ಶಿವಮೊಗ್ಗ: ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ
Team Udayavani, Mar 29, 2022, 7:28 PM IST
ಶಿವಮೊಗ್ಗ: ತಾಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿಯಿತು. ಬಿಸಿಲಿನ ಕಂಗೆಟ್ಟಿದ್ದ ಜನ ಸ್ವಲ್ಪ ನಿರಾಳರಾದರು. ಮಳೆಯಿಂದ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದ್ದು, ಬೆಳೆ ಹಾನಿ ಕೂಡ ಆಗಿದೆ.
ಆಯನೂರು ಸುತ್ತಮುತ್ತ ಸಂಜೆ ವೇಳೆಗೆ ಜೋರ ಮಳೆ ಜೊತೆಗೆ ಆಲಿಕಲ್ಲು ಬಿದ್ದಿದ್ದು ಆಲಿಕಲ್ಲು ಬಿದ್ದ ರಭಸಕ್ಕೆ ಚನ್ನಹಳ್ಳಿ ಗ್ರಾಮದ ಮನೆಗಳ ಮೇಲಿನ ಹೆಂಚುಗಳು, ಸೋಲಾರ್ ಪ್ಯಾನಲ್ಗಳು ಒಡೆದು ಹೋಗಿವೆ. ಇನ್ನು, ಬಾಳೆ, ಅಡಿಕೆ ತೋಟಗಳಿಗೆ ಆಲಿಕಲ್ಲಿನಿಂದ ಹಾನಿ ಉಂಟಾಗಿದೆ. ಇದು ರೈತರಿಗೆ ನಷ್ಟ ಉಂಟುಮಾಡಿ ಚಿಂತೆಗೀಡು ಮಾಡಿದೆ.
ಆಯನೂರು ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ತಿಳಿದು ಬಂದಿದೆ. ಇತ್ತ ಶಿವಮೊಗ್ಗ ನಗರದಲ್ಲಿಯು ಸಂಜೆ ಜೋರು ಮಳೆ ಸುರಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !