ಮಳೆಗಾಲ ಮುನ್ನ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸಿ
Team Udayavani, Mar 29, 2022, 10:35 AM IST
ಹುಬ್ಬಳ್ಳಿ: ನಗರದಲ್ಲಿ ಮಳೆಗಾಲ ಶುರುವಾಗುವ ಮುನ್ನ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ. ಅಂತಿಮ ಹಂತದಲ್ಲಿರುವ ರಸ್ತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಇಂಡಿ ಪಂಪ್ ವೃತ್ತದ ಆಸಾರಹೊಂಡದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಕೆಆರ್ಐಡಿಎಲ್ ಅನುದಾನದಲ್ಲಿ ವಾರ್ಡ್ 55ರ ಇಂಡಿ ಪಂಪ್ನಿಂದ ಆಸಾರಹೊಂಡದ ಮಾರ್ಗವಾಗಿ ಚನ್ನಪೇಟೆ ಮುಖ್ಯ ರಸ್ತೆಯವರೆಗೆ 1ಕೋಟಿ ರೂ.ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಮಹಾನಗರ ಪಾಲಿಕೆ ಅನುದಾನದ 86ಲಕ್ಷ ರೂ. ವೆಚ್ಚದ ಒಳಚರಂಡಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಇಂಡಿ ಪಂಪ್ ವೃತ್ತದಿಂದ ಚನ್ನಪೇಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕಾಂಕ್ರೀಟಿಕರಣ ಮಾಡಲಾಗುತ್ತಿದೆ. ಒಳಚರಂಡಿಗಳಲ್ಲಿ ಕಸ-ಪ್ಲಾಸ್ಟಿಕ್ ವಸ್ತುಗಳನ್ನು ಎಸೆಯುವುದರಿಂದ ಚರಂಡಿ ತುಂಬಿ, ರಸ್ತೆ ಮೇಲೆ ನೀರು ಹರಿಯುತ್ತದೆ. ಜನರು ಓಡಾಡಲು ತೊಂದರೆ ಉಂಟಾಗುತ್ತದೆ. ರಸ್ತೆ-ಒಳಚರಂಡಿ ಕಾಮಗಾರಿಗಳು ವಿಳಂಬವಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಾರ್ಡ್ 56ರ ತೊರವಿ ಹಕ್ಕಲದ ಮುಖ್ಯ ರಸ್ತೆಯ ವೃತ್ತದಲ್ಲಿ ಹೈಮಾಸ್ಟ್ ಅಳವಡಿಕೆಗೆ ಭೂಮಿಪೂಜೆ ನೆರವೇರಿಸಿದರು. ನಂತರ ಪಾಲಿಕೆ ಅನುದಾನದಲ್ಲಿ 35 ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲದ ಕಿಟ್ ಹಾಗೂ ನಲ್ಮ್ ಯೋಜನೆಯಡಿ ಫಲಾನುಭವಿಗಳಿಗೆ 2 ಆಟೋಗಳನ್ನು ವಿತರಿಸಿದರು.
ಪಾಲಿಕೆ ಸದಸ್ಯರಾದ ವೆಂಕಟೇಶ ಮೇಸ್ತ್ರಿ, ಇಕ್ಬಾಲ್ ನವಲೂರ, ಸುಭಾಸ ಅಕ್ಕಲಕೋಟೆ, ಸೀಮಾ ಲದವಾ, ದೇವೇಂದ್ರ ಅಲಕೋಟೆ, ಕೇಶವ ಜಿತೋರಿ, ನಾಗರಾಜ ಕಲಾಲ, ಪಾಲಿಕೆ ಮಾಜಿ ಮಹಾಪೌರ ಪಾಂಡುರಂಗ ಪಾಟೀಲ, ತೋಟಪ್ಪ ನಿಡಗುಂದಿ, ಮಂಜುನಾಥ ದಲಭಂಜನ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ