ಪ್ರಮುಖ ಬ್ರಾಂಡ್‍ಗಳಿಗೆ ಪೈಪೋಟಿ ನೀಡಲು ಬರುತ್ತಿದೆ ‘ನಥಿಂಗ್‍’ ನ ಹೊಸ ಫೋನ್‍


Team Udayavani, Mar 26, 2022, 7:42 PM IST

ಪ್ರಮುಖ ಬ್ರಾಂಡ್‍ಗಳಿಗೆ ಪೈಪೋಟಿ ನೀಡಲು ಬರುತ್ತಿದೆ ನಥಿಂಗ್‍ನ ಹೊಸ ಫೋನ್‍

ಬೆಂಗಳೂರು: ಒನ್‍ ಪ್ಲಸ್‍ ಕಂಪೆನಿಯ ಸಹಸ್ಥಾಪಕ ಕಾರ್ಲ್‍ ಪೇ ಒಡೆತನದ ನಥಿಂಗ್‍ ಕಂಪೆನಿ ಶೀಘ್ರವೇ ತನ್ನ ಮೊಟ್ಟ ಮೊದಲ ಸ್ಮಾರ್ಟ್ ಫೋನ್‍ ಅನ್ನು ಹೊರತರಲಿದ್ದು, ಸ್ಮಾರ್ಟ್‍ ಫೋನ್‍ ಪ್ರಿಯರಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಎರಡು ವರ್ಷಗಳ ಹಿಂದೆ ಅದರಿಂದ ಹೊರ ಬಂದಿದ್ದ ಕಾರ್ಲ್ ಪೇ ಬಳಿಕ ನಥಿಂಗ್‍ ಎಂಬ ಹೊಸ ಕಂಪೆನಿ ಹುಟ್ಟುಹಾಕಿದ್ದರು. ಆ ಬಳಿಕ ಒಂದೇ ವರ್ಷದಲ್ಲಿ ನಥಿಂಗ್‍ ನ ಮೊದಲ ಉತ್ಪನ್ನವಾಗಿ ಟ್ರೂ ವೈರ್ ಲೆಸ್‍ ಇಯರ್ ಬಡ್‍  (1) ಅನ್ನು 2021ರ ಜುಲೈ ತಿಂಗಳಲ್ಲಿ ಹೊರ ತಂದಿದ್ದರು.

ಗ್ಯಾಜೆಟ್‍ ಪ್ರೇಮಿಗಳು ನಥಿಂಗ್ ಒಂದು ಆಡಿಯೋ ಕಂಪೆನಿ ಎಂದೇ ತಿಳಿದಿದ್ದರು. ಕೆಲ ತಿಂಗಳ ಹಿಂದೆ ಸ್ಮಾರ್ಟ್‍ ಫೋನ್‍ ಹೊರತರುವ ಸಣ್ಣದೊಂದು ಕ್ಲೂ ನೀಡಿದ್ದ ಸಿಇಓ ಕಾರ್ಲ್ ಇದೀಗ ನೂತನ ಫೋನ್‍ ಹೊರತರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಲಂಡನ್ ನಿಂದ ವರ್ಚುವಲ್‍ ಕಾರ್ಯಕ್ರಮದ ಮೂಲಕ ಮಾತನಾಡಿದ ಅವರು, ಕ್ವಾಲ್‍ ಕಾಂ ಸ್ನಾಪ್‍ಡ್ರಾಗನ್‍ ಸಹಭಾಗಿತ್ವದಲ್ಲಿ ಮುಂಬರುವ ಬೇಸಿಗೆಯೊಳಗೆ ಫೋನ್‍ (1) ಎಂಬ ಹೊಸ ಸ್ಮಾರ್ಟ್ ಫೋನ್‍ ಹೊರತರುತ್ತಿರುವುದಾಗಿ ಪ್ರಕಟಿಸಿದರು. ನಥಿಂಗ್‍ ಆಡಿಯೋ ಕಂಪೆನಿಯಲ್ಲ ಎಂದು ಹೇಳುವ ಮೂಲಕ, ಅದು ಆಡಿಯೋಗೆ ಸೀಮಿತವಾದ ಕಂಪೆನಿ ಎಂದು ತಿಳಿದಿದ್ದವರಿಗೆ ತಿರುಗೇಟು ನೀಡಿದರು.

ನಥಿಂಗ್‍ ಫೋನ್‍ (1)ನ ಕೆಲ ವೈಶಿಷ್ಟ್ಯಗಳು:
1. ಇದು ಆಂಡ್ರಾಯ್ಡ್ ಫೋನ್‍ ಆಗಿದ್ದು, ನಥಿಂಗ್‍ ಆಪರೇಟಿಂಗ್‍ ಸಿಸ್ಟಂ (ಓಎಸ್‍) ಹೊಂದಿರುತ್ತದೆ.
2. ಇದು ತನ್ನದೇ ಆದ ಹೊಸ ರೀತಿಯ ವಿನ್ಯಾಸ ಹೊಂದಿರಲಿದೆ. ಅಂದರೆ ನಥಿಂಗ್‍ ಇಯರ್ ಬಡ್‍ ರೀತಿ ಪಾರದರ್ಶಕ ವಿನ್ಯಾಸ ಹೊಂದಿರಲಿದೆ.
3. ಆಂಡ್ರಾಯ್ಡ್ ಸ್ಮಾರ್ಟ್ ಫೋನ್‍ ಪ್ರಿಯರು ಬಯಸುವ ಕ್ವಾಲ್‍ ಕಾಂ ಸ್ನಾಪ್‍ ಡ್ರಾಗನ್‍ ಪ್ರೊಸೆಸರ್ ಹೊಂದಿರುತ್ತದೆ. ನಥಿಂಗ್‍ಗೆ ಕ್ವಾಲ್‍ ಕಾಂ ಕೂಡ ಹೂಡಿಕೆದಾರ ಎಂಬುದು ವಿಶೇಷ.
4. ನಥಿಂಗ್‍ ಓಎಸ್‍ ಅತ್ಯಂತ ವೇಗವಾಗಿ ಕೆಲಸ ನಿರ್ವಹಿಸಲಿದೆ. ಈ ಫೋನಿಗೆ 3 ವರ್ಷಗಳ ಸಾಫ್ಟ್ ವೇರ್ ಅಪ್‍ ಡೇಟ್‍ ಮತ್ತು 4 ವರ್ಷಗಳ ಸೆಕ್ಯುರಿಟಿ ಅಪ್ ಡೇಟ್‍ ದೊರಕಲಿದೆ.
ಇದರ ದರದ ಬಗ್ಗೆ ಯಾವುದೇ ಮಾಹಿತಿಯನ್ನೂ ಕಂಪೆನಿ ನೀಡಿಲ್ಲ. ಈ ಫೋನು ಸ್ಯಾಮ್‍ ಸಂಗ್‍ ಗೆಲಾಕ್ಸಿ ಎಸ್‍ 22 ಹಾಗೂ ಒನ್‍ ಪ್ಲಸ್‍ 10 ಪ್ರೊ ಗೆ ಪ್ರಬಲ ಪೈಪೋಟಿ ನೀಡಲಿದೆ ಎಂದು ಪ್ರಮುಖ ಗ್ಯಾಜೆಟ್‍ ವಿಮರ್ಶಕರು ಊಹಿಸಿದ್ದಾರೆ.

– ಕೆ.ಎಸ್. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.