ಹಿಂದೂ ಸಮಾಜದವರಿಗೇ ಜಾತ್ರಾ ವ್ಯಾಪಾರ ಮಳಿಗೆ ನೀಡಲು ಮನವಿ
Team Udayavani, Mar 28, 2022, 3:04 PM IST
ಸಾಗರ: ಏ. 5ರಿಂದ ನಡೆಯುವ ಇತಿಹಾಸ ಪ್ರಸಿದ್ಧ ನಗರದ ಮಹಾಗಣಪತಿ ಜಾತ್ರೆ ವ್ಯಾಪಾರ ಮಳಿಗೆಗಳನ್ನು ಹಿಂದೂ ಸಮಾಜದ ವ್ಯಾಪಾರಿಗಳಿಗೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಾತ್ರೆಯಲ್ಲಿ ಮಹಾಗಣಪತಿ ರಸ್ತೆಯ ಇಕ್ಕೆಲಗಳಲ್ಲಿ ಹಣ್ಣುಕಾಯಿ, ಆಟಿಕೆ, ತಿಂಡಿತಿನಿಸು ಇತ್ಯಾದಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿ ಹರಾಜು ಹಾಕಿ ಹೆಚ್ಚಿನ ದರಕ್ಕೆ ಹರಾಜು ಹಿಡಿದವರಿಗೆ ನೀಡಲಾಗುತ್ತಿದೆ. ದೇವಸ್ಥಾನವು ಮುಜರಾಯಿಗೆ ಸೇರಿದ್ದು, ಅನ್ಯಧರ್ಮಿಯರಿಗೆ ನೀಡಲು ಅವಕಾಶ ಇರುವುದಿಲ್ಲ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರಸ್ತುತ ಒಂದು ಕೋಮಿನ ಜನ ಈ ದೇಶದ ಕಾನೂನು ಸಂವಿಧಾನ ಮತ್ತು ಹಿಂದೂ ಸಂಸ್ಕೃತಿ, ಧಾರ್ಮಿಕ ಪದ್ಧತಿಯನ್ನು ವಿರೋಧಿಸುತ್ತಾ ಬಂದಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಧಾರ್ಮಿಕ ಪದ್ಧತಿಗಳ ವಿರೋಧಿಸುತ್ತಾ ಬಂದವರಿಗೆ ವ್ಯಾಪಾರ ಮಳಿಗೆ ನೀಡುವುದು ಸಮಂಜಸವಲ್ಲ. ಈಗಾಗಲೇ ದಕ್ಷಿಣ ಕನ್ನಡ, ಶಿರಸಿ, ಶಿವಮೊಗ್ಗದಲ್ಲಿ ಜಾತ್ರೆಗಳ ವ್ಯಾಪಾರ ವಹಿವಾಟುಗಳನ್ನು ಹಿಂದೂಯೇತರರಿಗೆ ನೀಡದಿರಲು ಆಡಳಿತ ಮಂಡಳಿ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತಾ ಧಿಕಾರಿಯಾಗಿರುವ ತಾವು ಮುಜರಾಯಿ ಕಾಯ್ದೆ ಪ್ರಕಾರ ಹಿಂದುಯೇತರರಿಗೆ ಮುಜರಾಯಿ ದೇವಸ್ಥಾನಗಳ ಆಡಳಿತ, ವ್ಯಾಪಾರ ವಹಿವಾಟಿನಲ್ಲಿ ಅವಕಾಶ ನೀಡದಂತೆ ನಿರ್ಬಂಧ ವಿಧಿಸಬಹುದಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಐ.ವಿ.ಹೆಗಡೆ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕಾಮತ್, ವಿಶ್ವಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ರವೀಶ್, ಕಾರ್ಯದರ್ಶಿ ನಂದೀಶ್ ಸೂರಗುಪ್ಪೆ, ಸುದರ್ಶನ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ
BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು