ಸಲಾಂ ಮಂಗಳಾರತಿ ಕುರಿತು ಕೊಲ್ಲೂರು ದೇಗುಲದ ಸ್ಪಷ್ಟನೆಯಲ್ಲೇನಿದೆ?

ಸಲಾಂ ಮಂಗಳಾರತಿ ಕೈ ಬಿಡುವಂತೆ ವಿಶ್ವ ಹಿಂದೂ ಪರಿಷತ್‌ ಆಗ್ರಹ

Team Udayavani, Mar 30, 2022, 11:55 AM IST

ಸಲಾಂ ಮಂಗಳಾರತಿ ಕುರಿತು ಕೊಲ್ಲೂರು ದೇಗುಲದ ಸ್ಪಷ್ಟನೆಯಲ್ಲೇನಿದೆ?

ಕೊಲ್ಲೂರು ಮಾ. 29: ಕೊಲ್ಲೂರು ದೇಗುಲದ ಆಡಳಿತ ಮಂಡಳಿಯು ಸಲಾಂ ಮಂಗಳಾರತಿಯ ಬಗ್ಗೆ ಸ್ಪಷ್ಟನೆ ನೀಡಿದ್ದು, ದೇಗುಲದಲ್ಲಿ ಸಂಪ್ರದಾಯದಂತೆ ಪೂಜೆ ನಡೆಯುತ್ತಿದೆ. ಸಂಜೆ ಪ್ರದೋಷ ಪೂಜೆ ಹೊರತುಪಡಿಸಿ ಇನ್ನಿತರ ಯಾವುದೇ ಪೂಜೆ ನಡೆಯುತ್ತಿಲ್ಲ. ಸಂಜೆ ನಡೆಯುವ ಈ ಪ್ರದೋಷ ಪೂಜೆಯನ್ನು ಸ್ಥಳೀಯರು ಸಲಾಂ ಮಂಗಳಾರತಿ ಅನ್ನುತ್ತಾರೆ. ಆದರೆ ದೇಗುಲದಿಂದ ವ್ಯಕ್ತಿ ಪೂಜೆ ಮಾಡುತ್ತಿಲ್ಲ ಎಂದು ತಿಳಿಸಲಾಗಿದೆ.

ವಿಶ್ವ ಹಿಂದೂ ಪರಿಷತ್‌ ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿಗೆ ಪತ್ರ ಬರೆದು ಸಲಾಂ ಮಂಗಳಾರತಿ ಕೈ ಬಿಡುವಂತೆ ಆಗ್ರಹಿಸಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯು ಪತ್ರಿಕಾ ಹೇಳಿಕೆ ನೀಡಿ ಈ ವಿಚಾರವನ್ನು ಸ್ಪಷ್ಟಪಡಿಸಿದೆ.

ಸಲಾಂ ಮಂಗಳಾರತಿ ಇಲ್ಲ: ಸುಕುಮಾರ ಶೆಟ್ಟಿ
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಸಲಾಂ ಮಂಗಳಾರತಿಯ ಯಾವುದೇ ದಾಖಲೆ ಪುರಾವೆಗಳಿಲ್ಲ. ಇಲ್ಲಿ ನಡೆಯುತ್ತಿರುವ ಪ್ರದೋಷ ಪೂಜೆಯನ್ನು ಆ ಅರ್ಥದಲ್ಲಿ ಗ್ರಹಿಸಿರಬೇಕು. ದೇಗುಲದಲ್ಲಿ ಹಿಂದೂ ಧಾರ್ಮಿಕ ಪದ್ಧತಿಯ ಪ್ರಕಾರವೇ ಎಲ್ಲ ಪೂಜೆ ಪುನಸ್ಕಾರಗಳು ನಡೆಯುತ್ತಿವೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ.

ಉದಯವಾಣಿ ಪ್ರತಿನಿಧಿಯೊಡನೆ ಮಾತನಾಡಿದ ಶಾಸಕರು, ದೇಗುಲದ ಕಟ್ಟುಪಾಡುಗಳಿಗೆ ಅದರದೇ ಆದ ಮಹತ್ವವಿದೆ. ಧರ್ಮ ಪರಂಪರೆಯಂತೆ ಶ್ರದ್ಧಾ ಭಕ್ತಿಯಿಂದ ಅನುಷ್ಠಾನ ಗೊಳಿಸಲಾಗುತ್ತಿದೆ. ನಾನು ಶಾಸಕ ನಾಗುವ ಮೊದಲು ಕೊಲ್ಲೂರು ಕ್ಷೇತ್ರದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಾಗಿ ಸೇವೆ ಸಲ್ಲಿಸಿರುವ ಸಂದರ್ಭದಲ್ಲಿ ಸಲಾಂ ಮಂಗಳಾರತಿಯ ದಾಖಲೆ ಕಂಡುಬಂದಿಲ್ಲ. ಹಾಗಾಗಿ ರೂಢಿಯಲ್ಲಿರುವ ಪದಬಳಕೆಗೆ ಪ್ರಾಧಾನ್ಯ ಕೊಡುವ ಅಗತ್ಯವಿಲ್ಲ. ಪ್ರದೋಷ ಪೂಜೆ ಕೊಲ್ಲೂರು ಕ್ಷೇತ್ರದ ಪೂಜೆಗಳಲ್ಲಿ ಹೆಚ್ಚಿನ ಮಹತ್ವ ಪಡೆದಿದ್ದು, ಅದೇ ಹೆಸರನ್ನು ಬಳಸತಕ್ಕದ್ದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕೊಲ್ಲೂರು ದೇಗುಲ ಸನಾತನ ಧರ್ಮ ಸಂಸ್ಕೃತಿಯ ಪರಂಪರೆಯನ್ನು ಕಾಪಾಡಿಕೊಂಡು ಬಂದಿದೆ. ಇಲ್ಲಿ ಯಾವುದೇ ಲೋಪವಾಗದಂತೆ ಅರ್ಚಕರು ನಿಷ್ಠೆ ಹಾಗೂ ಭಕ್ತಿಯಿಂದ ದೈನಂದಿನ ಪೂಜೆ ನಡೆಸಿಕೊಂಡು ಬರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸಲಾಂ ಮಂಗಳಾರತಿ ಎಂಬ ಹೆಸರಿಗೆ ಮನ್ನಣೆ ನೀಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.