ದೇವರ ವಿಗ್ರಹ ಕೆತ್ತುವ ಮುಸ್ಲಿಮರಿಗೂ ನಿಷೇಧ ಹೇರುತ್ತೀರಾ? : ಎಚ್ ಡಿಕೆ
ವರ್ಷದೊಡಕಿನ ದಿನ ಯಾರೂ ಹಲಾಲ್ ನೋಡುವುದಿಲ್ಲ
Team Udayavani, Mar 30, 2022, 12:49 PM IST
ಬೆಂಗಳೂರು : ಬಿಜೆಪಿ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ” ವರ್ಷತೊಡಕಿನ ದಿನ ಮಾಂಸ ಖರೀದಿಸುವಾಗ ಹಲಾಲ್ ಮಾಡಿದ್ದೋ, ಅಲ್ಲವೋ ಎಂದು ಯಾರೂ ನೋಡುವುದಿಲ್ಲ” ಎಂದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಕೆಲವೊಂದು ಕಡೆ ಇವರೇ ವಿವಾದ ಹುಟ್ಟು ಹಾಕಿದ್ದಾರೆ. ಉಳಿದ ಕಡೆ ಸೌಹಾರ್ದ ವಾತಾವರಣ ಇದೆ .ಹಲಾಲ್ ವಿಚಾರ ಈಗ ಪ್ರಸ್ತಾಪ ಮಾಡುತ್ತಾರೆ.ಹಲಾಲ್ ಮಾಡಿದ್ದೋ, ಅಲ್ಲವೋ ಎಂಬುದನ್ನು ವರ್ಷದೊಡಕಿನಲ್ಲಿ ಯಾರೂ ನೋಡುವುದಿಲ್ಲ ಎಂದು ಅಭಿಪ್ರಾಯ ಪಟ್ಟರು.
ಹಳ್ಳಿಯಲ್ಲಿ ಹಲವು ವರ್ಷಗಳಿಂದ ಸಂಪ್ರದಾಯ ಮಾಡಿಕೊಂಡು ಬಂದಿದ್ದಾರೆ ಅವರಿಗೆ ತೊಂದರೆ ಕೊಡಬೇಡಿ ಎಂದರು.
ನಾನು ದಲಿತ, ಲಿಂಗಾಯತ, ಒಕ್ಕಲಿಗ ಎಂದು ಹೇಳಿಲ್ಲ.ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರು ಎಷ್ಟು ಸೂಕ್ಷ್ಮವಾಗಿ ಕೆಲಸ ಮಾಡಬೇಕು ಎಂಬುದು ಗೊತ್ತಿದೆ. 1 ಸಾವಿರ ಅರ್ಚಕರು ಇಂದು ರಾಮನಗರಕ್ಕೆ ಬಂದಿದ್ದಾರೆ.ಲೋಕಕಲ್ಯಾಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ನಮ್ಮ ಹಿಂದೂ ಧರ್ಮ ಸರ್ವೋ ಜನೋ ಸುಖಿನೋಭವಂತು ಎಂದು ಹೇಳುತ್ತದೆ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ, ಇದನ್ನ ಹಾಳು ಮಾಡಬೇಡಿ ಎಂದರು.
ಕೋಲಾರದ ಶಿವಾರಪಟ್ಟಣದಲ್ಲಿ 35 ವರ್ಷದಿಂದ ಮುಸ್ಲಿಂ ಸಮುದಾಯದ ಬಂಧುಗಳು ವಿಗ್ರಹ ಕೆತ್ತುತಿದ್ದಾರೆ. ಇವರನ್ನ ಯಾವಾಗ ಬಹಿಷ್ಕಾರ ಡುತ್ತೀರಿ ? ಸಭಾಧ್ಯಕ್ಷರ ಪೀಠದಲ್ಲಿ ಕುಳಿತು ನಮ್ಮ ಆರ್ ಎಸ್ ಎಸ್ ಅಂತಾರೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !