ಹೆಣ್ಣಿನ ಜೀವನ ನೀರಿನ ಮೇಲಿನ ಗುಳ್ಳೆಯಂತೆ: ಜ್ಯೋತಿಬಾಯಿ


Team Udayavani, Mar 27, 2022, 5:54 PM IST

22life

ತಾಳಿಕೋಟೆ: ಇಂದಿನ ದಿನಮಾನದಲ್ಲಿಯ ವಿದ್ಯಾರ್ಥಿನಿಯರು ಸೋಮಾರಿತನಕ್ಕೆ ಲಕ್ಷ್ಯಕೊಡದೇ ಸತ್ಯಧರ್ಮ ಶಾಂತಿಯ ವಿಚಾರಗಳೊಂದಿಗೆ ಶಿಕ್ಷಕರು ನೀಡಿದ ವಿದ್ಯೆಯನ್ನು ಅರಿತುಕೊಂಡು ಮುನ್ನಡೆದು ತಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳಿ ಎಂದು ಮುದ್ದೇಬಿಹಾಳ ತಾಲೂಕಿನ ಅಬಕಾರಿ ಇಲಾಖೆ ಅಧಿಕಾರಿ ಜ್ಯೋತಿಬಾಯಿ ಮೈತ್ರೇಯಿ ನುಡಿದರು.

ವಿವಿ ಸಂಘದ ವತಿಯಿಂದ ನಡೆಸಿಕೊಂಡು ಬರಲಾಗುತ್ತಿರುವ ಎಸ್‌. ಕೆ. ಮಹಿಳಾ ಪಿಯು ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ನಿಯಾದವರು ಮುಂಬರುವ ದಿನಮಾನ ಗಳಲ್ಲಿಯೂ ತಮ್ಮ ಜೀವನಕ್ಕೆ ಒಂದು ಚೌಕಟ್ಟನ್ನು ಹಾಕಿಕೊಳ್ಳಬೇಕು. ಇದರಿಂದ ಒಳ್ಳೆಯ ಸ್ಥಾನಮಾನ ದೊರೆಯಲು ಕಾರಣವಾಗುತ್ತದೆ.ವಿವಾಹವಾದಕೂಡಲೇ ಪತಿಗೆ ನೌಕರಿ ಇದೆ ಅಥವಾ ಬಡತನವಿದೆ ಎಂಬುದನ್ನು ಅರ್ಥೈಸಿಕೊಂಡು ತಮ್ಮ ಓದುಬರಹವನ್ನು ನಿಲ್ಲಿಸುವದು ಬೇಡ. ಇನ್ನಷ್ಟು ವಿದ್ಯಾರ್ಜನೆ ತಾವು ಮಾಡಿದ್ದರೆ ತಮ್ಮ ಮಕ್ಕಳಿಗೆ ಹೇಳಿಕೊಡಲು ಸಾಧ್ಯವಾಗುತ್ತದೆ ಎಂದರು.

ಹೆಣ್ಣಿನ ಜೀವನ ಅಂದರೆ ನೀರಿನ ಮೇಲಿನ ಗುಳ್ಳೆ ಇದ್ದಂತೆ ಅದು ಒಡೆಯದಂತೆ ಕಾಪಾಡಿಕೊಂಡು ಹೋಗಬೇಕೆಂದು ಹೇಳಿದ ಅವರು, ನನ್ನ ಸಾಧನೆಗೆ ನನ್ನ ತಾಯಿಯೇ ಗುರುವಾಗಿದ್ದರು. ತರಬೇತಿಯ ಸಂಸ್ಥೆಯ ಮಾರ್ಗದರ್ಶಕರೂ ಕೂಡಾ ಕಾರಣಿಭೂತರಾಗಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಪಿಯು ಕಾಲೇಜಿನ ಪ್ರಾಚಾರ್ಯ ಜೆ.ಸಿ. ಹಿರೇಮಠ ಮಾತನಾಡಿ, ವಿದ್ಯೆಯೆಂಬುದು ಅಂಗಡಿಮುಗ್ಗಟ್ಟುಗಳಲ್ಲಿ ಮಾರಾಟಕ್ಕೆ ದೊರಕುವಂತಹ ವಸ್ತುವಲ್ಲ. ಒಳ್ಳೆಯ ಜ್ಞಾನದೊಂದಿಗೆ ವಿಷಯಗಳನ್ನು ಆಲಿಸಿ ಪಾಲಿಸಿದರೆ ಅದು ಏನು ಎಂಬುದು ಅದರ ಅರ್ಥ ಗೊತ್ತಾಗುತ್ತದೆ ಎಂದರು.

ಓದು ಬರಹದಲ್ಲಿ ಏಕಾಗ್ರತೆಯೆಂಬುದನ್ನು ಇಟ್ಟುಕೊಂಡು ನಡೆಯಿರಿ. ಮಹತ್ವದ ಮುಂದಿನ ನಿಮ್ಮ ಏಳ್ಗೆಗೆ ಸಹಾಯಕಾರಿಯಾಗುವಂತಹ ವಿಷಯಗಳನ್ನು ಅರ್ಥೈಸಿಕೊಂಡು ನಡೆಯಿರಿ. ಇಂದಿನ ದಿನಮಾನದಲ್ಲಿಯ ಸ್ಥಿತಿಗತಿಯನ್ನು ಅರಿತುಕೊಂಡು ದೇಶೀಯ ಸಂಸ್ಕೃತಿಯನ್ನು ಅಳವಡಿಸಿಕೊಂಡು ವಿದೇಶಿ ಸಂಸ್ಕೃತಿಗೆ ತಲೆಬಾಗದೇ ಶಾಲೆಯ ಹಾಗೂ ಶಿಕ್ಷಕರ ಹಾಗೂ ಪಾಲಕರ ಹೆಸರು ತರುವಂತಾಗಿ ಮಹಿಳಾ ಜೀವನವನ್ನು ಸಾರ್ಥಕಪಡಿಸಿಕೊಳ್ಳಿ ಎಂದರು.

ಇದೇ ಸಮಯದಲ್ಲಿ ಕೆಲವು ವಿದ್ಯಾರ್ಥಿನಿಯರಿಂದ ಸಂವಾದ ಕಾರ್ಯಕ್ರಮ ಏರ್ಪಟ್ಟು ಪ್ರಶ್ನೋತ್ತರಗಳು ನಡೆದವಲ್ಲದೇ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಖಾಸ್ಗತೇಶ್ವರ ಮಠದ ಉಸ್ತುವಾರಿ ಮುರುಘೇಶ ವಿರಕ್ತಮಠ ಸಾನ್ನಿಧ್ಯ ವಹಿಸಿದ್ದರು. ಮಹಿಳಾ ಕಾಲೇಜಿನ ಅಧ್ಯಕ್ಷರಾದ ಕಾಶೀನಾಥ ಸಜ್ಜನ, ವಿವಿ ಸಂಘದ ಎಸ್‌. ಕೆ. ಪಿಯು ಕಾಲೇಜ್‌ ಅಧ್ಯಕ್ಷರಾದ ಶಂಕರಗೌಡ ಹಿಪ್ಪರಗಿ, ವಿವಿ ಸಂಘದ ಸದಸ್ಯರಾದ ಅಣ್ಣು ವಾಲಿ ಇದ್ದರು. ಉಪನ್ಯಾಸಕರಾದ ಬಿ.ವಿ. ಅಂಬಿಗೇರ ಸ್ವಾಗತಿಸಿದರು. ಉಪನ್ಯಾಸಕರಾದ ಎಸ್‌. ಎಸ್‌. ನಾಡಗೌಡ, ಉಪನ್ಯಾಸಕಿ ಸಿ.ಪಿ. ಧನಪಾಲ ನಿರೂಪಿಸಿದರು. ಉಪನ್ಯಾಸಕಿ ವಿ.ಸಿ. ವಿರಕ್ತಮಠ ವಂದಿಸಿದರು.

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

police crime

Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್‍ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.