ಕುಷ್ಟಗಿ: ಬೆಳ್ಳಂಬೆಳಗ್ಗೆ 16 ಅಂಗಡಿಗಳು ತೆರವು
Team Udayavani, Mar 27, 2022, 12:35 PM IST
ಕುಷ್ಟಗಿ: ಇಲ್ಲಿನ ಪುರಸಭೆ ಅಧೀನದಲ್ಲಿರುವ ಬಸ್ ನಿಲ್ದಾಣದ ಮುಖ್ಯ ರಸ್ತೆಯ ಕೆಇಬಿ ಪಕ್ಕದ ವಾಣಿಜ್ಯ ಮಳಿಗೆಗಳಲ್ಲಿ ಬಾಡಿಗೆಯಲ್ಲಿರುವ ಅಂಗಡಿಕಾರರನ್ನು ಹೈ ಕೋರ್ಟ್ ಅದೇಶದ ಮೇರೆಗೆ ಸರಕು ಸರಂಜಾಮುಗಳ ಸಮೇತ ಹೊರಗೆ ಹಾಕಿ ತೆರವುಗೊಳಿಸಿದ ಘಟನೆ ಭಾನುವರ ನಡೆಯಿತು.
ಕುಷ್ಟಗಿ ಪುರಸಭೆಯ ಕೆಳಗೆ 10 ಹಾಗೂ ಮೇಲೆ 6 ಮಳಿಗೆಗಳ ಬಾಡಿಗೆ ಒಪ್ಪಂದ ಕಳೆದ 2015-16ರಲ್ಲಿ ಕೊನೆಗೊಂಡಿತ್ತು. ಹೊಸದಾಗಿ ಟೆಂಡರ್ ಕರೆಯಲು ಸಾಧ್ಯವಾಗಿರಲಿಲ್ಲ. ಕಾರಣ ಸದರಿ ಅಂಗಡಿಕಾರರು ಧಾರವಾಡ ಹೈಕೋರ್ಟ್ ಸಂಚಾರಿ ಪೀಠದಲ್ಲಿ ತಡೆಯಾಜ್ಞೆ ತಂದಿದ್ದರು. ಪುರಸಭೆ ಹಾಗೂ ಅಂಗಡಿಕಾರರ ಒಳ ಒಪ್ಪಂದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆಯಾಗಿರಲಿಲ್ಲ. ಈ ಸಂಬಂಧ 16 ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇತ್ತೀಚಿನ ಅಧಿಕಾರಿಗಳು ನೂತನವಾಗಿ ಆಯ್ಕೆಯಾದ ಸದಸ್ಯರ ಬಿಗಿ ಪಟ್ಟಿನಿಂದ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದಿದೆ.
ಇದನ್ನೂ ಓದಿ:PSI ಮೌನೇಶ್ ವಿಷಯ ಕೈ ಬಿಡಿ : ಪ್ರತಿಭಟನಾಕಾರರಿಗೆ ಶ್ರೀರಾಮುಲು ಸಿಂಹಘರ್ಜನೆ ಸೇನೆಯಿಂದ ಮನವಿ
ಕಳೆದ ಅ.31 ರಂದು ಮಾನ್ಯ ನ್ಯಾಯಾಲಯ ಸದರಿ ಅಂಗಡಿಕಾರರನ್ನು 45 ದಿನಗಳ ಗಡವು ನೀಡಿತ್ತು. ಸದರಿ ಗಡವಿಗೆ ಅಂಗಡಿಕಾರರು ಅಂಗಡಿಯ ಸರಕು ಸರಂಜಾಮು ಸಹಿತ ತೆರವುಗೊಳಿಸದೇ ನ್ಯಾಯಾಲಯದ ಅದೇಶ ಉಲ್ಲಂಘಿಸಿದ್ದರಿಂದ ಪುರಸಭೆ ಪೌರ ಕಾರ್ಮಿಕರು ಭಾನುವಾರ ಬೆಳಗ್ಗೆ ಯಾವುದೇ ಮುನ್ಸೂಚನೆ ನೀಡದೇ ತೆರವುಗೊಳಿಸಿದರು.
ಈ ತೆರವು ಕಾರ್ಯಾಚರಣೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಉಮೇಶ ಹಿರೇಮಠ ಹಾಗೂ ಪಿಎಸೈ ತಿಮ್ಮಣ್ಣ ನಾಯಕ್ ನೇತೃತ್ವದಲ್ಲಿ ಪೊಲೀಸ ಬಂದೋಬಸ್ತ್ ನಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು.
ಕರ್ನಾಟಕ ಸಾರ್ವಜನಿಕ ಆಸ್ತಿ ಕಾಯ್ದೆ (ಕರ್ನಾಟಕ ಪಬ್ಲಿಕ್ ಪ್ರಾಮೈಸಿಸ್) 1974 ರ ಕಾಯ್ದೆ 5ನೇ ಕಲಂ ನಿಯಮಗಳ ಪ್ರಕಾರ ಕುಷ್ಟಗಿ ಪುರಸಭೆಯ ವಾಣಿಜ್ಯ ಮಳಿಗೆಯಲ್ಲಿರುವ ಬಾಡಿಗೆದಾರರನ್ನು ತೆರವುಗೊಳಿಸಿ, ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ವಹಿಸುವ ನಿಟ್ಟಿನಲ್ಲಿ ಹಾಗೂ ನ್ಯಾಯಾಲಯದಲ್ಲಿ ಸಮರ್ಪಕವಾದ ನಿರ್ವಹಣೆಯಲ್ಲಿ ಅಧಿಕಾರಿಗಳ ವಿಫಲವಾಗಿರುವುದು ಮನಗಂಡಿರುವ ಮಾನ್ಯ ನ್ಯಾಯಾಲಯ ತೆರವಿನ ಈ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!