ನೌಕರರ ಮಾನಸಿಕ ನೆಮ್ಮದಿಗೆ ಕ್ರೀಡಾಕೂಟ ಸಹಕಾರಿ

ಸುಸಜ್ಜಿತ ಭವನ ನಿರ್ಮಾನಕ್ಕೆ ಶಾಸಕರ ನೆರವು

Team Udayavani, Mar 27, 2022, 4:50 PM IST

19

ಕಾರಟಗಿ: ದೈಹಿಕ ಮತ್ತು ಮಾನಸಿಕ ವೃದ್ಧಿಯ ಜೊತೆ ಜೊತೆಗೆ ಎಲ್ಲರೊಂದಿಗೆ ವಿಶ್ವಾಸ, ಪ್ರೀತಿ, ಸ್ನೇಹ ವೃದ್ಧಿಗೂ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕದ ತಾಲೂಕಾಧ್ಯಕ್ಷ ಸರ್ದಾರ್‌ ಅಲಿ ಹೇಳಿದರು.

ಪಟ್ಟಣದ ಸರಕಾರಿ ಪಪೂ ಕಾಲೇಜ್‌ ಆವರಣದ ಶ್ರೀ ಸಿದ್ದೇಶ್ವರ ರಂಗಮಂದಿರದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೈನಂದಿನ ಕೆಲಸ ಕಾರ್ಯಗಳಲ್ಲಿ ನಿರತರಾಗಿರುವ ಸರಕಾರಿ ನೌಕರರ ಮಾನಸಿಕ ನೆಮ್ಮದಿಗೆ ಕ್ರೀಡಾಕೂಟ ಪ್ರಮುಖ ಪಾತ್ರವಹಿಸುತ್ತವೆ. ಅಲ್ಲದೇ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಸರಕಾರಿ ನೌಕರರ ಕಾರ್ಯಚಟುವಟಿಕೆಗಳನ್ನು ನಡೆಸಲು ಭವನ ಅಗತ್ಯವಾಗಿದ್ದು, ಸುಸಜ್ಜಿತವಾದ ಭವನ ನಿರ್ಮಾಣಕ್ಕೆ ಶಾಸಕರು ಸಕಲ ನೆರವು ನೀಡುವುದಾಗಿ ವಾಗ್ಧಾನ ಮಾಡಿದ್ದಾರೆ. ಆದಷ್ಟು ಬೇಗ ಅದಕ್ಕೊಂದು ಅಂತಿಮ ರೂಪು ನೀಡಲಿದ್ದಾರೆ ಎಂದರು.

ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ಸರ್ಕಾರಿ ನೌಕರರ ಸಂಘದ ಗೌರವ ಸಲಹೆಗಾರರಾದ ಡಾ| ವೆಂಕಟೇಶ ದೇಶಪಾಂಡೆ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ವಿವಿಧ ಸಂಘ-ಸಂಸ್ಥೆಗಳ ಗಣ್ಯರಿಗೆ ನೌಕರರ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು. ಕ್ರಿಕೆಟ್‌, ವಾಲಿಬಾಲ್‌, ಖೋಖೋ, ಥ್ರೋಬಾಲ್‌ ಆಟಗಳಿಗೆ ಚಾಲನೆ ದೊರೆಯಿತು.

ಇನ್ನುಳಿದಂತೆ ವೈಯುಕ್ತಿಕ ಆಟಗಳಲ್ಲಿ ಭಾಗವಹಿಸುವವರು ನೇರವಾಗಿ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ನೌಕರರ ಸಂಘದ ತಾಲೂಕು ಕಾರ್ಯದರ್ಶಿ ತಿಮ್ಮಣ್ಣ ನಾಯಕ್‌ ಹೇಳಿದರು.

ಸಂಘದ ರಾಜ್ಯ ಪರಿಷತ್‌ ಸದಸ್ಯ ರಮೇಶ ಇಲ್ಲೂರು, ಗೌರವ ಸಲಹೆಗಾರ ಶ್ಯಾಮಸುಂದರ್‌ ಇಂಜಿನಿ, ಹಿರಿಯ ಉಪಾಧ್ಯಕ್ಷೆ ಶಂಕ್ರಮ್ಮ, ಕ್ರೀಡಾ ಕಾರ್ಯದರ್ಶಿ ಶ್ರೀಕಾಂತ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚನ್ನಬಸಪ್ಪ ವಕ್ಕಳದ, ದೈಹಿಕ ಶಿಕ್ಷಕರ ಸಂಘದ ಯಮನಪ್ಪ, ಕಸಾಪ ತಾಲೂಕಾಧ್ಯಕ್ಷ ಶರಣಪ್ಪ ಕೋಟ್ಯಾಳ, ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಉಮೇಶ ಮರ್ಲಾನಹಳ್ಳಿ, ಅಮರೇಶ ಮೈಲಾಪುರ, ಪರುಶರಾಮ ಗಡ್ಡಿ, ದ್ಯಾಮಣ್ಣ ಬೆನಕಟ್ಟಿ, ಸಿದ್ದು ವಳಕಲದಿನ್ನಿ, ವೀರನಗೌಡ ಹಣವಾಳ, ಪರುಶರಾಮ ಗಡ್ಡಿ, ದ್ಯಾಮಣ್ಣ ಬೆನಕಟ್ಟಿ ಇನ್ನಿತರರಿದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.