ಚುನಾವಣ ಸುಧಾರಣ ಚರ್ಚೆ: ಹೊಸ ಹೊಳಹು ಮೂಡಲಿ


Team Udayavani, Mar 30, 2022, 6:00 AM IST

ಚುನಾವಣ ಸುಧಾರಣ ಚರ್ಚೆ: ಹೊಸ ಹೊಳಹು ಮೂಡಲಿ

ಚುನಾವಣೆಗಳಲ್ಲಿ ಭ್ರಷ್ಟಾಚಾರ ರಹಿತ, ಸಚ್ಛಾರಿತ್ರ್ಯ ಉಳ್ಳವರೇ ಆಯ್ಕೆಯಾಗಲಿ, ಪಕ್ಷಾಂತರ ನಿಲ್ಲಲಿ, ಚುನಾವಣೆ ಪ್ರಚಾರಕ್ಕಾಗಿ ಮಾಡಲಾಗುತ್ತಿರುವ ಖರ್ಚು ವೆಚ್ಚಗಳು ನಿಲ್ಲಲಿ, ಯಾವುದೇ ಕಾರಣಕ್ಕೂ ಚುನಾವಣೆಗಳಲ್ಲಿ ಮದ್ಯದ ಹಾವಳಿ ನುಸುಳದಂತಿರಲಿ, ಅಭ್ಯರ್ಥಿಗಳು ಪಾರದರ್ಶಕವಾಗಿರಲಿ, ಮತಕ್ಕಾಗಿ ನೋಟು ನೀಡುವ ಸಂಪ್ರದಾಯಗಳು ಕೊನೆಗೊಳ್ಳಲಿ ಎಂಬಿತ್ಯಾದಿ ವಿಚಾರಗಳು ಬಹು ಹಿಂದಿನಿಂದಲೂ ಕೇಳಿಬರುತ್ತಿದ್ದು, ಇಲ್ಲಿಯವರೆಗೆ ಇದಕ್ಕೊಂದು ತಾರ್ಕಿಕ ಅಂತ್ಯ ಸಿಕ್ಕಿಲ್ಲ.

ಈಗಲೂ ಚುನಾವಣೆಗಳಲ್ಲಿ ಹಣ ಮತ್ತು ಮದ್ಯದ ಬಲ ತುಸು ಹೆಚ್ಚಾಗಿಯೇ ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಲ್ಲಿ ನಾವೆಲ್ಲರೂ ಸೋತಿದ್ದೇವೆ ಎಂಬುದು ನಿಜಕ್ಕೂ ಬೇಸರದ ವಿಚಾರವೇ. ಈಗ ಕರ್ನಾಟಕ ವಿಧಾನಮಂಡಲದಲ್ಲಿ ಚುನಾವಣೆ ಸುಧಾರಣೆಗಾಗಿ ಸೋಮವಾರ ವಿಶೆೇಷ ಚರ್ಚೆ ಆರಂಭವಾಗಿದ್ದು, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೆಲವೊಂದು ಅಂಶಗಳನ್ನು ಪ್ರಸ್ತಾವಿಸಿದ್ದಾರೆ. ವಿಧಾನಸಭೆಯಲ್ಲಿ ಕಾಗೇರಿ ಅವರು ಪ್ರಸ್ತಾವಿಸಿರುವ ಅಂಶಗಳು ಈಗಿನ ಕಾಲಘಟ್ಟಕ್ಕೆ ಉಚಿತವೇ ಆಗಿವೆ. ಈ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳು ಗಮನಹರಿಸಬೇಕು ಎಂಬುದು ಎಲ್ಲರ ಕಳಕಳಿ. ಇಂಥದ್ದೊಂದು ಗಂಭೀರ ಹಾಗೂ ಅಗತ್ಯ ವಿಚಾರದ ಬಗ್ಗೆ ಚರ್ಚೆಗೆ ನಾಂದಿ ಹಾಡಿರುವುದು ಸ್ವಾಗತಾರ್ಹ.

ಇತ್ತೀಚಿನ ದಿನಗಳಲ್ಲಿ ಚುನಾವಣೆಗಳೆಂದರೆ, ಅವು ದುಡ್ಡು ಮಾಡಿಕೊಳ್ಳುವ, ಹಂಚುವ ಮತ್ತು ಹಿಂಸಾಚಾರಕ್ಕೆ ಕಾರಣವಾಗುವ ಸಂಗತಿಗಳಾಗಿವೆ. ದೇಶದ ಕೆಲವು ರಾಜ್ಯಗಳಲ್ಲಿ ಹಿಂಸಾಚಾರವಿಲ್ಲದೇ ಚುನಾವಣೆ ನಡೆಯುವುದಿಲ್ಲ ಅನ್ನುವಷ್ಟರ ಮಟ್ಟಿಗೆ ಇವು ಹಾಸುಹೊಕ್ಕಾಗಿವೆ. ಚುನಾವಣೆಯಲ್ಲಿ ಒಂದು ಪಕ್ಷವನ್ನು ಬಿಟ್ಟು, ಬೇರೊಂದು ಪಕ್ಷಕ್ಕೆ ಬೆಂಬಲ ನೀಡಿದರೆ, ಅವರನ್ನು ಕೊಲ್ಲುವುದು, ಅವರ ಮೇಲೆ ದಾಳಿ ಮಾಡುವಂಥ ಘಟನೆಗಳು ನಡೆಯುತ್ತಲೇ ಇವೆ. ಹೀಗಾಗಿ ಕೇಂದ್ರ ಚುನಾವಣ ಆಯೋಗಕ್ಕೆ ಶಾಂತ ರೀತಿಯಲ್ಲಿ ಚುನಾವಣೆಗಳನ್ನು ಮಾಡಿ ಮುಗಿಸುವುದೇ ದೊಡ್ಡ ತ್ರಾಸದಾಯಕ ಕೆಲಸವಾಗಿಬಿಟ್ಟಿದೆ. 50 ವರ್ಷಗಳ ಹಿಂದಿನ ವಾತಾವರಣಕ್ಕೂ, ಈಗಿನ ವಾತಾವರಣಕ್ಕೂ ಅಜಗಜಾಂತರವಿದೆ. ಆಗ ದೇಶದಲ್ಲಿ ಕಲಿಕೆ ಇಲ್ಲದವರೇ ಹೆಚ್ಚಾಗಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ.

ದೇಶದಲ್ಲಿ ಅನಕ್ಷರಸ್ಥರಿಗಿಂತ ಅಕ್ಷರಸ್ಥರೇ ಹೆಚ್ಚಾಗಿದ್ದಾರೆ. ಯಾರಿಗೆ ಮತ ಹಾಕಬೇಕು, ಯಾರಿಗೆ ಹಾಕುವುದು ಬೇಡ ಎಂಬ ಜ್ಞಾನವೂ ಜನರಲ್ಲಿ ಹೆಚ್ಚಾಗಿದೆ. ಉತ್ತಮ ಆಡಳಿತ ಕೊಡುವವರಿಗೆ ಮತ ಹಾಕಬೇಕು ಎಂಬ ಅರಿವೂ ಹೆಚ್ಚಾಗಿದೆ. ಇಷ್ಟೆಲ್ಲ ಆದರೂ, ಇನ್ನೂ ಚುನಾವಣೆಗಳೆಂದರೆ, ಕಾಸು ಮಾಡಿಕೊಳ್ಳುವ ಅವಕಾಶಗಳು ಎಂಬ ಅಭಿಪ್ರಾಯ ಜನರಲ್ಲಿ ಇರುವುದು ದುರದೃಷ್ಟಕರ. ಇಂಥ ಸಂದರ್ಭದಲ್ಲಿ ಇಡೀ ಚುನಾವಣೆ ವ್ಯವಸ್ಥೆಗೆ ತಕ್ಕ ಮಾರ್ಪಾಡು ಮಾಡಬೇಕಾಗಿರುವುದು ಅನಿವಾರ್ಯವೇ ಆಗಿದೆ. ಚುನಾವಣೆಗಳು ಧನಾದೇಶಗಳಾಗದೇ ಜನಾದೇಶಗಳಾಗಬೇಕು.

ಅಭ್ಯರ್ಥಿಗಳು ಕೋಟಿ ಕೋಟಿಗಳ ಲೆಕ್ಕಾಚಾರದಲ್ಲಿ ಹಣ ವೆಚ್ಚ ಮಾಡದೇ ಚುನಾವಣೆ ಎದುರಿಸುವ ವಾತಾವರಣ ಸೃಷ್ಟಿಯಾಗಬೇಕು. ಚುನಾವಣ ವಿಧಾನ ಮತ್ತು ಅಭ್ಯರ್ಥಿಗಳ ಎಲ್ಲ ವಿವರಗಳು ಪಾರದರ್ಶಕವಾಗಿ ಜನರಿಗೆ ಸಿಗುವಂತಿರಬೇಕು. ಚುನಾವಣ ವೆಚ್ಚ ಮಿತಿ ವಿಚಾರದಲ್ಲಿ ಅಭ್ಯರ್ಥಿಗಳು ಬದಲಿ ಮಾರ್ಗ ಹಿಡಿಯದಂತೆ ನೋಡಿಕೊಳ್ಳುವ ದೃಢ ಕಾನೂನುಗಳು ಜಾರಿಗೆ ಬರಬೇಕು.  ಈ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ನಡೆಯುತ್ತಿರುವ ಚರ್ಚೆ ಹೊಸ ಹೊಳಹುಗಳನ್ನು ನೀಡಿ, ಸುಧಾರಣ ಕ್ರಮದಲ್ಲಿ ಇಡೀ ದೇಶಕ್ಕೆ ಅನುಕೂಲವಾಗುವ ಮಾರ್ಗದರ್ಶನವನ್ನು ಸದನ ನೀಡಲಿ ಎನ್ನುವುದು ಎಲ್ಲರ ಆಶಯ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.