“ಗಂಗಾ ಕಲ್ಯಾಣ’ ಭಾರೀ ಭ್ರಷ್ಟಾಚಾರ: ಸಿದ್ದರಾಮಯ್ಯ
Team Udayavani, Mar 27, 2022, 11:15 PM IST
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ “ಗಂಗಾ ಕಲ್ಯಾಣ’ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ.
ಕೂಡಲೇ ಸರಕಾರ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯಲಿ: ಪ್ರಮೋದ ಮುತಾಲಿಕ್
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಉದ್ದೇಶಿತ ಯೋಜನೆಯಲ್ಲಿ 2019-20 ಮತ್ತು 2020-21ನೇ ಸಾಲಿನ ಟೆಂಡರ್ ಪ್ರಕ್ರಿಯೆಯಲ್ಲಿ ಸುಮಾರು 130 ಕೋಟಿ ರೂ.ಗಳಿಗೂ ಅಧಿಕ ಪ್ರಮಾಣದ ಭ್ರಷ್ಟಾಚಾರ ಕಂಡುಬಂದಿದೆ. ಇದರಲ್ಲಿ ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದರು.