ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ : ಮನೆಯ ಮೇಲೆ ಬಾಗಿದ ವಿದ್ಯುತ್ ಕಂಬ
Team Udayavani, Mar 30, 2022, 6:12 PM IST
ಕೊಟ್ಟಿಗೆಹಾರ: ಬಣಕಲ್ ಕೊಟ್ಟಿಗೆಹಾರ ಸುತ್ತಮುತ್ತ ಬುಧವಾರ ಧಾರಾಕಾರ ಮಳೆಯಾಗಿದ್ದು ಬಣಕಲ್ನಲ್ಲಿ ಹೆದ್ದಾರಿ ಬದಿಯಲ್ಲಿ ಹಾಕಿದ ವಿದ್ಯುತ್ ಕಂಬ ಮನೆಯೊಂದರ ಮೇಲೆ ಬಾಗಿ ಬೀಳುವ ಸ್ಥಿತಿಯಲ್ಲಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನಲೆಯಲ್ಲಿ ಬಣಕಲ್ ಭಾಗದಲ್ಲಿ ರಸ್ತೆ ಬದಿಯಲ್ಲಿ ಹೊಸದಾಗಿ ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ಅವೈಜ್ಞಾನಿಕವಾಗಿ ವಿದ್ಯುತ್ ಕಂಬ ಅಳವಡಿಸಿರುವುದರಿಂದ ಕಂಬವೊಂದು ರಸ್ತೆ ಬದಿಯ ಪೌಲ್ಸನ್ ಎಂಬುವವರ ಮನೆಯ ಮೇಲೆ ಬಾಗಿ ನಿಂತು ಅಪಾಯ ಆಹ್ವಾನಿಸುವಂತಿದೆ.
ಈ ಭಾಗದಲ್ಲಿ ಮಳೆ ಹೆಚ್ಚು ಬೀಳುವುದರಿಂದ ಮಣ್ಣು ಸಡಿಲಗೊಂಡು ವಿದ್ಯುತ್ ಕಂಬಗಳು ಧರೆಗುರುಳುವ ಸಾಧ್ಯತೆಗಳು ಹೆಚ್ಚಿದ್ದು ವಿದ್ಯುತ್ ಕಂಬವನ್ನು ಅಳವಡಿಸುವಾಗ ಕಂಬದ ಕೆಳಭಾಗದಲ್ಲಿ ಸುತ್ತ ಕಾಂಕ್ರೇಟ್ ಹಾಕಿ ಕಂಬ ಅಳವಡಿಸಿದರೇ ಕಂಬ ಧರೆಗುರುಳುವುದು ತಪ್ಪುತ್ತದೆ. ಕೆಲ ಕಡೆಗಳಲ್ಲಿ ರಸ್ತೆ ಪಕ್ಕದ ದಿಬ್ಬದ ಮೇಲೆ ಕಂಬಗಳನ್ನು ಹಾಕಲಾಗಿದ್ದುಯ ತಗ್ಗಿನಲ್ಲಿರುವ ಮನೆ, ತೋಟಗಳ ಮೇಲೆ ಕಂಬ ಉರುಳುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಬದಿಯಲ್ಲಿ ಹಾಕಿರುವ ಕಂಬಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : “ದಿ ಕಾಶ್ಮೀರಿ ಫೈಲ್ಸ್” ಚಿತ್ರಕ್ಕೆ ನೀಡಿದ ಪ್ರೋತ್ಸಾಹ “ದಂಡಿ”ಗೂ ನೀಡಿ: ವಿಶಾಲ್ ರಾಜ್
ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟ್, ಬಾಳೂರು ಸೇರಿದಂತೆ ಹಲವು ಕಡೆ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಬೇಸಿಗೆಯ ತಾಪ ಜೋರಾಗಿದ್ದು ಮಳೆಯಿಂದ ತಂಪಿನ ವಾತಾವರಣ ಕಂಡು ಬಂತು. ಕಾಫಿ,ಕಾಳು ಮೆಣಸು, ಮತ್ತಿತರ ವಾಣಿಜ್ಯ ಬೆಳೆಗಳಿಗೆ ಮಳೆಯಿಂದ ಅನುಕೂಲವಾಗಿದ್ದು ರೈತರು ಮಳೆಯಿಲ್ಲದೇ ಕಂಗಾಲಾಗಿ ಬೆಳೆಗೆ ನೀರಾಯಿಸಲು ಪರದಾಡಿ ಸ್ಪ್ರಿಂಕ್ಲರ್ ಮೊರೆ ಹೋಗಿದ್ದರು. ಬುಧವಾರ ಸುರಿದ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು