ವಿಸಿ ನಾಲಾ ವ್ಯಾಪಿಯ ತೂಬು, ನಾಲೆ ದುರಸ್ತಿಗೆ ಆಗ್ರಹ


Team Udayavani, Mar 26, 2022, 3:22 PM IST

ವಿಸಿ ನಾಲಾ ವ್ಯಾಪಿಯ ತೂಬು, ನಾಲೆ ದುರಸ್ತಿಗೆ ಆಗ್ರಹ

ಮದ್ದೂರು: ವಿಸಿ ನಾಲಾ ವ್ಯಾಪ್ತಿಯ ತೂಬು ಮತ್ತು ನಾಲೆಗಳನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ಚನ್ನೇಗೌಡನದೊಡ್ಡಿ ಗ್ರಾಮದ ಸ್ಥಳೀಯ ರೈತರು ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿಮಂದಿರದ ಬಳಿಯಿರುವ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿದ ರೈತರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ, ಶಿಥಿಲಗೊಂಡಿರುವ ತೂಬು ಮತ್ತು ನಾಲೆಗಳನ್ನು ಕೂಡಲೇ ದುರಸ್ತಿಗೊಳಿಸಿ ಸರಾಗವಾಗಿ ನೀರು ಹರಿಯಲು ಕ್ರಮವಹಿಸಬೇಕೆಂದು ಆಗ್ರಹಿಸಿದರು.

ಬೆಳೆಗಳು ಒಣಗುವ ಸ್ಥಿತಿ: ವಿಸಿ ನಾಲಾ ವ್ಯಾಪ್ತಿಯ 26ನೇ ತೂಬು ಕಳೆದ ಎರಡು ತಿಂಗಳಿಂದಲೂ ದುರಸ್ತಿಯಲ್ಲಿದ್ದು, ನಾಲೆಗಳಲ್ಲಿ ಆಳೆತ್ತರದ ಗಿಡಗಂಟಿಗಳು ಬೆಳೆದುನಿಂತು ಹೂಳು ತುಂಬಿರುವ ಹಿನ್ನೆಲೆಯಲ್ಲಿ ಕೊನೆಭಾಗದ ಜಮೀನಿಗೆ ನೀರು ಹರಿಯದೇ ಬೆಳೆಗಳು ಒಣಗುವ ಸ್ಥಿತಿ ತಲುಪಿರುವುದಾಗಿ ವಿವರಿಸಿದರು.

ಮನವಿ ಮಾಡಿದ್ರೂ ಕ್ರಮಕೈಗೊಂಡಿಲ್ಲ: ಕಳೆದ ಬಾರಿ ವಿಸಿ ನಾಲೆಯ ಕೊನೆಯ ಭಾಗದ ರೈತರ ಜಮೀನಿಗೆ ನೀರು ಹರಿಯದ ಕಾರಣ ಕಬ್ಬು, ರಾಗಿ, ಬಾಳೆ ಇನ್ನಿತರೆ ಬೆಳೆಗಳು ಒಣಗಿ ಲಕ್ಷಾಂತರ ರೂ. ನಷ್ಟ ಸಂಭ ವಿಸಿತ್ತು. ತೂಬು ದುರಸ್ತಿಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ, ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದಾಗಿ ಆರೋಪಿಸಿದರು.

ನೀರು ಬಂದಾಗ ಬರ್ತಾರೆ: ಕರ್ತವ್ಯನಿರತ ಅಧಿಕಾರಿಗಳು, ನೀರು ಗಂಟಿಗಳು ಕೇವಲ ನಾಲೆಯಲ್ಲಿ ನೀರು ಬಂದ ವೇಳೆ ಕಾಟಾಚಾರಕ್ಕೆ ಆಗಮಿಸಿ ತೆರಳುವ ಪ್ರವೃತ್ತಿಯನ್ನು ಮೈಗೂಡಿಸಿಕೊಂಡಿದ್ದು, ಇದುವರೆಗೂ ನಾಲೆ ಹಾಗೂ ತೂಬುಗಳ ದುರಸ್ತಿಗೆ ಮುಂದಾಗಿಲ್ಲ. ರೈತರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ ಎಂದು ವಿವರಿಸಿದರು.

ಕಚೇರಿಗೆ ಮುತ್ತಿಗೆ: ನಾಲೆ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಕುಂಟು ನೆಪಹೇಳುವ ಅಧಿಕಾರಿಗಳು, ಈ ವ್ಯಾಪ್ತಿಯ ನಾಲೆಗಳು ಹದಗೆಡಲು ಕಾರಣವಾಗಿ ದ್ದಾರೆ. ರೈತರು, ಹಗಲು ರಾತ್ರಿ ಎನ್ನದೆ ತಮ್ಮ ಜಮೀನಿಗೆ ನೀರು ಹರಿಸಬೇಕಾದ ಸ್ಥಿತಿ ಬಂದೊದಗಿದೆ. ಕೂಡಲೇ ಅಗತ್ಯ ಕ್ರಮವಹಿಸದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದರು.

ನೀರು ಹರಿಸುವ ಭರವಸೆ: ಪ್ರತಿಭಟನಾ ಸ್ಥಳಕ್ಕಾಗಮಿಸಿದ ಎಇ ಚಂದ್ರಶೇಖರ್‌ ವಿಸಿ ನಾಲಾ ವ್ಯಾಪ್ತಿಯ ತೂಬುಗಳ ದುರಸ್ತಿ ಹಾಗೂ ನಿರ್ವಹಣೆಗೆ ಈಗಾಗಲೇ ಇಲಾಖೆ ಅಗತ್ಯ ಕ್ರಮವಹಿಸಿದ್ದು, ಮುಂದಿನ ದಿನಗಳಲ್ಲಿ ನಾಲೆಗಳಲ್ಲಿ ಬೆಳೆದುನಿಂತಿರುವ ಗಿಡಗಂಟಿ ತೆರವುಗೊಳಿಸಿ ಸರಾಗವಾಗಿ ಕೊನೆಭಾಗದ ರೈತರ ಜಮೀನಿಗೆ ನೀರು ಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆ ವೇಳೆ ಸ್ಥಳೀಯ ಮುಖಂಡರಾದ ಕಾಡಪ್ಪ, ರಾಜಣ್ಣ, ಪುಟೀರ, ಮಧು, ಚಿಕ್ಕೋನು, ಶಿವಣ್ಣ, ಶಿವಕುಮಾರ್‌, ಜಯರಾಮ್‌, ಚೌಡಪ್ಪ, ಶ್ಯಾಮ್‌ಸುಂದರ್‌ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.