ಎಸ್ ಎಸ್ಎಲ್ಸಿ ಪರೀಕ್ಷೆ ಸುಸೂತ್ರ ಆರಂಭ
267 ಜನ ಗೈರು
Team Udayavani, Mar 29, 2022, 9:55 AM IST
ಧಾರವಾಡ: ಜಿಲ್ಲೆಯಲ್ಲಿ ಎಸ್ ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಪ್ರಥಮ ಭಾಷೆಯ ಪರೀಕ್ಷೆಗೆ ನೋಂದಣಿಯಾಗಿದ್ದ 28,332 ವಿದ್ಯಾರ್ಥಿಗಳ ಪೈಕಿ 28,065 ವಿದ್ಯಾರ್ಥಿಗಳು ಹಾಜರಾಗಿದ್ದರೆ, 267 ಜನ ಗೈರು ಹಾಜರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 113 ಎಸ್ ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇನ್ನು ಎಸ್ಎಸ್ಎಲ್ಸಿ ಬಾಹ್ಯ ಪರೀಕ್ಷೆ ತೆಗೆದುಕೊಂಡಿರುವ ಪರೀಕ್ಷಾರ್ಥಿಗಳಿಗಾಗಿ ಧಾರವಾಡ ನಗರದಲ್ಲಿ 3 ಖಾಸಗಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಾಹ್ಯ ಪರೀಕ್ಷೆಗೆ ಒಟ್ಟು 1163 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ. ಸೋಮವಾರ ನಡೆದ ಪರೀಕ್ಷೆಗೆ 1027 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದು, 136 ಜನ ಗೈರು ಹಾಜರಾಗಿದ್ದಾರೆ.
ಡಿಸಿ ಭೇಟಿ: ನಗರದ ಬಾಸೆಲ್ ಮಿಷನ್ ಇಂಗ್ಲಿಷ್ ಮಾಧ್ಯಮ ಶಾಲೆ ಸೇರಿದಂತೆ ವಿವಿಧ ಶಾಲೆಗಳಲ್ಲಿನ ಎಸ್. ಎಸ್ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಡಿಸಿ ನಿತೇಶ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, ಯಾವುದೇ ರೀತಿಯ ನಕಲು, ದುರ್ವರ್ತನೆ ಸೇರಿದಂತೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆಯಲ್ಲಿ ಭಾಗವಹಿಸಿದ್ದಾರೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿ ಸುರೇಶ ಹುಗ್ಗಿ, ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ, ಎಸ್ ಎಸ್ಎಲ್ಸಿ ಜಿಲ್ಲಾ ನೋಡೆಲ್ ಅ ಧಿಕಾರಿ ಪೂರ್ಣಿಮಾ ಮುಕ್ಕುಂದಿ, ವಿಷಯ ಪರಿವೀಕ್ಷಕ ಸಂಜಯ ಮಾಳಿ, ಬಾಸೆಲ್ ಮಿಷನ್ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಇ.ಎಸ್. ತುಮಕೂರ, ಮಂಜುನಾಥ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್