ಕಿಡಿಗೇಡಿಗಳಿಂದ ವಿಗ್ರಹ ಭಿನ್ನಕ್ಕೆ ಯತ್ನ : ದೇವಾಲಯಕ್ಕೆ ಶಾಸಕಿ ರೂಪಕಲಾ ಭೇಟಿ
Team Udayavani, Mar 27, 2022, 2:52 PM IST
ಕೆಜಿಎಫ್: ಧಾರ್ಮಿಕ ಭಾವನೆ ಕೆರಳಿಸಿ, ಪ್ರಚೋದನೆ ಮಾಡುವ ಉದ್ದೇ ಶ ದಿಂದ ಕಿಡಿಗೇಡಿಗಳು ದೇವಾಲಯದಲ್ಲಿ ವಿಗ್ರಹ ಭಿನ್ನ ಮಾಡಲು ಯತ್ನಿಸಿದ್ದಾರೆ. ಪೊಲೀಸರು ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಶಾಸಕಿ ಎಂ.ರೂಪಕಲಾ ಹೇಳಿದರು.
ಆಲಿಕಲ್ಲು ಕದಿರೇನಹಳ್ಳಿಯ ವೇಣುಗೋಪಾಲಸ್ವಾಮಿ ದೇವಾಲ ಯಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಮಾತನಾಡಿ, ಕಿಡಿಗೇಡಿಗಳು ವಿಗ್ರಹ ಭಿನ್ನ ಮಾಡಲೆಂದೇ ಬಂದಿದ್ದಾರೆ. ಆದರೆ, ದೇವರ ಭಿನ್ನ ಮಾಡಲು
ಮನಸ್ಸು ಬಾರದೆ, ಗೋಪುರದಿಂದ ಕೆಳಗೆ ಇಳಿಸಿದ್ದಾರೆ. ಇಂತಹ ಕಿಡಿಗೇಡಿಗಳನ್ನು ಪತ್ತೆ ಹಚ್ಚುವ ಶ್ವಾಸ ಇದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ ಎಂದರು.
ದೇವಾಲಯದ ಜೀರ್ಣೋದ್ಧಾರಕ್ಕೆ ಮುಜರಾಯಿ ಇಲಾಖೆಯ ಹಣ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ವೈಯಕ್ತಿಕವಾಗಿ ಜೀರ್ಣೋದ್ಧಾರ ಮಾಡಲಾಗುವುದು. ವೇಣುಗೋಪಾಲಸ್ವಾಮಿ ದೇವಾಲಯದ ಗರುಡ, ಆಂಜನೇಯ ವಿಗ್ರಹಗಳ ಜೊತೆಗೆ ದ್ವೀಪಸ್ತಂಭದ ಮೇಲ್ಭಾಗವನ್ನು ದುಷ್ಕರ್ಮಿಗಳು ಹಾಳು ಮಾಡಿದ್ದಾರೆ ಎಂದರು. ಇಂದು ಸರ್ಕಲ್ ಇನ್ಸ್ಪೆಕ್ಟರ್ ವೆಂಕಟೇಶ್, ಬ್ರಾಹ್ಮಣ ಸಂಘದ ನಾರಾಯಣಮೂರ್ತಿ, ಗುರುದೀಕ್ಷಿತ್ ಮತ್ತಿತರರು ದೇವಾಲಯದ ಪಕ್ಕದ ಹಳ್ಳದಲ್ಲಿ ಬಿದ್ದಿದ್ದ ದೀಪದ ಕಲ್ಲನ್ನು ಪತ್ತೆ ಹಚ್ಚಿದ್ದಾರೆ.
ಇದನ್ನೂ ಓದಿ : ಬೀದಿ ಬದಿಯಲ್ಲಿ 15 ರಿಂದ 20 ಲಕ್ಷ ಮಕ್ಕಳು!:ಭಾರತದಾದ್ಯಂತ ಪುನರ್ವಸತಿ ಪ್ರಕ್ರಿಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ