ಕಾಲಮಿತಿಯೊಳಗೆ ಕಲ್ಯಾಣ ಕಾಮಗಾರಿ ಪೂರ್ಣಗೊಳಿಸಿ
Team Udayavani, Mar 27, 2022, 2:39 PM IST
ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕೈಗೆತ್ತಿಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್.ಅವರು ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು, ಮಂಡಳಿ ವತಿಯಿಂದ ವಿವಿಧ ಇಲಾಖೆಗಳಿಗೆ ನೀಡಿದ ಕಾಮಗಾರಿಗಳ ವಿವರ, ಆರ್ಥಿಕ ಗುರಿ, ಭೌತಿಕ ಗುರಿ ಕುರಿತು ಸಾಧಿಸಿರುವ ಪ್ರಗತಿಯ ಕುರಿತು ಪರಿಶೀಲನೆಯನ್ನು ನಡೆಸಿ ಮಾತನಾಡಿದರು.
2021-22ನೇ ಸಾಲಿಗೆ ಮಂಡಳಿಯಿಂದ ಯಾದಗಿರಿ ಜಿಲ್ಲೆಗೆ ಮಾರ್ಚ್ ಮಾಹೆಗೆ ಒಟ್ಟು 27.87 ಕೋಟಿ ರೂ.ಗಳ ಆರ್ಥಿಕ ಗುರಿ ನಿಗದಿಪಡಿಸಲಾಗಿದ್ದು, ಅದಕ್ಕನುಗುಣವಾಗಿ ಇಲ್ಲಿಯವರೆಗೆ ಒಟ್ಟು 20.39 ಕೋಟಿ ರೂ.ಗಳ ಮೊತ್ತದ ಬಿಲ್ಗಳನ್ನು ಮಂಡಳಿಗೆ ಸಲ್ಲಿಸಿದ್ದು, ಅದರಲ್ಲಿ 6.4 ಕೋಟಿ ರೂ.ಗಳ ಮೊತ್ತದ ಬಿಲ್ ಅನುಮೋದನೆಯಾಗಿದೆ. ಇನ್ನೂ 14.35 ಕೋಟಿ ರೂ.ಗಳ ಬಿಲ್ಗಳು ಮಂಡಳಿಯಲ್ಲಿ ಬಾಕಿ ಇರುತ್ತದೆ. ಬಾಕಿ ಇರುವ ಮತ್ತು ಅನುಮೋದನೆಯಾದ ಮೊತ್ತ ಸೇರಿ ಶೇ.73 ರಷ್ಟು ಸಾಧನೆಯಾಗಿರುತ್ತದೆ ಎಂದು ಸಂಬಂಧಿಸಿದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಪ್ರಸ್ತುತ ಮಾಹೆ ಮತ್ತು ವಾರ್ಷಿಕ ಗುರಿಗೆ ತಕ್ಕಂತೆ ಗುರಿ ಸಾಧಿಸಿ ಇನ್ನೂ ಬಾಕಿ ಉಳಿದ ಮೊತ್ತಗಳ ಬಿಲ್ಗಳನ್ನು ಕೂಡಲೇ ಸಲ್ಲಿಸಿ ಶೇ.100 ರಷ್ಟು ಸಾಧನೆ ಮಾಡಲು ಜಿಲ್ಲೆಯ ಎಲ್ಲಾ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಕೆಕೆಆರ್ಡಿಬಿ ತಾಂತ್ರಿಕ ಸಲಹೆಗಾರ ಸಂಗಮೇಶ ಗುಬ್ಬೇವಾಡ ನಿರ್ಮಿತಿ ಕೇಂದ್ರದ ಅಧಿಕಾರಿ ಕಿರಣಕುಮಾರ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
MUST WATCH
ಹೊಸ ಸೇರ್ಪಡೆ
Sandalwood: ಈತ ಊರ ಬೆಳೆಸೋ ಜಂಟಲ್ಮ್ಯಾನ್; ರಾಮನ ಅವತಾರ ಬಗ್ಗೆ ರಿಷಿ
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Muslim ಆ್ಯಮಿಮೇಟೆಡ್ ವೀಡಿಯೋ ತೆಗದುಹಾಕಲು ಎಕ್ಸ್ಗೆ ಆಯೋಗ ಸೂಚನೆ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ