ಸರ್ಕಾರದಿಂದ ರೇಣುಕಾಚಾರ್ಯ ಜಯಂತಿ-ಹರ್ಷ
Team Udayavani, Mar 27, 2022, 11:36 AM IST
ಶಹಾಬಾದ: ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಸರ್ಕಾರದಿಂದಲೇ ಆಚರಿಸುವುದಾಗಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಶನಿವಾರ ನಗರದ ಲಕ್ಷ್ಮೀ ಗಂಜ್ನ ರೇಣುಕಾಚಾರ್ಯ ದೇವಸ್ಥಾನದ ಮುಂಭಾಗದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ, ಬೇಡ ಜಂಗಮ ಸಮಾಜದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.
ಸಮಾಜದ ಮುಖಂಡ ಮೃತ್ಯುಂಜಯ ಹಿರೇಮಠ ಮಾತನಾಡಿ, ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿರುವುದಕ್ಕೆ ವೀರಶೈವ ಹಾಗೂ ಬೇಡ ಜಂಗಮ ಸಮಾಜದ ಜನರಿಗೆ ಸಂತಸವಾಗಿದೆ. ಸಮಾಜಕ್ಕಾಗಿ, ಧರ್ಮಕ್ಕಾಗಿ ತಮ್ಮ ಜೀವನವನ್ನೇ ಸವೆಸಿದ ರೇಣುಕಾಚಾರ್ಯ ಜಯಂತಿ ಆಚರಿಸಲು ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಎಂದರು.
ಮುಖಂಡರಾದ ಸೂರ್ಯಕಾಂತ ಕೋಬಾಳ, ಶಿವಕುಮಾರ ಹಿರೇಮಠ, ಶರಣಬಸಪ್ಪ ಕೋಬಾಳ, ಪ್ರದೀಪ ಗೊಳೇದ, ಶರಣಗೌಡ ಪಾಟೀಲ ಗೋಳಾ, ವಿಶ್ವಾರಾಧ್ಯ ಬಿರಾಳ, ಶೇಖುಗೌಡ, ಜಗದೀಶ ಮಠಪತಿ, ರಾಜು ಬೆಳಗುಂಪಿ, ಶರಣು ಜೇರಟಗಿ, ಸಿದ್ಧಯ್ಯ ಗೋಳಾ, ರಾಜಶೇಖರ ಘಂಟಿಮಠ, ಶಾಂತಯ್ಯಸ್ವಾಮಿ, ವಿಶ್ವಾರಾಧ್ಯ ಸ್ವಾಮಿ, ಜಗದೀಶ ಟೆಂಗಳಿ, ಮಲ್ಲಿಕಾರ್ಜುನ ಟೆಂಗಳಿ, ಬಾಬುರಾವ್ ಪಂಚಾಳ, ಶರಣಯ್ಯಸ್ವಾಮಿ ಹಿರೇಮಠ, ನಾಗಣ್ಣ ರಾಂಪುರೆ, ಅರುಣಕುಮಾರ ಪಟ್ಟಣಕರ್, ಶಿವಕುಮಾರ ಇಂಗಿನಶೆಟ್ಟಿ, ಚನ್ನಬಸಪ್ಪ ಕೊಲ್ಲೂರ್, ಶಾಂತಕುಮಾರ ವಾಲಿ, ಜಗದೀಶ ಬೆಳಗುಂಪಿ, ಎಮ್.ಆರ್. ಶರಣಯ್ಯಸ್ವಾಮಿ, ಶರಣು ನಂದಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ