ಹಳಿ ಮೇಲೆ ನಿಂತ ಕುರಿಗಳಿಗೆ ರೈಲು ಡಿಕ್ಕಿ : ಓರ್ವ ಕುರಿಗಾಹಿ ಸೇರಿ 32 ಕುರಿಗಳ ದಾರುಣ ಸಾವು
Team Udayavani, Mar 28, 2022, 7:08 PM IST
ಶ್ರೀರಂಗಪಟ್ಟಣ : ಚಲಿಸುತ್ತಿದ್ದ ರೈಲಿಗೆ ಸಿಲುಕಿ 32 ಕುರಿಗಳು ಸೇರಿ ಓರ್ವ ಕುರಿಗಾಹಿ ದಾರುಣವಾಗಿ ಮೃತಪಟ್ಟ ಘಟನೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾ ಪ್ತಿಯಲ್ಲಿ ನಡೆದಿದೆ.
ಮೈಸೂರಿನಿಂದ ಶ್ರೀರಂಗಪಟ್ಟಣ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಗೋಲ್ ಗುಂಬಸ್ ಎಕ್ಸ್ ಪ್ರೆಸ್ ರೈಲಿಗೆ ಶ್ರೀರಂಗಪಟ್ಟಣ ಸವಮೀಪದ ಪಾಲಹಳ್ಳಿ ಹಾಗೂ ಪಶ್ವಿಮವಾಹಿನಿಯ ನಡುವಿನ ಮಧ್ಯ ಭಾಗದಲ್ಲಿ ಈ ಘಟನೆ ನಡೆದಿದೆ.
ರೈಲ್ಬೆ ಹಳಿ ಪಕ್ಕದಲ್ಲಿ ಮೇಯುತ್ತಿದ್ದ ಕುರಿಗಳು ರೈಲು ಆಗಮಿಸುವ ವೇಳೆ ರೈಲಿನ ಹಾರ್ನ್ ಶಬ್ದಕ್ಕೆ ಬೆದರಿ ರೈಲು ಹಳಿಗೆ ಬಂದು ನಿಂತಿವೆ. ರೈಲು ಬರುತ್ತಿದ್ದನ್ನು ಗಮನಿಸಿದ ಸ್ಥಳದಲ್ಲಿದ್ದ ಕುರಿಗಾಹಿ ಕುರಿಗಳನ್ನು ಓಡಿಸಲು ಬಂದಿದ್ದಾನೆ. ಈ ವೇಳೆ ಕುರಿಗಳ ಜೊತೆಗೆ ಆತನು ಕೂಡ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ.
ಪಾಂಡವಪುರ ತಾಲೂಕಿನ ಕೆ.ಬೆ್ಟಹಳ್ಳಿ ಗ್ರಾಮದ ನಿಂಗೇಗೌಡ ಎಂಬ ಕುರಿಗಾಯಿ ಮೃತಪಟ್ಟಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಮೈಸೂರಿನ ರೈಲ್ವೇ ಹಾಗೂ ಶ್ರೀರಂಗಪಟ್ಟಣ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : “ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ” ಪ್ರಿ-ಪೇಯ್ಡ್ ಪ್ಲಾನ್ ಲಾಂಚ್ ಮಾಡಿದ ಜಿಯೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !