ಅಸ್ಸಾಂ, ಮೇಘಾಲಯ ಮಹತ್ವದ ಒಪ್ಪಂದಕ್ಕೆ ಸಹಿ: ಕೊನೆಗೂ ಬಗೆಹರಿದ 50 ವರ್ಷದ ಗಡಿ ವಿವಾದ
1972ರಲ್ಲಿ ಮೇಘಾಲಯದಿಂದ ಅಸ್ಸಾಂ ಬೇರ್ಪಟ್ಟ ಸಂದರ್ಭದಿಂದ ವಿವಾದ ಹುಟ್ಟಿಕೊಂಡಿತ್ತು.
Team Udayavani, Mar 29, 2022, 4:23 PM IST
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ (ಮಾರ್ಚ್ 29) ಸಂಜೆ ಅಸ್ಸಾಂ ಮತ್ತು ಮೇಘಾಲಯ ಸರ್ಕಾರಗಳು ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸುಮಾರು 50 ವರ್ಷಗಳ ದೀರ್ಘಕಾಲದ ಗಡಿ ವಿವಾದ ಅಂತ್ಯ ಕಂಡಂತಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:45 ನಿಮಿಷಗಳ ಪ್ರಯಾಣ ಕುತೂಹಲ…ತೆರೆಮರೆಯ ಹೀರೋ ಅನಾವರಣ; ಅಂದು ಇಂಗ್ಲಿಷ್ ಲೆಕ್ಚರ್ ಇಂದು…
ಗೃಹವ್ಯವಹಾರಗಳ ಸಚಿವಾಲಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಮೇಘಾಲಯ ಮುಖ್ಯಮಂತ್ರಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ಗೃಹ ವ್ಯವಹಾರ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಉಭಯ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಗೃಹ ಸಚಿವಾಲಯದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಮತ್ತು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ವರದಿ ವಿವರಿಸಿದೆ.
ಅಸ್ಸಾಂ ಮತ್ತು ಮೇಘಾಲಯ ಮುಖ್ಯಮಂತ್ರಿ ಜನವರಿ 31ರಂದು ಗಡಿ ವಿವಾದ ಬಗೆಹರಿಸುವ ಕರಡು ನಿರ್ಣಯವನ್ನು ಕೇಂದ್ರ ಗೃಹ ಸಚಿವಾಲಯ ಪರಿಶೀಲಿಸಿ, ಪರಿಗಣಿಸುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಪ್ರಸ್ತಾವಿತ ಒಪ್ಪಂದದ ಶಿಫಾರಸಿನ ಪ್ರಕಾರ, ವಿವಾದಕ್ಕೆ ಕಾರಣವಾಗಿರುವ ಒಟ್ಟು ಆರು ಪ್ರದೇಶಗಳ 36.79 ಚದರ ಕಿಲೋ ಮೀಟರ್ ಭೂ ಪ್ರದೇಶಗಳ ಪೈಕಿ ಅಸ್ಸಾಂ 18.51 ಚದರ ಕಿಲೋ ಮೀಟರ್ ಭೂಪ್ರದೇಶ ಪಡೆಯಲಿದೆ. ಇನ್ನುಳಿದ 18.28 ಚದರ ಕಿಲೋ ಮೀಟರ್ ಭೂಪ್ರದೇಶ ಮೇಘಾಲಯಕ್ಕೆ ಸೇರ್ಪಡೆಗೊಳ್ಳಲಿದೆ.
1972ರಲ್ಲಿ ಮೇಘಾಲಯದಿಂದ ಅಸ್ಸಾಂ ಬೇರ್ಪಟ್ಟ ಸಂದರ್ಭದಿಂದ ವಿವಾದ ಹುಟ್ಟಿಕೊಂಡಿತ್ತು. ನೂತನ ರಾಜ್ಯಗಳ ರಚನೆ ಸಂದರ್ಭದಲ್ಲಿನ ಪ್ರಾಥಮಿಕ ಒಪ್ಪಂದದ ವೇಳೆಯಲ್ಲಾದ ಗಡಿ ಗುರುತಿನ ವ್ಯತ್ಯಾಸದ ನಂತರ ವಿವಾದ ಉಲ್ಬಣಗೊಳ್ಳಲು ಕಾರಣವಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ