ಕೈಗಾರಿಕಾ ವಿಕೇಂದ್ರೀಕರಣ ಪ್ರತಿಪಾದನೆ

ತಲಾದಾಯ ಟಾಪ್‌ ಟೆನ್‌ನಲ್ಲಿ ಉತ್ತರದ ಒಂದೂ ಜಿಲ್ಲೆ ಇಲ್ಲದಿರುವುದು ನೋವಿನ ಸಂಗತಿ: ಜಗದೀಶ ಶೆಟ್ಟರ

Team Udayavani, Mar 27, 2022, 10:04 AM IST

1

ಹುಬ್ಬಳ್ಳಿ: ರಾಜ್ಯದ ತಲಾವಾರು ಆದಾಯ ಹೆಚ್ಚಿರುವ ಮೊದಲ 10 ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕದ ಒಂದೂ ಜಿಲ್ಲೆ ಸ್ಥಾನ ಪಡೆಯದಿರುವುದು ನೋವು ತರಿಸುತ್ತಿದೆ. ಸಮಾಧಾನದ ಸಂಗತಿ ಎಂದರೆ 11ನೇ ಸ್ಥಾನದಲ್ಲಿ ಧಾರವಾಡ ಜಿಲ್ಲೆ ಇದೆ. ಬೆಂಗಳೂರು ಹೊರತಾದ ಪ್ರದೇಶದಲ್ಲಿ ಉದ್ಯಮ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಟೈಕಾನ್‌ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕ ಜಿಲ್ಲೆಗಳಿಗೆ ಹೋಲಿಸಿದರೆ ತಲಾದಾಯದಲ್ಲಿ ಉತ್ತರದ ಜಿಲ್ಲೆಗಳು ಹಿಂದಿವೆ. ಬೆಂಗಳೂರು ಸೇರಿ ಆ ಭಾಗದ ಕೆಲ ಜಿಲ್ಲೆಗಳ ಸರಾಸರಿ ತಲಾದಾಯ 5 ಲಕ್ಷ ರೂ. ಇದ್ದರೆ, 11ನೇ ಸ್ಥಾನ ಪಡೆದಿರುವ ಧಾರವಾಡದ ಸರಾಸರಿ ತಲಾ ಆದಾಯ 1.77 ಲಕ್ಷ ರೂ. ಆಗಿದೆ ಎಂದರು.

ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇರುವಂತೆ ನಮ್ಮ ರಾಜ್ಯದಲ್ಲಿಯೂ ಕೈಗಾರಿಕಾ ವಿಕೇಂದ್ರೀಕರಣ ಆಗಬೇಕಾಗಿದೆ. ಆದರೆ, ಪ್ರಸ್ತುತ ಬೆಂಗಳೂರು ಕೇಂದ್ರೀಕೃತ ಉದ್ಯಮ ಬೆಳವಣಿಗೆ ಆಗಿದೆ. ಅದು ಬದಲಾಗಬೇಕಾಗಿದೆ. ನಾನು ಕೈಗಾರಿಕಾ ಸಚಿವನಾಗಿದ್ದಾಗ ಕೈಗೊಂಡ ಕೈಗಾರಿಕಾ ನೀತಿ ಹಾಗೂ ಉತ್ತೇಜನ ಕ್ರಮದಿಂದ ಅನೇಕ ಉದ್ಯಮಗಳು ಉತ್ತರಮುಖೀಯಾಗಿವೆ. ದೇಶಪಾಂಡೆ ಫೌಂಡೇಶನ್‌, ಟೈನಿಂದಾಗಿ ನವೋದ್ಯಮ ಬೆಳವಣಿಗೆ ಆಗಿದೆ. ಏಕಸ್‌, ಯುಫ್ಲೆಕ್ಸ್‌, ರಾಜೇಶ ಎಕ್ಸ್‌ಪೋರ್ಟ್‌ ಸೇರಿದಂತೆ ಅನೇಕ ದೊಡ್ಡ ಉದ್ಯಮಗಳು ಹುಬ್ಬಳ್ಳಿ-ಧಾರವಾಡ, ಕೊಪ್ಪಳಗಳಿಗೆ ಬರುತ್ತಿವೆ. ಎಫ್‌ಎಂಸಿಜಿ ಗೇಮ್‌ ಚೇಂಜರ್‌ ಆಗಲಿದೆ ಎಂದರು.

ಹು-ಧಾದಲ್ಲಿ ಉದ್ಯಮಗಳಿಗೆ ನಿವೇಶನಗಳನ್ನು ನೀಡಲು ಜಾಗ ಇಲ್ಲವಾಗಿದ್ದು, ಭೂ ಸ್ವಾಧೀನಕ್ಕೆ ಒತ್ತು ನೀಡಬೇಕು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ, ಬೇಲೇಕೇರಿ ಬಂದರು ಅಭಿವೃದ್ಧಿ ಇನ್ನಿತರ ಕಾರ್ಯಗಳು ಆಗಬೇಕಾಗಿದೆ ಎಂದರು.

ಉದ್ಯಮಕ್ಕೆ ಮುಂದಾಗಿ: ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಯುವಕರು ಉದ್ಯಮಕ್ಕೆ ಮುಂದಾಗುವ ಮೂಲಕ ಇತರರಿಗೆ ಉದ್ಯೋಗ ನೀಡುವ ಕಾರ್ಯಕ್ಕೆ ಮುಂದಾಗಬೇಕು. ಸುಮಾರು 30-40 ವರ್ಷಗಳ ಹಿಂದೆ ಯುವಕರು ತಮ್ಮ ವೆಚ್ಚದ ಹಣಕ್ಕಾಗಿ ತಂದೆ-ತಾಯಿಗಳನ್ನು ಅವಲಂಬಿಸಿದ್ದರು. ಆದರೆ, ಇದೀಗ ಸ್ವಯಂ ಆದಾಯ ಸೃಷ್ಟಿಗೆ ಮುಂದಾಗಿರುವುದು ಸಂತಸದ ವಿಚಾರವಾಗಿದೆ. ಆದರೂ ನಿರುದ್ಯೋಗ ಹೆಚ್ಚುತ್ತಿದೆ. ಬಿಎಡ್‌ ಪದವಿ ಮುಗಿಸಿದ ಸುಮಾರು 38 ಸಾವಿರ ಪದವೀಧರರು, ಡಿಎಡ್‌ ಮುಗಿಸಿದ 98 ಸಾವಿರ ಜನರಿಗೆ ಉದ್ಯೋಗ ಇಲ್ಲವಾಗಿದೆ. ಇದೀಗ ಸರಕಾರ 15 ಸಾವಿರ ಶಿಕ್ಷಕರ ನೇಮಕ್ಕೆ ಮುಂದಾಗಿದೆ ಎಂದು ಹೇಳಿದರು.

ಗ್ಲೋಬಲ್‌ ಟೈ ಅಧ್ಯಕ್ಷ ಬಿ.ಜೆ. ಅರುಣ ಮಾತನಾಡಿ, ಗ್ಲೋಬಲ್‌ ಟೈ 30ನೇ ವಾರ್ಷಿಕೋತ್ಸವ ಸಂಭ್ರಮದಲ್ಲಿದೆ. ಉದ್ಯೋಗ ಮತ್ತು ಸಂಪತ್ತು ಸೃಷ್ಟಿ ಮುಖ್ಯ ಧ್ಯೇಯವಾಗಿದೆ. ಉದ್ಯಮ ಮೌಲ್ಯವರ್ಧನೆ ಬಿಟ್ಟರೆ ಬೇರಾವ ಅಜೆಂಡಾಕ್ಕೆ ಒತ್ತು ನೀಡುತ್ತಿಲ್ಲ ಎಂದರು.

ಉದ್ಯಮಿ ವಿಎಸ್‌ವಿ ಪ್ರಸಾದ ಮಾತನಾಡಿ, ಉದ್ಯಮ ಬೆಳವಣಿಗೆಗೆ ಟೈ ಅತ್ಯುತ್ತಮ ವೇದಿಕೆಯಾಗಿದ್ದು, ನವೋದ್ಯಮಿಗಳು ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಟೈ ಹುಬ್ಬಳ್ಳಿ ಅಧ್ಯಕ್ಷ ವಿಜೇಶ ಸೈಗಲ್‌ ಪ್ರಾಸ್ತಾವಿಕ ಮಾತನಾಡಿ, ನವೋದ್ಯಮ ಉದ್ಯಮ ಚಿಂತನೆ ಸ್ಪರ್ಧೆಯಲ್ಲಿ ಸುಮಾರು 60 ನವೋದ್ಯಮಿಗಳು ಭಾಗಿಯಾಗಿದ್ದರು. ಅದರಲ್ಲಿ 18 ಜನರು ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದು, ಇದರಲ್ಲಿ ಐವರಿಗೆ ತಲಾ 50 ಸಾವಿರ ರೂ. ನೀಡಲಾಗುವುದು ಎಂದರು. ತರುಣ ಮಹಾಜನ, ಪಲ್ಲವಿ ಮಲಾನಿ ಮಾತನಾಡಿದರು. ಸಂಜನಾ ನಿರೂಪಿಸಿದರು.

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.