ನಾವು ಪರಿಶುದ್ಧವಾಗಿದ್ದರೆ ಯಾರು ಏನು ಮಾಡೋಕಾಗಲ್ಲ : ಹೆಚ್.ಡಿ.ಕುಮಾರಸ್ವಾಮಿ
ತಾಯಿ ಅವರಿಗೆ ಐಟಿ ನೊಟೀಸ್ ನೀಡಿರುವ ಬಗ್ಗೆ ಕುಮಾರಸ್ವಾಮಿ ಹೇಳಿಕೆ
Team Udayavani, Mar 28, 2022, 5:45 PM IST
ಬೆಂಗಳೂರು: ತಮ್ಮ ತಾಯಿ ಅವರಿಗೆ ಆದಾಯ ತೆರಿಗೆ ನೋಟಿಸ್ ನೀಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ವಿಧಾನಸೌಧದ ಬಳಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ ಅಗತ್ಯವೂ ಇಲ್ಲ” ಎಂದರು.
ದೇವೆಗೌಡರ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದು ಮಹತ್ವ ಕೊಟ್ಟಿಲ್ಲ. ನಾವು ಸಹ ನಮ್ಮ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದೂ ಪ್ರಾಮುಖ್ಯತೆ ಕೊಟ್ಟವರಲ್ಲ. ನಾವು ಪರಿಶುದ್ಧವಾಗಿರಬೇಕು ಅಷ್ಟೇ. ನೋಟಿಸ್ ಕೊಟ್ಟಿದ್ದಾರೆ, ಅದಕ್ಕೆ ಏನು ಉತ್ತರ ಕೊಡಬೇಕೋ ಕೊಟ್ಟರಾಯಿತು. ನನ್ನ ಸಹೋದರ ರೇವಣ್ಣ ಅವರಿಗೂ ಇದನ್ನೇ ಹೇಳಿದ್ದೇನೆ. ಇದನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಆದಾಯ ತೆರಿಗೆ ಬಗ್ಗೆ ಕಾನೂನಾತ್ಮಕವಾಗಿ ಆಸ್ತಿ ವಿಚಾರವಾಗಿ ಕೇಳಿರುತ್ತಾರೆ. ಆ ವಿವರಗಳನ್ನು ಸಲ್ಲಿಕೆ ಮಾಡಿದರೆ ಆಯಿತು ಎಂದು ಅವರು ತಿಳಿಸಿದರು.
ಇದನ್ನೂ ಓದಿ : ಎರಡು ಕಿ.ಮೀ ದೂರದಿಂದ ವೀಲ್ ಚೇರ್ ನಲ್ಲೇ ಬಂದು ಪರೀಕ್ಷೆ ಬರೆದ ವಿಶೇಷಚೇತನ ವಿದ್ಯಾರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ