೆ ಎಂದರು.

ಧರ್ಮ, ಧರ್ಮಾಧಿಕಾರಿಗಳ ಉಡುಗೆ ವಿಚಾರವನ್ನ ಯಾರೂ ಪ್ರಶ್ನೆ ಮಾಡಬಾರದು. ತುಂಬಾ ಎಚ್ಚರಿಕೆಯಿಂದ ಮಾತಾಡಬೇಕು ಎಂದರು.

ಮುಸ್ಲಿಮರ ಹೊಟ್ಟೆಗೆ ಹೊಡೆಯಬಾರದು

ಚಾಮುಂಡಿ ಬೆಟ್ಟದಲ್ಲಿ ಮುಸ್ಲಿಂ ಅಂಗಡಿ ತೆರವಿಗೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಚಾಮುಂಡಿ, ಮೈಲಾರ ಲಿಂಗೇಶ್ವರ, ಮಾದೇಶ್ವರ ಬೆಟ್ಟ ಯಾವುದೇ ಆಗಿರಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ಮಾಡುವುದನ್ನ ತಡೆಯೋದು ಸರಿಯಲ್ಲ. ನಮ್ಮ ಹೆಣ್ಣು ಮಕ್ಕಳಿಗೆ ಬೇಕಾದ ಬಳೆ, ಕುಂಕುಮವನ್ನ ಮುಸ್ಲಿಂರು ಮಾರುತ್ತಾರೆ. ಹೀಗಿರುವಾಗ ದೇವಾಲಯದ ಸುತ್ತಮುತಾ ಮುಸ್ಲಿಂರು ವ್ಯಾಪಾರ ಮಾಡಬಾರದು ಅಂದರೆ ಹೇಗೆ ?

ಮೈಸೂರಿನ ದೇವರಾಜ ಮಾರ್ಕೆಟ್ ಗೆ ಹೋಗಿ ನೋಡಲಿ, ಅಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿ ವ್ಯಾಪಾರ ಮಾಡುತ್ತಾರೆ. ಹೂ, ಹಣ್ಣು, ಅರಿಶಿನ, ಕುಂಕುಮ, ಬಳೆ ಮಾರುತ್ತಾರೆ. ಅವರ ಬಂಡವಾಳವೇ ಐನೂರೋ ಸಾವಿರ ಇರುತ್ತದೆ. ಹೀಗಿರುವಾಗ ಅಂತಹವರ ಹೊಟ್ಟೆಗೆ ಹೊಡೆಯಬಾರದು. ಹಿಂದೂ- ಮುಸ್ಲಿಂರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರೂ ಪಕ್ಷಗಳು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.